ಪ.ಬಂ. ಬಿಜೆಪಿ ಮುಖ್ಯಸ್ಥ ಘೋಷ್ ಮೇಲೆ ಟಿಎಂಸಿ ದಾಳಿ; ಕಾರು ಧ್ವಂಸ
Team Udayavani, Sep 17, 2018, 4:12 PM IST
ಕೋಲ್ಕತ : ಪಶ್ಚಿಮ ಬಂಗಾಲದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮತ್ತು ಅವರ ಬೆಂಬಲಿಗರ ಮೇಲೆ ಪೂರ್ವ ಮಿಡ್ನಾಪುರದಲ್ಲಿ ಇಂದು ಸೋಮವಾರ ದಾಳಿ ನಡೆಸಲಾಗಿದ್ದು ಇದು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತ ಕೃತ್ಯವೆಂದು ಆರೋಪಿಸಲಾಗಿದೆ.
ವರದಿಗಳ ಪ್ರಕಾರ ಪಶ್ಚಿಮ ಬಂಗಾಲ ಬಿಜೆಪಿ ಮುಖ್ಯಸ್ಥ ಮತ್ತು ಇತರ ಕನಿಷ್ಠ ಐವರು ಈ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಘೋಷ್ ಅವರ ಕಾರಿಗೆ ಕೂಡ ದಾಳಿಕೋರರು ಹಾನಿಮಾಡಿದ್ದಾರೆ.
ತಾನು ಸಾರ್ವಜನಿಕ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ತನ್ನ ಮೇಲೆ ಈ ದಾಳಿ ನಡೆದಿದೆ ಎಂದು ಘೋಷ್ ಹೇಳಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ.
ಸಭಾ ತಾಣಕ್ಕೆ ಹೋಗುತ್ತಿದ್ದ ಘೋಷ್ ಅವರ ಜತೆಗೆ ಹೋಗಲು ಬಿಜೆಪಿ ಸದಸ್ಯರು ಮೋಟಾರ್ ಸೈಕಲ್ ರಾಲಿಯೊಂದನ್ನು ಏರ್ಪಡಿಸಿದ್ದರು.
ದಾಳಿಕೋರರು ರಾಲಿಯಲ್ಲಿ ಭಾಗವಹಿಸಿದವರ ಮೇಲೆ ಕೂಡ ದಾಳಿ ಮಾಡಿದ್ದಾರೆ. ಬಿಜೆಪಿ ಮುಖ್ಯಸ್ಥರು ಮತ್ತು ಅವರ ಬೆಂಬಲಿಗರ ಮೇಲೆ ದಾಳಿಕೋರರು ಕಲ್ಲೆಸೆತ ನಡೆಸಿದ್ದಾರೆ.
ಈ ದಾಳಿಗೆ ಕಾಂಠಿ ಕ್ಷೇತ್ರದ ಟಿಎಂಸಿ ಸಂಸದ ದ್ವಿವೇಂದು ಅಧಿಕಾರಿ ಅವರೇ ಕಾರಣ ಎಂದು ಘೋಷ್ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಅಧಿಕಾರಿ ಅಲ್ಲಗಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್