ಪ.ಬಂ. ಬಿಜೆಪಿ ಶಾಸಕ ಶಂಕಾಸ್ಪದ ಸಾವು
ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ; ಸಿಬಿಐ ತನಿಖೆಗೆ ಕುಟುಂಬ ಆಗ್ರಹ
Team Udayavani, Jul 14, 2020, 9:49 AM IST
ಘಟನೆಗೆ ಟಿಎಂಸಿ ಸರಕಾರವೇ ಕಾರಣ: ನಡ್ಡಾ ಟೀಕೆ
12 ತಾಸು ಉತ್ತರ ದಿನಾಜ್ಪುರ ಬಂದ್ಗೆ ಬಿಜೆಪಿ ಕರೆ
ರಾಯ್ ಜೇಬಲ್ಲಿತ್ತು ಆತ್ಮಹತ್ಯಾ ನೋಟ್
ಕೋಲ್ಕತಾ: ಪಶ್ಚಿಮ ಬಂಗಾಲದ ಉತ್ತರ ದಿನಾಜ್ಪುರದ ಹೆಮ್ಜಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ದೇವೇಂದ್ರನಾಥ ರಾಯ್ (60) ಮೃತ ದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಕ್ಷೇತ್ರದ ಬಿಂದಾಲ್ ಎಂಬ ಗ್ರಾಮದ ಅಂಗಡಿಯೊಂದರ ಜಗಲಿಯಲ್ಲಿ ಮೃತದೇಹ ಸಿಕ್ಕಿದೆ. ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ನಡುವಿನ ಜಗಳದ ನಡುವೆಯೇ ಈ ಘಟನೆ ನಡೆದಿರುವುದು ಎರಡೂ ಪಕ್ಷಗಳ ತಿಕ್ಕಾಟಕ್ಕೆ ಮತ್ತಷ್ಟು ಕಿಚ್ಚು ಹಚ್ಚುವ ಸಾಧ್ಯತೆ ಇದೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಈ ಘಟನೆಯನ್ನು ಖಂಡಿಸಿದ್ದು, ಇದೊಂದು ಕೊಲೆ. ಟಿಎಂಸಿ ಸರಕಾರವೇ ಘಟನೆಗೆ ಕಾರಣ ಎಂದು ದೂರಿದ್ದಾರೆ.
“ರವಿವಾರ ಮಧ್ಯ ರಾತ್ರಿ ಕೆಲ ವ್ಯಕ್ತಿಗಳು ನಮ್ಮ ಮನೆಗೆ ಬಂದು ಶಾಸಕ ದೇವೇಂದ್ರನಾಥ್ ರಾಯ್ ಅವರನ್ನು ಕರೆದುಕೊಂಡು ಹೋದರು’ ಎಂದು ಕುಟುಂಬದ ಸದಸ್ಯರೊಬ್ಬರು ತಿಳಿಸಿದ್ದಾರೆ. ದೇವೇಂದ್ರ ನಾಥ ರಾಯ್ ಜೇಬಿನಲ್ಲಿ ಡೆತ್ನೋಟ್ ದೊರೆತಿದೆ. ಅವರ ಸಾವಿಗೆ ಇಬ್ಬರ ಹೆಸರನ್ನು ನಮೂದಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಶಾಸಕ ರಾಯ್ ಕುಟುಂಬ ಪ್ರಕರಣದ ಬಗ್ಗೆ ಸಿಬಿಐನಿಂದಲೇ ತನಿಖೆಯಾಗಬೇಕು ಎಂದು ಒತ್ತಾ ಯಿಸಿದೆ. ರಾಜಕೀಯವಾಗಿಯೂ ಈ ಪ್ರಕರಣ ಕಾವು ಪಡೆಯಲಾರಂಭಿಸಿದೆ. “ಟಿಎಂಸಿ ಗೂಂಡಾ ಗಳಿಂದಲೇ ಈ ಹತ್ಯೆ ನಡೆದಿದೆ. ಮಂಗಳವಾರ ಬೆಳಗ್ಗೆ 6 ಗಂಟೆಯಿಂದ 12 ಗಂಟೆಗಳ ಕಾಲ ಉತ್ತರ ದಿನಾಜ್ಪುರ ಬಂದ್ಗೆ ಕರೆ ನೀಡಿದ್ದೇವೆ’ ಎಂದು ಬಿಜೆಪಿ ಹೇಳಿದೆ.
ಹೆಮ್ಜಾಬಾದ್ ಮೀಸಲು ಕ್ಷೇತ್ರದಿಂದ ಸಿಪಿಎಂ ಅಭ್ಯರ್ಥಿಯಾಗಿ ದೇವೇಂದ್ರನಾಥ್ ರಾಯ್ ಗೆಲುವು ಸಾಧಿಸಿದ್ದರು. 2016ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಇದೇ ಕ್ಷೇತ್ರದಿಂದ ಶಾಸಕರಾಗಿ ಮರು ಆಯ್ಕೆಯಾಗಿದ್ದರು. ಘಟನೆ ಕುರಿತು ಬಿಜೆಪಿ ಅಧ್ಯಕ್ಷ, ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪ್ರತಿಕ್ರಿ ಯಿ ಸಿದ್ದು, ಇದು ಕೊಲೆಯಾಗಿರುವ ಶಂಕೆಯಿದೆ. ಬಂಗಾಲ ಗೂಂಡಾ ರಾಜ್ಯವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲ ವಾಗಿದೆ ಎಂದು ಕಿಡಿಕಾರಿದ್ದಾರೆ.
ಪಶ್ಚಿಮ ಬಂಗಾಲ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಪ್ರತಿಕ್ರಿಯೆ ನೀಡಿ ಗೃಹ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಬೇಕು. ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸಿ ಸತ್ಯಾಂಶ ಹೊರ ಬರ ಬೇಕೆಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!