ಮೋದಿ ಸರಕಾರದಿಂದ ಆಧಾರ್ ಕಡ್ಡಾಯ ಅಸ್ತ್ರ : ರಾಹುಲ್ ಟೀಕೆ
Team Udayavani, Jan 18, 2018, 10:57 AM IST
ಹೊಸದಿಲ್ಲಿ : ನಾಗರಿಕರ ಅಧಿಕಾರವನ್ನು ಕಿತ್ತುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ಆಧಾರ್ ಅನ್ನು ಕಡ್ಡಾಯ ಅಸ್ತ್ರವನ್ನಾಗಿ ಬಳಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಯುಪಿಎ ಸರಕಾರದಡಿ ಆಧಾರ್, ನಾಗರಿಕರನ್ನು ಶಕ್ತಗೊಳಿಸುವ ಸ್ವಯಂ ಪ್ರೇರಣೆಯ ಉಪಕರಣವಾಗಿತ್ತು. ಆದರೆ ಎನ್ಡಿಎ ಸರಕಾರದಡಿ ಆಧಾರ್ ನಾಗರಿಕರನ್ನು ನಿಶ್ಶಕ್ತೀಕರಿಸುವ ಕಡ್ಡಾಯ ಅಸ್ತ್ರವಾಗಿ ಬಳಕೆಯಾಗುತ್ತಿದೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಆಧಾರ್ ನಂಬರನ್ನು ಬಳಕೆದಾರರು ತಮ್ಮ ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ಮತ್ತು ಸರಕಾರಿ ಯೋಜನೆಗಳಿಗೆ ಜೋಡಿಸುವುದು ಜನರಿಗೆ ಸಂವಿಧಾನದತ್ತ ಖಾಸಗಿತನದ ಮೂಲಭೂತ ಹಕ್ಕಿನ ಉಲ್ಲಂಘನೆ ಆಗುತ್ತದೆಯೇ ಎಂಬುದನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಎತ್ತಿಕೊಂಡಿರುವ ನಡುವೆಯೇ ರಾಹುಲ್ ಗಾಂಧಿ ಆಧಾರ್ ಕುರಿತ ಮೋದಿ ಸರಕಾರದ ನಿಲುವನ್ನು ಕಟುವಾಗಿ ಟೀಕಿಸಿದ್ದಾರೆ.
ನಿನ್ನೆ ಬುಧವಾರದ ವಿಚಾರಣೆಯಲ್ಲಿ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ಆಧಾರ್ನಿಂದ ಪೌರ ಹಕ್ಕುಗಳ ಅವಸಾನವಾಗುತ್ತದೆ ಎಂದು ವಾದಿಸಿದ್ದಾರೆ. ವಿಚಾರಣೆ ಇಂದು ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ