ನಾರದ ಸ್ಟಿಂಗ್ ಪ್ರಕರಣ : ಟಿಎಂಸಿ ಮುಖಂಡರಿಗೆ ಜಾಮೀನು ನೀಡಿದ ಸಿಬಿಐ ನ್ಯಾಯಾಲಯ
Team Udayavani, May 17, 2021, 8:18 PM IST
ನವ ದೆಹಲಿ : ನಾರದ ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ನಾಲ್ವರು ಟಿಎಂಸಿ ಮುಖಂಡರಿಗೆ ಸೋಮವಾರ (ಮೇ 17) ಸಂಜೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.
ಕೋಲ್ಕತ್ತಾದ ಬ್ಯಾಂಕ್ ಶಾಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗಿದ್ದು, ಸಿಬಿಐ ವಿಶೇಷ ನ್ಯಾಯಾಧೀಶರಾದ ಅನುಪಮ್ ಮುಖರ್ಜಿ ಅವರು ಮಂತ್ರಿಗಳಾದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್, ಶಾಸಕ ಮದನ್ ಮಿತ್ರ ಮತ್ತು ಮಾಜಿ ಸಚಿವ ಸೋವನ್ ಚಟರ್ಜಿ ಅವರಿಗೆ ಜಾಮೀನು ನೀಡಿದ್ದಾರೆ.
ಇದನ್ನೂ ಓದಿ : ಆಧುನಿಕ ಕೃಷಿಯಲ್ಲಿ ಸ್ಮಾರ್ಟ್ ತಂತ್ರಜ್ಞಾನಗಳ ಬಳಕೆ
ನಾಲ್ವರನ್ನೂ ಕೂಡ ಇಂದು(ಸೋಮವಾರ, ಮೇ.17) ಬೆಳಿಗ್ಗೆ ತಮ್ಮ ಮನೆಗಳಿಂದ ಬಂಧಿಸಿದ ನಂತರ ನಿಜಾಮ್ ಅರಮನೆಯಲ್ಲಿರುವ ಸಿಬಿಐ ಕಚೇರಿಯಲ್ಲಿ ಇರಿಸಲಾಗಿತ್ತು.
ಕೋಲ್ಕತ್ತದಾ ಬ್ಯಾಂಕ್ ಶಾಲ್ ನ್ಯಾಯಾಲಯದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನಂತರ ಜಾಮೀನು ನೀಡಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದಕ್ಕೂ ಮೊದಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಿಬಿಐ ಕಚೇರಿಯ ಎದುರಿಗೆ ಪಕ್ಷದ ನಾಲ್ವರು ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.
ಇನ್ನು, ಟಿಎಂಸಿ ಪಕ್ಷದ ಬೆಂಬಲಿಗರು ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಬಂಧನವನ್ನು ವಿರೋಧಿಸಿ ಸಿಬಿಐ ಕಚೇರಿಯ ಹೊರಗೆ ಭದ್ರತಾ ಸಿಬ್ಬಂದಿಗೆ ಕಲ್ಲು ತೂರಾಟ ಮಾಡಿದರು. ಹುಗ್ಲಿ, ಉತ್ತರ 24 ಪರಗಣ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಪ್ರತಿಭಟನಾಕಾರರು ಟೈರ್ ಗಳನ್ನು ಸುಟ್ಟು ರಸ್ತೆಗಳನ್ನು ತಡೆ ಹಿಡಿದಿರುವ ಘಟನೆಯೂ ನಡೆಯಿತು.
ಇದನ್ನೂ ಓದಿ : ಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಿಸಲು ಸರ್ಕಾರ ಏನನ್ನೂ ಮಾಡ್ತಿಲ್ಲ : ಉಗ್ರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ