ಪ್ರಧಾನಿ ಜನತಾ ಕರ್ಫ್ಯೂ ಕರೆಗೆ ಭರ್ಜರಿ ಬೆಂಬಲ; ಭಾನುವಾರ ಬಹುತೇಕ ಕರ್ನಾಟಕ ಸ್ತಬ್ಧ
ಭಾನುವಾರ ಮೆಟ್ರೋ ಸಂಚಾರ ಕೂಡಾ ಬಂದ್ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Team Udayavani, Mar 20, 2020, 5:44 PM IST
PM Narendra Modi
ನವದೆಹಲಿ/ಬೆಂಗಳೂರು: ಕೊರೊನಾ ವೈರಸ್ ಮಹಾಮಾರಿ ಭೀತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜನತಾ ಕರ್ಫ್ಯೂಗೆ ನೀಡಿದ ಕರೆಗೆ ಎಲ್ಲೆಡೆ ಭರ್ಜರಿ ಬೆಂಬಲ ವ್ಯಕ್ತವಾಗತೊಡಗಿದೆ.
ನಾನು ದೇಶದ ಪ್ರತಿಯೊಬ್ಬ ಪ್ರಜೆಯಿಂದ ಮತ್ತೊಂದು ಬೆಂಬಲದ ನಿರೀಕ್ಷೆಯಲ್ಲಿದ್ದೇನೆ. ಇದೊಂದು ಜನತಾ ಕರ್ಫ್ಯೂ..ಇದು ಜನರೇ ಸ್ವಯಂ ಆಗಿ ವಿಧಿಸಿಕೊಳ್ಳುವ ಕರ್ಫ್ಯೂ. ಎಲ್ಲರೂ ಮನೆಯಲ್ಲೇ ಇರುವ ಮೂಲಕ ಕೊರೊನಾ-19 ಸೋಂಕು ಮಾರಿ ತಡೆಗೆ ಬೆಂಬಲ ನೀಡಬೇಕು ಎಂದು ಪ್ರಧಾನಿ ವಿನಂತಿಸಿಕೊಂಡಿದ್ದರು.
ಭಾನುವಾರ ಬೆಳಗ್ಗೆ 7ರಿಂದ ರಾತ್ರಿ 9ಗಂಟೆವರೆಗೆ ಮನೆಯಿಂದ ಹೊರಬರದಂತೆ ಪ್ರಧಾನಿ ಗುರುವಾರ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ವೇಳೆ ಮನವಿ ಮಾಡಿಕೊಂಡಿದ್ದರು.
ಭಾನುವಾರ ಬಹುತೇಕ ಕರ್ನಾಟಕ ಸ್ತಬ್ಧ:
ಮಾರ್ಚ್ 21ರ ರಾತ್ರಿಯೇ ಸರ್ಕಾರಿ ಬಸ್ ಗಳು ಡಿಪೋ ಸೇರಲಿದ್ದು, ಅಗತ್ಯ ಬಿದ್ದಲ್ಲಿ ಮಾತ್ರ ಒಂದೆರಡು ಬಸ್ ಗಳು ಸಂಚರಿಸಲಿವೆ ಎಂದು ವರದಿ ತಿಳಿಸಿದೆ. ಮುಂಗಡ ಟಿಕೆಟ್ ಕಾಯ್ದಿರಿಸಿದ್ದಲ್ಲಿ ಮಾತ್ರ ಬಸ್ ಸಂಚಾರ ಇರಲಿದೆ ಎಂದು ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಹೋಟೆಲ್ ಮಾಲೀಕರ ಸಂಘ, ಉಬರ್, ಓಲಾ ಕ್ಯಾಬ್ ಸಂಘಟನೆ ಸೇರಿದಂತೆ ಇಂದಿರಾ ಕ್ಯಾಂಟೀನ್ ಬಂದ್ ಮಾಡುವುದಾಗಿ ತಿಳಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿವೆ.
ಬೆಂಗಳೂರಿನಲ್ಲಿ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಗಳು ಈಗಾಗಲೇ ಬಂದ್ ಆಗಿದ್ದು, ಭಾನುವಾರ ಮೆಟ್ರೋ ಸಂಚಾರ ಕೂಡಾ ಬಂದ್ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
IPL 2024; ಚಹಲ್ 200 ವಿಕೆಟ್ಗಳ ಕಮಾಲ್; ಈ ಸಾಧನೆಗೈದ ಮೊದಲ ಬೌಲರ್
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ