ಅಯೋಧ್ಯೆ ವಿಚಾರಣೆ ಕೊನೆ ದಿನ ಹೈಡ್ರಾಮಾ; ಸುಪ್ರೀಂನಲ್ಲಿ ಹಿರಿಯ ವಕೀಲ ಧವನ್ ಮಾಡಿದ್ದೇನು?
ರಾಮಜನ್ಮಭೂಮಿ ನಕ್ಷೆಯನ್ನು ಪುರಾವೆಯನ್ನಾಗಿ ಕೋರ್ಟ್ ಗೆ ಸಲ್ಲಿಸಲು...
Team Udayavani, Oct 16, 2019, 3:07 PM IST
ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬ್ರಿ ಕಟ್ಟಡ ಭೂ ವಿವಾದ ಪ್ರಕರಣದ ವಿಚಾರಣೆಯ ಕೊನೆಯ ದಿನವಾದ ಬುಧವಾರ ಸುಪ್ರೀಂಕೋರ್ಟ್ ನಲ್ಲಿ ಹೈಡ್ರಾಮಾ, ನಾಟಕೀಯ ಬೆಳವಣಿಗೆಯಲ್ಲಿ ಮುಸ್ಲಿಂ ಸಂಘಟನೆಗಳ ಪರ ವಕೀಲ ರಾಜೀವ್ ಧವನ್ ರಾಮಜನ್ಮಭೂಮಿ ನಕ್ಷೆಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಮುಸ್ಲಿಂ ವಕ್ಫ್ ಬೋರ್ಡ್ ಪರ ವಕೀಲರಾಗಿ ರಾಜೀವ್ ಧವನ್ ವಾದ ಮಂಡಿಸಲು ಕೋರ್ಟ್ ಗೆ ಹಾಜರಾಗಿದ್ದರು. ಏತನ್ಮಧ್ಯೆ ಆಲ್ ಇಂಡಿಯಾ ಹಿಂದೂ ಮಹಾಸಭಾದ ವಕೀಲರಾದ ವಿಕಾಸ್ ಸಿಂಗ್ ಅವರು ಕುನಾಲ್ ಕಿಶೋರ್ ಪ್ರಕಟಣೆಯ ಪುಸ್ತಕದಲ್ಲಿರುವ ರಾಮಜನ್ಮಭೂಮಿ ನಕ್ಷೆಯನ್ನು ಪುರಾವೆಯನ್ನಾಗಿ ಕೋರ್ಟ್ ಗೆ ಸಲ್ಲಿಸಲು ಮುಂದಾಗಿದ್ದರು.
ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಜನ್ಮ ಸ್ಥಾನ ಇತ್ತು ಎಂಬುದಕ್ಕೆ ಪುರಾವೆಯಾಗಿ ವಿಕಾಸ್ ನಕ್ಷೆಯನ್ನು ನೀಡಿದ್ದರು. ಆಗ ಏಕಾಏಕಿ ಮುಸ್ಲಿಂ ಸಂಘಟನೆ ಪರ ವಕೀಲ ರಾಜೀವ್ ಧವನ್ ಅವರು ನಕ್ಷೆಯನ್ನು ಹರಿದು ಹಾಕಿದ್ದರು.
ಸುಪ್ರೀಂಕೋರ್ಟ್ ಈ ಪುಸ್ತಕದಲ್ಲಿರುವ ನಕ್ಷೆಯನ್ನು ಪುರಾವೆಯನ್ನಾಗಿ ನಂಬಬಾರದು ಎಂದು ವಕೀಲ ರಾಜೀವ್ ಧವನ್ ಅವರು ವಿನಂತಿಸಿಕೊಂಡಿದ್ದರು. ನಿಮಗೆ ಈಗ ಏನು ಬೇಕಾಗಿದೆ ಎಂದು ಸಿಜೆಐ ರಂಜನ್ ಗೋಗೊಯಿ ಪ್ರಶ್ನಿಸಿದ್ದು, ನೀವು ಮತ್ತೆ ಇದನ್ನು ಹರಿಯುತ್ತೀರಾ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ನೀವು(ಧವನ್) ಶಿಷ್ಟಾಚಾರವನ್ನು ಹಾಳುಗೆಡುವುತ್ತಿದ್ದೀರಿ. ಶಿಷ್ಟಾಚಾರ ಪಾಲಿಸದೇ ಹೋದರೆ, ಇದೇ ರೀತಿಯಲ್ಲಿ ಪ್ರಕ್ರಿಯೆ ಮುಂದುವರಿದರೆ ನಾವು ನಮ್ಮ ಸ್ಥಾನದಿಂದ ಎದ್ದು ಹೋಗಬೇಕಾಗುತ್ತದೆ ಎಂದು ಸಿಜೆಐ ಎಚ್ಚರಿಕೆ ನೀಡಿರುವು ಪ್ರಸಂಗ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್