ಈಗಿನಷ್ಟು ದೌರ್ಜನ್ಯ 3000 ವರ್ಷಗಳಲ್ಲೇ ನಡೆದಿರಲಿಲ್ಲ: ರಾಹುಲ್ ಕಿಡಿ


Team Udayavani, Aug 8, 2018, 6:25 AM IST

rahul-gandhi-7-8.jpg

ಹೊಸದಿಲ್ಲಿ: ಬಿಹಾರ, ಉತ್ತರಪ್ರದೇಶದ ಆಶ್ರಯಗೃಹಗಳಲ್ಲಿ ಬಾಲಕಿಯರ ಮೇಲೆ ನಡೆದಿರುವ ಅತ್ಯಾಚಾರ ಘಟನೆಗಳಿಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ‘ಮೋದಿ ಅವರ ಆಡಳಿತಾವಧಿಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವಷ್ಟು ದೌರ್ಜನ್ಯಗಳನ್ನು ದೇಶ ಕಳೆದ 3,000 ವರ್ಷಗಳಲ್ಲಿ ಯಾವತ್ತೂ ಕಂಡಿಲ್ಲ’ ಎಂದು ಹೇಳಿದ್ದಾರೆ. ಮಂಗಳವಾರ ದಿಲ್ಲಿಯಲ್ಲಿ ನಡೆದ ಮಹಿಳಾ ಅಧಿಕಾರ್‌ ಸಮ್ಮೇಳನದಲ್ಲಿ ಮಾತನಾಡಿದ ರಾಹುಲ್‌, ಸರಕಾರದ ಬೇಟಿ ಬಚಾವೋ, ಬೇಟಿ ಪಢಾವೋ ಯೋಜನೆಯ ಬಗ್ಗೆಯೂ ಪ್ರಸ್ತಾವಿಸಿದ್ದು, ‘ಈಗ ಬಿಜೆಪಿ ಶಾಸಕರಿಂದಲೇ ನಮ್ಮ ಹೆಣ್ಣುಮಕ್ಕಳನ್ನು ರಕ್ಷಿಸಬೇಕಾದ ಸ್ಥಿತಿಯಿದೆ’ ಎಂದಿದ್ದಾರೆ.

ಪ್ರಧಾನಿ ಮೋದಿ ಅವರು ಬುಲೆಟ್‌ ರೈಲು, ಏರೋಪ್ಲೇನ್‌, ಟಾಯ್ಲೆಟ್‌ ಹೀಗೆ ಎಲ್ಲದರ ಬಗ್ಗೆಯೂ ಮಾತಾಡುತ್ತಾರೆ. ಆದರೆ, ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆದಾಗ ಅವರು ಸೊಲ್ಲೆತ್ತು ವುದಿಲ್ಲ. ಭಾರತವನ್ನು ಬದಲಿಸುವುದಾಗಿ ಹೇಳು ತ್ತಾರೆ. 70 ವರ್ಷಗಳ ಬಗ್ಗೆ ಮಾತನಾಡುತ್ತಾರೆ. ಆದರೆ, ಕಳೆದ 4 ವರ್ಷಗಳಲ್ಲಿ ಮಹಿಳೆಯರ ಮೇಲೆ ನಡೆದಂಥ ದೌರ್ಜನ್ಯಗಳು 3 ಸಾವಿರ ವರ್ಷಗಳಲ್ಲೂ ನಡೆದಿಲ್ಲ ಎಂದೂ ರಾಹುಲ್‌ ಹರಿಹಾಯ್ದಿದ್ದಾರೆ.

ಇದೇ ವೇಳೆ, ಕಾಂಗ್ರೆಸ್‌ ಶೇ.50ರಷ್ಟು ಮಹಿಳೆಯರನ್ನು ಹೊಂದಬೇಕು ಎನ್ನುವುದೇ ನನ್ನ ಗುರಿಯಾಗಿದೆ. ಬಿಜೆಪಿ ಅಂಥ ಧ್ಯೇಯ ಹೊಂದಲು ಸಾಧ್ಯವಿಲ್ಲ. ಏಕೆಂದರೆ, ಅದರ ಮಾತೃಸಂಸ್ಥೆ RSS ಪುರುಷಪ್ರಧಾನ ಸಂಸ್ಥೆಯಾಗಿದೆ. ಯಾವಾಗ ಆ ಸಂಸ್ಥೆಗೆ ಮಹಿಳೆಯರ ಪ್ರವೇಶವಾಗುತ್ತದೋ, ಅಲ್ಲಿಂದ ಅದು RSS ಆಗಿ ಉಳಿಯುವುದಿಲ್ಲ ಎಂದೂ ಹೇಳಿದ್ದಾರೆ.

ದುರಂತದತ್ತ ಸಂಚರಿಸುತ್ತಿರುವ ಭಾರತ
ಪ್ರಧಾನಿ ಮೋದಿ ಅವರು ಅಚ್ಛೇ ದಿನದ ಬೋಗಸ್‌ ಆಶ್ವಾಸನೆಗಳಿಂದ ಜನರು ಇನ್ನು ಮೂರ್ಖರಾಗುವುದಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಸಂಸತ್‌ ಭವನದಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ರಾಹುಲ್‌, ‘ನಿರಂಕುಶ ಮತ್ತು ಅಸಮರ್ಥ ಚಾಲಕನಿರುವ ರೈಲು ವಿಪತ್ತಿನೆಡೆಗೆ ಸಾಗಿದಂತೆ, ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತವೂ ದುರಂತದತ್ತ ಸಾಗುತ್ತಿದೆ’ ಎಂದಿದ್ದಾರೆ. ಭ್ರಷ್ಟಾಚಾರ, ಆರ್ಥಿಕ ವೈಫ‌ಲ್ಯ, ಅಸಮರ್ಥತೆ ಹಾಗೂ ಸಾಮಾಜಿಕ ಧ್ರುವೀಕರಣ ಈಗ ಉಚ್ಛ್ರಾಯ ಸ್ಥಿತಿ ತಲುಪಿದೆ. ಹಾಗಾಗಿ, ಕಾಂಗ್ರೆಸ್‌ ಸಂಸದರೆಲ್ಲರೂ ಮೋದಿ ಸುಳ್ಳು ಆಶ್ವಾಸನೆಗಳಿಗೆ ಪರ್ಯಾಯ ಹುಡುಕಬೇಕಿದೆ ಎಂದೂ ಕರೆ ನೀಡಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.