ನನಗೆ ಜಗಳ ಇಷ್ಟವಿಲ್ಲ,ಐತಿಹಾಸಿಕ ಸತ್ಯ ಹೇಳಿದ್ದೇನೆ; ಕಮಲಹಾಸನ್
ಮಾಧ್ಯಮಗಳ ವಿರುದ್ಧವೂ ಆಕ್ರೋಶ ಹೊರ ಹಾಕಿದ ನಟ
Team Udayavani, May 16, 2019, 11:09 AM IST
ಚೆನ್ನೈ: ನಾನು ಐತಿಹಾಸಿಕ ಸತ್ಯವನ್ನೇ ಹೇಳಿದ್ದೇನೆ ಹೊರತು ಯಾರೊಂದಿಗೂ ಜಗಳವಾಡಲು ನಾನು ಆ ರೀತಿ ಹೇಳಿಲ್ಲ ಎಂದು ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲಹಾಸನ್ ಅವರು ಹೇಳಿಕೆ ನೀಡಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ‘ಗಾಂಧೀಜಿಯನ್ನು ಹತ್ಯೆಗೈದಿದ್ದ ನಾಥುರಾಮ್ ಗೋಡ್ಸೆ ಮೊದಲ ಹಿಂದು ಉಗ್ರ’ ಎಂಬ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ವಿಚಾರಕ್ಕೆ ಸಂಬಂಧಿಸಿ ಈ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ವಿರುದ್ಧವೂ ಆಕ್ರೋಶ ಹೊರ ಹಾಕಿದ ಕಮಲ ಹಾಸನ್ ‘ನನ್ನ ಹೇಳಿಕೆಯನ್ನು ವಿಚಾರದ ಹೊರಗೆ ಕೊಂಡೊಯ್ಯಲಾಗಿದೆ’ ಎಂದಿದ್ದಾರೆ.
‘ನಾನೇನು ಹೇಳಿದ್ದೇನೋ ಅದರ ತಲೆ ಮತ್ತು ಬಾಲವನ್ನು ಕತ್ತರಿಸಿ ಬರೀ ಒಂದು ಭಾಗವನ್ನು ಮಾತ್ರ ಬಿತ್ತರಿಸಲಾಗಿದೆ. ನನ್ನ ಹೇಳಿಕೆಯನ್ನು ತಿರುಚಿ ಆಕ್ರೋಶ ಹೊರಹೊಮ್ಮುವಂತೆ ಮಾಡಲಾಗಿದೆ. ಯಾವೆಲ್ಲಾ ಐಪಿಸಿ ಸೆಕ್ಷನ್ಗಳಿವೆ ಅವುಗಳೆಲ್ಲವನ್ನೂ ನನ್ನ ಮೇಲೆ ಹಾಕಲಾಗಿದೆ. ಮಾಧ್ಯಮಗಳೂ ಕೂಡ ಇದಕ್ಕೆ ಸಮಾನ ಹೊಣೆಯಾಗುತ್ತಾರೆ’ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಮಕ್ಕಳ್ ನೀಧಿ ಮಯ್ಯಂ(ಜನರ ನ್ಯಾಯ ಕೇಂದ್ರ)ಜಾತಿ, ವರ್ಣ, ಧರ್ಮವನ್ನು ಪರಿಗಣಿಸದೆ ಎಲ್ಲಾ ವರ್ಗದವರಿಗೂ ಸಮಾನ ಗೌರವ ನೀಡುವುದೇ ನಮ್ಮ ಪಕ್ಷದ ಗುರಿಯಾಗಿದೆ ಎಂದರು.
ನನ್ನ ಮನೆಯಲ್ಲೂ ಎಲ್ಲರೂ ದೇವರನ್ನು ಪ್ರಾರ್ಥಿಸುತ್ತಾರೆ. ನನ್ನ ಮಗಳು ಕೂಡ ದೈವ ಭಕ್ತೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ