ಕಾಂಗ್ರೆಸ್ ತನ್ನ ನಾಯಕತ್ವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು: ಶಶಿ ತರೂರ್ ಸಲಹೆ
Team Udayavani, Feb 24, 2020, 11:04 AM IST
ನವದೆಹಲಿ: ಪಕ್ಷ ‘ದಿಕ್ಕು ದೆಸೆ ಇಲ್ಲದೆ ಸಾಗುತ್ತಿದೆ’ ಎಂದು ಜನ ಭಾವಿಸುವ ಮೊದಲೇ ಕಾಂಗ್ರೆಸ್ ತನ್ನ ನಾಯಕತ್ವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಪಕ್ಷದ ಹಿರಿಯ ನಾಯಕ ಶಶಿ ತರೂರ್ ಸಲಹೆ ನೀಡಿದ್ದಾರೆ. ಹಾಗೇ ‘ದೀರ್ಘಾವಧಿ ಅಧ್ಯಕ್ಷ’ರ ಕುರಿತ ಅನಿಶ್ಚಿತತೆಯನ್ನು ಪರಿಹರಿಸುವುದು ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದಿದ್ದಾರೆ.
ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ಸಲಹೆ ನೀಡಿರುವ ತರೂರ್, ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯುವ ಕುರಿತು ರಾಹುಲ್ ಗಾಂಧಿಯೇ ನಿರ್ಧ ರಿಸಬೇಕು. ಒಂದೊಮ್ಮೆ ಹುದ್ದೆಯಿಂದ ಕೆಳಗಿಳಿಯುವ ಈ ಹಿಂದಿನ ನಿರ್ಧಾರದಿಂದ ಅವರು ಹಿಂದೆ ಸರಿಯದಿದ್ದರೆ, ಒಬ್ಬ ‘ಕ್ರಿಯಾ ಶೀಲ ಹಾಗೂ ಪೂರ್ಣಾವಧಿಯ ನಾಯಕ’ನನ್ನು ನೇಮಿಸಿ, ಪಕ್ಷ ಕಟ್ಟುವ ಕೆಲಸ ಮಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ.
‘ಒಡೆದಾಳುವ ನೀತಿ’ ಅನುಸರಿಸುತ್ತಿರುವ ಬಿಜೆಪಿಗೆ ದೇಶದಲ್ಲಿ ಕಾಂಗ್ರೆಸ್ ಒಂದೇ ಪರ್ಯಾಯ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಮುಖ್ಯವಾಗಿ ಪಕ್ಷದ ನಾಯಕತ್ವಕ್ಕೆ ಸಂಬಂಧಿಸಿದ ಕೆಲವು ನ್ಯೂನತೆಗಳನ್ನು ಸರಿಪಡಿಸಿ ಕೊಳ್ಳುವ ತುರ್ತು ಅಗತ್ಯವಿದೆ ಎಂದು ತರೂರ್ ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ, ವೈಯಕ್ತಿಕ ಅಹಂಗಳು ಹಾಗೂ ಮಹತ್ವಾಕಾಂಕ್ಷೆಗಳನ್ನು ಬಿಟ್ಟು, ಒಗ್ಗಟ್ಟಾಗುವುದರಿಂದಷ್ಟೇ ಕಾಂಗ್ರೆಸ್ ಮತ್ತೆ ಚೇತರಿಕೆ ಕಾಣಲು ಸಾಧ್ಯ ಎಂದು ಪಕ್ಷದ ಮತ್ತೂಬ್ಬ ನಾಯಕ ಜೈರಾಂ ರಮೇಶ್ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ
Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್ ಟವರ್ ಹತ್ತಿದ ಯುವಕ