ಆರ್ಜೆಡಿಯೊಂದಿಗಿನ ಮೈತ್ರಿ ಮುರಿದು ಬಿಹಾರ ಶೀಘ್ರ ಜೆಡಿಯು ಮುಕ್ತ: ಸುಶೀಲ್ ಮೋದಿ
ಜೆಡಿಯು ನಾಶ ಮಾಡಲು ಬಿಜೆಪಿ ನಿರಂತರ ಪ್ರಯತ್ನ: ಉಪೇಂದ್ರ ಕುಶ್ವಾಹ
Team Udayavani, Sep 3, 2022, 2:41 PM IST
ನವದೆಹಲಿ : ”ಶೀಘ್ರದಲ್ಲೇ ನಾವು ಬಿಹಾರದಲ್ಲಿ ಜೆಡಿಯು-ಆರ್ಜೆಡಿ ಮೈತ್ರಿಯನ್ನು ಮುರಿದು ರಾಜ್ಯವನ್ನು ಜೆಡಿಯು ಮುಕ್ತಗೊಳಿಸುತ್ತೇವೆ” ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಸಂಸದ ಸುಶೀಲ್ ಮೋದಿ ಶನಿವಾರ ಹೇಳಿಕೆ ನೀಡಿದ್ದಾರೆ.
ಎಎನ್ ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ”ಮಣಿಪುರದಲ್ಲಿ ಐದು ಜೆಡಿಯು ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ರಾಜ್ಯವು ಜೆಡಿಯು ಮುಕ್ತವಾಗಿದೆ. ಆ ಶಾಸಕರು ಎನ್ಡಿಎಯಲ್ಲಿ ಉಳಿಯಲು ಬಯಸಿದ್ದರು” ಎಂದರು.
”ಹೋರ್ಡಿಂಗ್ಗಳು ಮತ್ತು ಪೋಸ್ಟರ್ಗಳನ್ನು ಹಾಕುವ ಮೂಲಕ ಯಾರೂ ಪ್ರಧಾನಿಯಾಗಲು ಸಾಧ್ಯವಿಲ್ಲ” ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಟಾಂಗ್ ನೀಡಿದರು.
ಪಕ್ಷವನ್ನು ನಾಶಕ್ಕೆ ಯತ್ನ
”ನಮ್ಮ ಪಕ್ಷವನ್ನು ನಾಶ ಮಾಡಲು ಬಿಜೆಪಿ ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ಹೇಳುತ್ತಿದ್ದೆವು. ಎನ್ಡಿಎ ಜೊತೆ ಇರುವಾಗ ನಾವು ಅದನ್ನು ಅನುಭವಿಸಿದ್ದೇವೆ ಮತ್ತು ಅದು ಇಂದು ಸಾಬೀತಾಗಿದೆ. ಇಂದು ನಾವು ಅವರ ವಿರುದ್ಧ ಇದ್ದೇವೆ ಹಾಗಾಗಿ ಅವರ ದಾಳಿ ಹೆಚ್ಚಾಗುತ್ತದೆ, ಆದರೆ ಎದುರಿಸಲು ನಾವು ಸಿದ್ಧ” ಎಂದು ಜೆಡಿಯು ನಾಯಕ ಉಪೇಂದ್ರ ಕುಶ್ವಾಹ ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು