ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ

 ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷರ ವಿರುದ್ಧವೇ ಆರೋಪ

Team Udayavani, Jan 19, 2023, 7:33 AM IST

ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ

ಹೊಸದಿಲ್ಲಿ: ಭಾರತದ ಖ್ಯಾತ ಕುಸ್ತಿ ಪಟುಗಳಾದ ವಿನೇಶ್‌ ಪೋಗಟ್‌ ಮತ್ತು ಸಾಕ್ಷಿ ಮಲಿಕ್‌ ಅವರೇ ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳದ ಬಾಂಬ್‌ ಹಾಕಿದ್ದಾರೆ.

ರಾಷ್ಟ್ರೀಯ ಕ್ಯಾಂಪ್‌ಗಳಲ್ಲಿ ತರಬೇತಿ ಪಡೆಯುತ್ತಿರುವ ಮಹಿಳಾ ಕುಸ್ತಿ ಪಟುಗಳಿಗೆ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದರೂ ಆಗಿರುವ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅಷ್ಟೇ ಅಲ್ಲ, ಕೆಲವು ತರಬೇತುದಾರಿಂದಲೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಇದರಲ್ಲಿ ರಾಷ್ಟ್ರೀಯ ಅಧ್ಯಕ್ಷರೂ ಭಾಗಿಯಾಗಿದ್ದಾರೆ ಎಂದು ವಿನೇಶ್‌ ಪೋಗಟ್‌ ಅವರು ಆರೋಪಿಸಿದ್ದಾರೆ.

ಈ ಸಂಬಂಧ ದಿಲ್ಲಿಯಲ್ಲಿರುವ ಜಂತರ್‌ ಮಂತರ್‌ನಲ್ಲಿ ದೇಶದ ಪ್ರಮುಖ ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್‌, ಸಂಗೀತ್‌ ಪೋಗಟ್‌, ಭಜರಂಗ್‌, ಸೋನಮ್‌ ಮಲಿಕ್‌ ಮತ್ತು ಅನುÏ ಅವರೂ ಪ್ರತಿಭಟನೆ ನಡೆಸಿದರು.

ನನ್ನಲ್ಲಿ ಹಲವು ಮಹಿಳಾ ಕುಸ್ತಿ ಪಟುಗಳೂ ಸೇರಿದಂತೆ 20ಕ್ಕೂ ಹೆಚ್ಚು ಯುವತಿಯರು ಲೈಂಗಿಕ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ.

ರಾಷ್ಟ್ರೀಯ ಕ್ಯಾಂಪ್‌ಗಳಲ್ಲಿ ಈ ರೀತಿ ಆಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ ನೇರವಾಗಿಯೇ ಆರೋಪಿಸಿದ್ದಾರೆ.

ನಾನು ಈ ವಿಷಯವನ್ನು ಇಂದು ಹೇಳಿದ್ದೇನೆ. ಪ್ರಧಾನಮಂತ್ರಿ ಹಾಗೂ ಗೃಹ ಸಚಿವರಿಗೂ ವಿವರಿಸಲಾಗುವುದು ಎಂದು ಹೇಳಿರುವ ಅವರು, ಭಾರತ ಕುಸ್ತಿ ಒಕ್ಕೂಟ ಅತ್ಯಂತ ಪ್ರಬಲವಾಗಿದ್ದು, ನಾಳೆ ನಾನು ಜೀವಂತವಾಗಿ ಇರುತ್ತೀನೋ ಅಥವಾ ಇಲ್ಲವೋ ಎಂಬುದು ಗೊತ್ತಿಲ್ಲ ಎಂದೂ ಆತಂಕ ವ್ಯಕ್ತಪಡಿಸಿದ್ದಾರೆ.

ಕೂಟಗಳ ಬಹಿಷ್ಕಾರ
ಕುಸ್ತಿ ಒಕ್ಕೂಟದ ವಿರುದ್ಧ ಬಹುತೇಕ ಎಲ್ಲ ಕುಸ್ತಿ ಪಟುಗಳು ತಿರುಗಿಬಿದ್ದಿದ್ದು, ಈ ವಿಷಯ ಬಗೆಹರಿಯುವವರೆಗೆ ನಾವು ಯಾವುದೇ ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳಿದ್ದಾರೆ. ಒಕ್ಕೂಟದಲ್ಲಿ ಏಕಪಕ್ಷೀಯವಾಗಿ ನಿರ್ಧಾರಗಳಾಗುತ್ತಿವೆ. ನಮ್ಮ ಧ್ವನಿಗೆ ಯಾವುದೇ ಬೆಲೆ ಇಲ್ಲ. ಹಲವು ದಿನಗಳಿಂದ ಮೌನವಾಗಿ ಎಲ್ಲವನ್ನೂ ಸಹಿಸಿಕೊಂಡಿದ್ದೇವೆ. ಆದರೆ ಇನ್ನು ಮುಂದೆ ಹೀಗೆ ಆಗದು ಎಂದು ಭಜರಂಗ್‌ ಹೇಳಿದ್ದಾರೆ. ನಾವು ದೇಶಕ್ಕಾಗಿ ಪದಕ ಗೆದ್ದಾಗ ಎಲ್ಲರೂ ಸಂಭ್ರಮಿಸುತ್ತಾರೆ. ಆದರೆ, ನಾವೀಗ ನೋವಿನಲ್ಲಿದ್ದೇವೆ. ಯಾರೂ ನಮ್ಮ ಬಗ್ಗೆ ಯೋಚಿಸುತ್ತಿಲ್ಲ ಎಂದೂ ವಿಷಾದ ವ್ಯಕ್ತಪಡಿಸಿದ್ದಾರೆ. ಜತೆಗೆ ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಮತ್ತು ಗೃಹ ಸಚಿವಾಲಯ ಗಮನಹರಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

ಆರೋಪ ಸುಳ್ಳು
ಕುಸ್ತಿ ಪಟುಗಳ ಆರೋಪ ಸಂಬಂಧ ಪ್ರತಿಕ್ರಿಯೆ ನೀಡಿರುವ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌, ಕೇವಲ ವಿನೇಶ್‌ ಪೋಗಟ್‌ ಮಾತ್ರ ಈ ಆರೋಪ ಮಾಡಿದ್ದಾರೆ. ಬೇರೆ ಬೇರೆ ಯಾರೂ ಮಾಡಿಲ್ಲ. ಬೇರೊಬ್ಬ ಕುಸ್ತಿ ಪಟು ಇಂಥ ಆರೋಪ ಮಾಡಲಿ. ನಾನು ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಆರೋಪಕ್ಕೆ ಉತ್ತರಿಸಲು ಪ್ರಾಧಿಕಾರಕ್ಕೆ 72 ಗಂಟೆ ಗಡುವು
ಹೊಸದಿಲ್ಲಿ: ಪ್ರಮುಖ ಕುಸ್ತಿ ಪಟುಗಳು ಮಾಡಿರುವ ಆರೋಪಕ್ಕೆ 72 ಗಂಟೆಯೊಳಗೆ ಉತ್ತರಿಸುವಂತೆ ಕ್ರೀಡಾ ಸಚಿವಾಲಯ ಭಾರತೀಯ ಕುಸ್ತಿ ಪ್ರಾಧಿಕಾರಕ್ಕೆ (ಡಬ್ಲ್ಯುಎಫ್ಐ) ಸೂಚಿಸಿದೆ. ಒಂದುವೇಳೆ ಪ್ರತಿಕ್ರಿಯಿಸದಿದ್ದರೆ ಸಚಿವಾಲಯವು ಪ್ರಾಧಿಕಾರದ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲು ಮುಂದಾಗಲಿದೆ ಎಂದು ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.