ಲಾಟರಿ ಅದೃಷ್ಟ-ರಾತ್ರೋ ರಾತ್ರಿ ಕೋಟ್ಯಧಿಪತಿಯಾದ ಅಜ್ಜ, ರಕ್ಷಣೆ ಕೋರಿ ಪೊಲೀಸರ ಮೊರೆ!

ಬಿಸ್ವಾಸ್ ಮನೆಗೆ ಬಂದು ಬಂಪರ್ ಬಹುಮಾನ ಬಂದ ವಿಷಯ ತಿಳಿಸಿದಾಗ ನಂಬಲೂ ಸಾಧ್ಯವಾಗಲಿಲ್ಲ

Team Udayavani, Jan 3, 2020, 5:55 PM IST

Lottary-Prize

ಕಾಲ್ನಾ(ಪಶ್ಚಿಮಬಂಗಾಳ):ತಮ್ಮ ಪಾಡಿಗೆ ಇದ್ದ 70ವರ್ಷದ ಇಂದ್ರ ನಾರಾಯಣ್ ಸೇನ್ ದಿಢೀರ್ ಆಗಿ ಎಲ್ಲರ ಗಮನ ಸೆಳೆದುಬಿಟ್ಟಿದ್ದರು. ಅದಕ್ಕೆ ಕಾರಣವಾಗಿದ್ದು ಅವರ ಅದೃಷ್ಟ! ಆದರೆ ಇದೀಗ ಸೇನ್ ಅವರು ರಕ್ಷಣೆ ಕೊಡಿ ಎಂದು ಪೊಲೀಸರ ಮೊರೆ ಹೋಗಿರುವ ಘಟನೆ ಪಶ್ಚಿಮಬಂಗಾಳದ ಕಾಲ್ನಾದಲ್ಲಿ ನಡೆದಿದೆ.

ಭಾನುವಾರ ಇಂದ್ರ ನಾರಾಯಣ್ ಸೇನ್ ಅವರಿಗೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಬಂಪರ್ ಲಾಟರಿ ಬಹುಮಾನ ಬಂದಿತ್ತು. ಮೂರು ದಿನಗಳ ಬಳಿಕ ಸೇನ್ ಅವರು ಕಾಲ್ನಾ ಪೊಲೀಸ್ ಠಾಣೆಗೆ ಆಗಮಿಸಿ ಠಾಣಾಧಿಕಾರಿ ರಾಕೇಶ್ ಸಿಂಗ್ ಅವರ ಬಳಿ ಭದ್ರತೆ ನೀಡುವಂತೆ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ರಾತ್ರಿ ಬೆಳಗಾಗುವುದರೊಳಗೆ ಕೋಟ್ಯಧಿಪತಿಯಾದ ತನಗೀಗ ಮನೆಯಿಂದ ಹೊರ ಹೋಗಲು ಭಯವಾಗುತ್ತಿದೆ. ಹೀಗಾಗಿ ತನಗೆ ರಕ್ಷಣೆ ನೀಡಬೇಕೆಂದು ಕೋರಿ ಸೇನ್ ಮನವಿ ಮಾಡಿಕೊಂಡಿದ್ದಾರೆಂದು ವರದಿ ವಿವರಿಸಿದೆ.

ಕೊಳವೆ ಬಾವಿ ಮಾಜಿ ಆಪರೇಟರ್ ಆಗಿರುವ ಸೇನ್ ಸುಮಾರು ಹತ್ತು ವರ್ಷಗಳ ಹಿಂದೆಯೇ ನಿವೃತ್ತಿಯಾಗಿದ್ದರು. ಪಶ್ಚಿಮ ಬರ್ದ್ವಾನ್ ದ ಕಾಲ್ನಾದ ಸಾಹಾಪಾರಾ ಗ್ರಾಮದಲ್ಲಿರುವ ಹಳೇ ಮನೆಯಲ್ಲಿ ಸೇನ್ ವಾಸವಾಗಿದ್ದು, ತಿಂಗಳಿಗೆ ಹತ್ತು ಸಾವಿರ ರೂಪಾಯಿ ಪಿಂಚಣಿ ಪಡೆಯುತ್ತಿದ್ದಾರೆ. ಭಾನುವಾರ ನಾಗಲ್ಯಾಂಡ್ ರಾಜ್ಯದ ಲಾಟರಿ ಟಿಕೆಟ್ ವೊಂದನ್ನು ಖರೀದಿಸಿದ್ದರು. ತಾನು ಅದರ ಫಲಿತಾಂಶವನ್ನೂ ನೋಡಲು ಹೋಗಿರಲಿಲ್ಲವಾಗಿತ್ತು ಎಂದು ಸೇನ್ ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದಾರೆ.

ಸಿದ್ದೇಶ್ವರಿ ಲಾಟರಿ ಸೆಂಟರ್ ಮಾಲೀಕ ಮಿಂಟು ಬಿಸ್ವಾಸ್ ಈ ಲಾಟರಿಯನ್ನು ಸೇನ್ ಗೆ ಮಾರಾಟ ಮಾಡಿದ್ದರು. ಎಲ್ಲರ ಚಿತ್ತ ಫಲಿತಾಂಶದ ಮೇಲೆ ನೆಟ್ಟಿದ್ದು, ಭಾನುವಾರ ರಾತ್ರಿ 8ಗಂಟೆಗೆ ಫಲಿತಾಂಶ ಘೋಷಣೆಯಾಗಿತ್ತು. ಕೊನೆಗೆ ಸೇನ್ ಜಾಕ್ ಪಾಟ್ ಹೊಡೆದಿರುವುದು ತಿಳಿದು, ತನ್ನ ಲಾಟರಿ ಮಾರಾಟದ ಸಣ್ಣ ಅಂಗಡಿಯನ್ನು ಹೂಗಳಿಂದ ಅಲಂಕರಿಸಿ ಬಿಸ್ವಾಸ್ ಎಲ್ಲರಿಗೂ ಸಿಹಿ ತಿಂಡಿ ಹಂಚಿದ್ದರು. ನಂತರ ಸೇನ್ ಅವರನ್ನು ಹುಡುಕಿ ಬಂಪರ್ ಬಹುಮಾನ ಪಡೆದಿರುವ ವಿಷಯ ತಿಳಿಸಿದ್ದರು.

ಬಿಸ್ವಾಸ್ ಮನೆಗೆ ಬಂದು ಬಂಪರ್ ಬಹುಮಾನ ಬಂದ ವಿಷಯ ತಿಳಿಸಿದಾಗ ನಂಬಲೂ ಸಾಧ್ಯವಾಗಲಿಲ್ಲ ಎಂದು ಸೇನ್ ತಿಳಿಸಿದ್ದಾರೆ. ಕೊನೆಗೆ ಸೇನ್ ಅವರನ್ನು ಜತೆಗೆ ಕರೆದುಕೊಂಡು ಬಂದ ಬಿಸ್ವಾಸ್ ಫಲಿತಾಂಶವನ್ನು ಪರಿಶೀಲಿಸಿದ ನಂತರವೇ ತನಗೆ ಜಾಕ್ ಪಾಟ್ ಹೊಡೆದಿರುವುದನ್ನು ನಂಬಿದ್ದೆ ಎಂದು ಸೇನ್ ತಿಳಿಸಿದ್ದಾರೆ.

ಈ ವಿಷಯ ಎಲ್ಲರ ಜತೆ ಹಂಚಿಕೊಳ್ಳಲು ಭಯವಾಗಿತ್ತು. ನಾನು ಯಾವತ್ತೂ ಇಷ್ಟೊಂದು ದೊಡ್ಡ ಮೊತ್ತ ಕಂಡವನಲ್ಲ. ಆದರೆ ಈ ವಿಷಯ ಅಷ್ಟರಲ್ಲಿಯೇ ಜಗಜ್ಜಾಹೀರಾಗಿತ್ತು. ಲಾಟರಿ ಅಂಗಡಿ ಮಾಲೀಕ ಬಿಸ್ವಾಸ್ ಕೂಡಾ ಸೇನ್ ಹೆಸರು ಹೇಳುವ ಮೂಲಕ ವಿಷಯ ಎಲ್ಲರಿಗೂ ತಿಳಿಯುವಂತಾಗಿತ್ತು. ಇದೀಗ ತನಗೆ ಮನೆಯಿಂದ ಹೊರಹೋಗಲು ಭಯವಾಗುತ್ತಿದ್ದು, ತನಗೆ ರಕ್ಷಣೆ ಕೊಡಬೇಕೆಂದು ಕೋರಿ ಪೊಲೀಸರಿಗೆ ಮನವಿ ಮಾಡಿದ್ದೇನೆ ಎಂದು ಸೇನ್ ತಿಳಿಸಿದ್ದಾರೆ.

ತನಗೆ ಲಾಟರಿಯಲ್ಲಿ ಬಂದ ಬಹುಮಾನದ ಹಣದಲ್ಲಿ ದುರ್ಗಾ ದೇವಸ್ಥಾನ ಕಟ್ಟಲು ಸ್ವಲ್ಪ ಹಣ ದಾನ ಮಾಡುತ್ತೇನೆ. ಇನ್ನುಳಿದ ಸ್ವಲ್ಪ ಹಣವನ್ನು ದಕ್ಷಿಣೆ ಮತ್ತು ಪೂಜೆ ನಡೆಸಲು ವಿನಿಯೋಗಿಸುತ್ತೇನೆ. ನಂತರ ನನ್ನ ಮೂರು ಗಂಡು ಮಕ್ಕಳಿಗೆ ಹಾಗೂ ಮೊಮ್ಮಕ್ಕಳಿಗೆ ಹಂಚುತ್ತೇನೆ. ನನಗೆ ನನ್ನ ಪಿಂಚಣಿ ಹಣವೇ ಜೀವನಕ್ಕೆ ಸಾಕು ಎಂದು ಸೇನ್ ತಿಳಿಸಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.