ಕೇಂದ್ರದ ಮೂರು ಕೃಷಿ ಕಾಯ್ದೆಗೆ ತಾತ್ಕಾಲಿಕ ತಡೆ , ಸಮಿತಿ ರಚನೆ: ಸುಪ್ರೀಂ ತೀರ್ಪು
ಇದೊಂದು ಸಾವು-ಬದುಕಿನ ವಿಷಯವಾಗಿದೆ. ನಮಗೆ ಕಾಯ್ದೆ ಬಗ್ಗೆಯೂ ಕಾಳಜಿ ಇದೆ
Team Udayavani, Jan 12, 2021, 1:37 PM IST
ನವದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆಯನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸುವುದಾಗಿ ಮಂಗಳವಾರ(ಜನವರಿ 12, 2021) ಸುಪ್ರೀಂಕೋರ್ಟ್ ತಿಳಿಸಿದ್ದು, ಅಲ್ಲದೇ ಮೂರು ವಿವಾದಿತ ಕೃಷಿ ಕಾಯ್ದೆ ಜಾರಿಗೆ ತಾತ್ಕಾಲಿಕವಾಗಿ ತಡೆ ನೀಡಿ ಮಹತ್ವದ ಆದೇಶ ನೀಡಿದೆ.
“ಇದೊಂದು ಸಾವು-ಬದುಕಿನ ವಿಷಯವಾಗಿದೆ. ನಮಗೆ ಕಾಯ್ದೆ ಬಗ್ಗೆಯೂ ಕಾಳಜಿ ಇದೆ, ಅದೇ ರೀತಿ ಪ್ರತಿಭಟನೆಯಿಂದಾಗುವ ಜೀವಹಾನಿ ಮತ್ತು ಆಸ್ತಿ ಹಾನಿ ಬಗ್ಗೆಯೂ ಕಳವಳ ಇದೆ. ಅದಕ್ಕಾಗಿ ಉತ್ತಮ ರೀತಿಯಲ್ಲಿ ಸಮಸ್ಯೆಯನ್ನು ಬಗೆಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಈ ಕಾಯ್ದೆಯನ್ನು ತಡೆ ಹಿಡಿಯುವ (ರದ್ದು) ಅಧಿಕಾರ ಕೂಡಾ ನಮಗಿದೆ” ಎಂದು ಸಿಜೆಐ ಎಸ್ ಎ ಬೋಬ್ಡೆ ತಿಳಿಸಿದರು.
ಮುಂದಿನ ಆದೇಶ ನೀಡುವವರೆಗೆ ಕೇಂದ್ರದ ಮೂರು ನೂತನ ಕೃಷಿ ಕಾಯ್ದೆಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಅಲ್ಲದೇ ನಾಲ್ವರು ಕೃಷಿ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸುವುದಾಗಿ ತಿಳಿಸಿದೆ. ಸಮಿತಿಯ ಸದಸ್ಯರು ಪ್ರತಿಭಟನಾಕಾರರು ಮತ್ತು ಕೇಂದ್ರದ ಜತೆ ಮಾತುಕತೆ ನಡೆಸಲಿದೆ ಎಂದು ಆದೇಶ ನೀಡಿದೆ.
ಸಮಿತಿ ಸುಪ್ರೀಂಕೋರ್ಟ್ ಗೆ ವರದಿಯನ್ನು ನೀಡಲಿದೆ. ಸಮಿತಿಗೆ ರೈತರು ಸಹಕಾರ ನೀಡಬೇಕು. ಆದರೆ ನ್ಯಾಯಾಂಗದ ಪ್ರಕ್ರಿಯೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಎಂದು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.
ಕೃಷಿ ಆರ್ಥಿಕ ತಜ್ಞ ಅಶೋಕ್ ಗುಲಾಟಿ, ಜಿತೇಂದ್ರ ಸಿಂಗ್ ಮಾನ್, ಅನಿಲ್ ಧನ್ವತ್ ಹಾಗೂ ಡಾ.ಪಿ.ಕೆ ಜೋಶಿ ಅವರನ್ನೊಳಗೊಂಡ ತಜ್ಞರ ಸಮಿತಿಯನ್ನು ಸುಪ್ರೀಂಕೋರ್ಟ್ ನೇಮಕ ಮಾಡಿದೆ.
ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ರೈತ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ಜನವರಿ 26 ಗಣರಾಜ್ಯೋತ್ಸವದಂದು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕಟರ್ ರಾಲಿಯನ್ನು ಕೈಬಿಡುವಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ