Centre ಅಧಿಕಾರಕ್ಕೆ ಬಂದರೆ ಮೊದಲು ಜಾತಿ ಆಧಾರಿತ ಜನಗಣತಿ: ರಾಹುಲ್ ಗಾಂಧಿ
ಒಬಿಸಿ ಜನರ ನಿಖರ ಸಂಖ್ಯೆಯನ್ನು ತಿಳಿಯಬೇಕಾಗಿದೆ...
Team Udayavani, Sep 30, 2023, 6:38 PM IST
ಭೋಪಾಲ್: ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ದೇಶದ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಜನರ ನಿಖರ ಸಂಖ್ಯೆಯನ್ನು ತಿಳಿಯಲು ಜಾತಿ ಆಧಾರಿತ ಜನಗಣತಿ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಕಲಾಪಿಪಾಲ್ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಅಧಿಕಾರಕ್ಕೆ ಬಂದ ನಂತರ, ನಾವು ಮಾಡುವ ಮೊದಲ ಕೆಲಸವೆಂದರೆ ದೇಶದಲ್ಲಿ ಒಬಿಸಿಗಳ ನಿಖರ ಸಂಖ್ಯೆಯನ್ನು ತಿಳಿಯಲು ಜಾತಿ ಆಧಾರಿತ ಜನಗಣತಿ, ಏಕೆಂದರೆ ಅವರ ನಿಖರ ಸಂಖ್ಯೆ ಯಾರಿಗೂ ತಿಳಿದಿಲ್ಲ” ಎಂದರು.
ಕ್ಯಾಬಿನೆಟ್ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳು ಸೇರಿದಂತೆ ಕೇವಲ 90 ಅಧಿಕಾರಿಗಳು ದೇಶವನ್ನು ನಡೆಸುತ್ತಿದ್ದಾರೆ. ದೇಶದಲ್ಲಿ ನೀತಿಗಳು ಮತ್ತು ಕಾನೂನುಗಳನ್ನು ರೂಪಿಸುವಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರ ಪಾತ್ರವಿಲ್ಲ.ಚುನಾಯಿತ ಬಿಜೆಪಿ ಸದಸ್ಯರ ಬದಲಿಗೆ ಆರ್ಎಸ್ಎಸ್ ಮತ್ತು ಅಧಿಕಾರಿಗಳು ಕಾನೂನು ರೂಪಿಸುತ್ತಿದ್ದಾರೆ ಎಂದು ಗಾಂಧಿ ಆರೋಪಿಸಿದರು.