ಪಶ್ಚಿಮ ಬಂಗಾಲದ ಭಾಟ್ಪಾರಾದಲ್ಲಿ ಬಾಂಬ್ ಸ್ಫೋಟ; 2 ಸಾವು, ನಾಲ್ವರಿಗೆ ಗಾಯ
Team Udayavani, Jun 11, 2019, 3:16 PM IST
ಕೋಲ್ಕತ : ಪಶ್ಚಿಮ ಬಂಗಾಲದ ಬರಾಕ್ಪೋರ್ ನ ಭಾಟ್ಪಾರಾ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಎರಡು ಕಚ್ಚಾ ಬಾಂಬ್ ಗಳನ್ನು ಎಸೆದ ಘಟನೆಯಲ್ಲಿ ಇಬ್ಬರು ಮೃತಪಟ್ಟು ಇತರ ನಾಲ್ವರು ಗಾಯಗೊಂಡಿದ್ದಾರೆ.
ಬೆಳಗ್ಗೆ 10.30ರ ಸುಮಾರಿಗೆ ನಡೆದಿರುವ ಈ ಘಟನೆಯಲ್ಲಿ ದುಷ್ಕರ್ಮಿಗಳು ಮನೆಯೊಂದರ ಮೇಲೆ ಎರಡು ಕಚ್ಚಾ ಬಾಂಬ್ ಗಳನ್ನು ಎಸೆದರು. ಆಗ ಮೊಹಮ್ಮದ್ ಹಲೀಮ್ (57) ಮತ್ತು ಮೊಹಮ್ಮದ್ ಮುಷ್ತಾಕ್ (60) ಮನೆಯ ಹೊರಗೆ ಕುಳಿತಿದ್ದರು.
ಬಾಂಬ್ ಸ್ಫೋಟದಿಂದ ಹಲೀಮ್ ಸ್ಥಳದಲ್ಲೇ ಮೃತಪಟ್ಟರು. ಮುಷ್ತಾಕ್ ಅವರನ್ನು ಕಲ್ಯಾಣಿಯ ಜೆಎನ್ಎಂ ಆಸ್ಪತ್ರೆಗೆ ತರುತ್ತಲೇ ಆತ ಮೃತಪಟ್ಟಿರುವುದಾಗಿ ತಿಳಿಸಲಾಯಿತು.
ಬಾಂಬ್ ದಾಳಿ ನಡೆದಾಗ ಮನೆಯಲ್ಲಿ ಹಲವು ಮಂದಿ ಇದ್ದರು. ಅವರ ಪೈಕಿ ರೂಬಿ ಪರ್ವೀನ್, ಪರ್ವೇಜ್ ಆಲಂ, ತಾವರೆಜ್ ಆಲಂ ಮತ್ತು ಪ್ರಿನ್ಸ್ ಪರ್ವೇಜ್ ಗಾಯಗೊಂಡರು.
ಬಾಂಬ್ ದಾಳಿಯನ್ನು ಅನುಸರಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಂಬ್ ದಾಳಿಯ ಹಿಂದಿನ ಉದ್ದೇಶ ಏನೆಂದು ಗೊತ್ತಾಗಿಲ್ಲ. ಭಾಟ್ಪಾರಾ ವಿಧಾನಸಭೆಗೆ ಉಪಚುನಾವಣೆ ನಡೆದ ಸಂದರ್ಭದಲ್ಲಿ ಇಲ್ಲಿ ಹಿಂಸಾತ್ಮಕ ಪ್ರಕರಣಗಳು ನಡೆದಿದ್ದವು. ಈಗ ಸೆ.144 ಹೇರಲಾಗಿದೆ.
ಈ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಿಡಲು ಕ್ಷಿಪ್ರ ಕಾರ್ಯ ಪಡೆಯನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು