ಬಿಹಾರದಲ್ಲಿ ರಣಬಿಸಿಲ ತಾಪಕ್ಕೆ 120ಕ್ಕೂ ಹೆಚ್ಚು ಮಂದಿ ಬಲಿ, ಜೂನ್ 19ರವರೆಗೆ ಶಾಲೆ ಬಂದ್
Team Udayavani, Jun 17, 2019, 12:50 PM IST
ಪಾಟ್ನ: ದೇಶದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ಕಳೆದ ಕೆಲವು ವಾರಗಳಿಂದ ಬಿಹಾರದಲ್ಲಿ ಉಷ್ಣಾಂಶ 45.8 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಬಿಸಿ ಗಾಳಿಯ ಪರಿಣಾಮ ಒಂದೇ ದಿನದಲ್ಲಿ(ಶನಿವಾರ) 52 ಮಂದಿ ಸಾವನ್ನಪ್ಪಿದ್ದು, ಈವರೆಗೆ ಒಟ್ಟು ಬಿಸಿಲ ಝಳಕ್ಕೆ ಸಾವನ್ನಪ್ಪಿದ್ದವರ ಸಂಖ್ಯೆ 120ಕ್ಕೆ ಏರಿದೆ ಎಂದು ವರದಿ ತಿಳಿಸಿದೆ.
ಬಿಹಾರದಲ್ಲಿನ ಬಿಸಿಲ ಝಳ ದಾಖಲೆ ಮಟ್ಟದ್ದಾಗಿದೆ. ದೇಶದ ಕೆಲವೆಡೆ ಮಳೆಯಾಗುತ್ತಿದ್ದರೆ, ಹಲವೆಡೆ ಮೋಡ ಕವಿದ ವಾತಾವರಣವಿದ್ದರೆ, ಬಿಹಾರದಲ್ಲಿ ರಣಬಿಸಿಲಿಗೆ 120ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ವಿವರಿಸಿದೆ.
ಬಿಸಿಲ ತಾಪಕ್ಕೆ ಕಂಗೆಟ್ಟ ಹಿನ್ನೆಲೆಯಲ್ಲಿ ಜೂನ್ 23ರವರೆಗೆ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ. ಔರಂಗಾಬಾದ್, ಗಯಾ ಪ್ರದೇಶದಲ್ಲಿ ಹೆಚ್ಚಿನ ಮಂದಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಮೃತ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಸೋಮವಾರ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಅಲಹಾಬಾದ್ ನಲ್ಲಿ ಉಷ್ಣಾಂಶ 45.03 ಡಿಗ್ರಿ ಸೆಲ್ಸಿಯಸ್ ಇದ್ದು, ಸುಲ್ತಾನ್ ಪುರ್, ವಾರಣಾಸಿ, ಬಸ್ತಿಯಲ್ಲಿ ಉಷ್ಣಾಂಶ ದಾಖಲೆ ಮಟ್ಟದಲ್ಲಿದೆ(45ಡಿಗ್ರಿ ಸೆಲ್ಸಿಯಸ್) ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ