ಹಾಲಿ, ಮಾಜಿ ಪ್ರಧಾನಿಗೆ ರಕ್ಷಣಾ ಭದ್ರಕೋಟೆ; NSG, ಝಡ್ ಪ್ಲಸ್ ಭದ್ರತೆ ಹೇಗಿರುತ್ತದೆ?


ನಾಗೇಂದ್ರ ತ್ರಾಸಿ, Aug 26, 2019, 7:45 PM IST

SPG-01

ನವದೆಹಲಿ:ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ಮುಖಂಡ ಮನಮೋಹನ್ ಸಿಂಗ್ ಅವರಿಗೆ ನೀಡಿದ್ದ ವಿಶೇಷ ಭದ್ರತಾ ವ್ಯವಸ್ಥೆ(ಎಸ್ ಪಿಜಿ)ಯನ್ನು ಕೇಂದ್ರ ಸರಕಾರ ವಾಪಸ್ ಪಡೆದಿದ್ದು, ಝಡ್ ಪ್ಲಸ್ ಭದ್ರತೆಯನ್ನು ಮುಂದುವರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಎಸ್ ಪಿಜಿ ಅಂದರೆ ಏನು? ಹಾಲಿ ಮತ್ತು ಮಾಜಿ ಪ್ರಧಾನಿಗಳಿಗೆ ಈ ಭದ್ರತೆ ಯಾವಾಗಿನಿಂದ ಕೊಡಲು ಆರಂಭಿಸಲಾಗಿತ್ತು ಎಂಬಿತ್ಯಾದಿ ಕಿರು ಚಿತ್ರಣ ಇಲ್ಲಿದೆ.

ಇಂದಿರಾ, ರಾಜೀವ್ ಹತ್ಯೆ ಬಳಿಕ ಎಸ್ ಪಿಜಿ ಜಾರಿಯಾಗಿತ್ತು:

1984ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಅಂಗರಕ್ಷಕರೇ ಗುಂಡು ಹಾರಿಸಿ ಹತ್ಯೆಗೈದಿದ್ದರು. ಆ ಬಳಿಕ 1985ರಲ್ಲಿ ಹಾಲಿ ಪ್ರಧಾನಿಗೆ ಮತ್ತು ಮಾಜಿ ಪ್ರಧಾನ ಮಂತ್ರಿಗಳಿಗೆ ಮತ್ತು ಅವರ ನಿಕಟ ಕುಟುಂಬಕ್ಕೆ ಎಸ್ ಪಿಜಿ ಭದ್ರತೆ ಕೊಡುವ ವ್ಯವಸ್ಥೆ ಜಾರಿಯಾಗಿತ್ತು. ನಂತರ ತಮಿಳುನಾಡಿನ ಶ್ರೀಪೆರುಂಬುದೂರಿನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಎಲ್ ಟಿಟಿಇ ಆತ್ಮಹತ್ಯಾ ಬಾಂಬ್ ದಾಳಿ ಮೂಲಕ ಹತ್ಯೆಗೈದ ನಂತರ ಎಸ್ ಪಿಜಿ ಭದ್ರತೆಯಲ್ಲಿ ಮತ್ತಷ್ಟು ಬದಲಾವಣೆ ಮಾಡಲಾಗಿತ್ತು.

ಎಸ್ ಪಿಜಿ(ಸ್ಪೆಶಲ್ ಪ್ರೊಟೆಕ್ಷನ್ ಗ್ರೂಪ್ ಆ್ಯಕ್ಟ್) 1988:

ಎಸ್ ಪಿಜಿ ಕಾಯ್ದೆ 1988ರ ಪ್ರಕಾರ ಕೇಂದ್ರ ಸರಕಾರ ಸಂವಿಧಾನಾತ್ಮಕ ಹಾಗೂ ಶಸ್ತ್ರಾಸ್ತ್ರ ಪಡೆ ನಿಯಮಾನುಸಾರ ಹಾಲಿ ಪ್ರಧಾನಿಗೆ ಮತ್ತು ಮಾಜಿ ಪ್ರಧಾನಿ ಹಾಗೂ ಕುಟುಂಬ ವರ್ಗಕ್ಕೆ ತೀರಾ ನಿಕಟ ರಕ್ಷಣಾ ಭದ್ರತೆಯನ್ನು ನೀಡುತ್ತದೆ.

ಭದ್ರತೆಯಲ್ಲಿ ಎಷ್ಟು ವಿಧ, ಯಾರಿಗೆಲ್ಲ ಭದ್ರತೆ ಸೌಲಭ್ಯ ಇದೆ?

ಎಸ್ ಪಿಜಿ ನಂತರ ನಾಲ್ಕು ಹಂತದ ಭದ್ರತಾ ಶ್ರೇಣಿಯನ್ನು ವರ್ಗಿಕರಿಸಲಾಗಿದೆ. ಝಡ್ ಪ್ಲಸ್, ಝಡ್, ವೈ ಮತ್ತು ಎಕ್ಸ್ ಭದ್ರತೆ ಇದೆ. ಇದರಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನ ಮಂತ್ರಿ, ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರು, ಭಾರತೀಯ ಸೇನೆಯ ಸೇನಾಧಿಕಾರಿಗಳು, ರಾಜ್ಯದ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಕ್ಯಾಬಿನೆಟ್ ಸಚಿವರು ಸೇರಿದ್ದಾರೆ.

ಎಸ್ ಪಿಜಿ ಭದ್ರತೆ: ಹಾಲಿ ಪ್ರಧಾನಿ(ನರೇಂದ್ರ ಮೋದಿ)ಗೆ ಎಸ್ ಪಿಜಿ ಭದ್ರತೆ ನೀಡಲಾಗುತ್ತದೆ. ಎಸ್ ಪಿಜಿ ಭದ್ರತೆ ಯಾವ ರೀತಿಯಲ್ಲಿ ಇರಲಿದೆ ಎಂಬ ಮಾಹಿತಿ ಪ್ರಧಾನಿಗೆ ಮಾತ್ರ ನೀಡಲಾಗುತ್ತದೆ. ಇನ್ನುಳಿದಂತೆ ಅದರ ವಿವರ ಬಹಿರಂಗಪಡಿಸುವುದಿಲ್ಲ.

ಝಡ್ ಪ್ಲಸ್ ಭದ್ರತೆ: ಇದರಲ್ಲಿ ಒಟ್ಟು 55 ಮಂದಿ ಭದ್ರತಾ ಸಿಬ್ಬಂದಿಗಳಿರುತ್ತಾರೆ. ಪೊಲೀಸ್ ಸೇರಿದಂತೆ 10ಕ್ಕೂ ಅಧಿಕ ಎಸ್ ಎಸ್ ಜಿ ಕಮಾಂಡೋಗಳಿರುತ್ತಾರೆ.

ಝಡ್ ಕೆಟಗರಿ: ಇದರಲ್ಲಿ ಒಟ್ಟು 22 ಮಂದಿ ಸಿಬ್ಬಂದಿಗಳಿದ್ದು, ಪೊಲೀಸ್ ಸೇರಿದಂತೆ ನಾಲ್ಕರಿಂದ ಐದು ಮಂದಿ ಎನ್ ಎಸ್ ಜಿ ಕಮಾಂಡೋಗಳಿರುತ್ತಾರೆ.

ವೈ ಕೆಟಗರಿ: ಇದರಲ್ಲಿ ಪೊಲೀಸ್ ಹಾಗೂ ಇಬ್ಬರು ಎನ್ ಎಸ್ ಜಿ ಕಮಾಂಡೋ ಸೇರಿದಂತೆ ಒಟ್ಟು 11 ಮಂದಿ ಸಿಬ್ಬಂದಿಗಳಿರುತ್ತಾರೆ.

ಎಕ್ಸ್ ಕೆಟಗರಿ: ಇದರಲ್ಲಿ ಎನ್ ಎಸ್ ಜಿ ಕಮಾಂಡೋ ಇರುವುದಿಲ್ಲ. ಶಸ್ತ್ರ ಸಜ್ಜಿತ ಪೊಲೀಸ್ ಸೇರಿದಂತೆ ಇಬ್ಬರು ಭದ್ರತಾ ಸಿಬ್ಬಂದಿಗಳಿರುತ್ತಾರೆ.

ಎಸ್ ಪಿಜಿಗೆ, ಝಡ್ ಪ್ಲಸ್ ಆಯ್ಕೆ :

ಎಸ್ ಪಿಜಿಗೆ ಹಾಗೂ ಝಡ್ ಪ್ಲಸ್ ಭದ್ರತೆ ಆಯ್ಕೆಗೆ ಹಲವು ಮಾನದಂಡಗಳನ್ನು ಅನುಸರಿಸಲಾಗುತ್ತದೆ. ಅವರ ತರಬೇತಿಗೆ ಅನುಸಾರವಾಗಿ ಆಯ್ಕೆ ಮಾಡಲಾಗುತ್ತದೆ. ಅದಕ್ಕಿಂತ ಹೆಚ್ಚಾಗಿ ಎಸ್ ಪಿಜಿ ಗೆ ಸೇರುವ ಮುನ್ನ ತಾವು ಯಾವುದೇ ವಿಧದಲ್ಲೂ ಟ್ರೇಡ್ ಯೂನಿಯನ್ ಆಗಲಿ, ಲೇಬರ್ ಯೂನಿಯನ್ ಆಗಲಿ, ರಾಜಕೀಯ ಪಕ್ಷಗಳ ಜೊತೆ ಸಂಬಂಧ, ಸದಸ್ಯತ್ವ ಹೊಂದಿಲ್ಲ ಎಂಬ ಬಗ್ಗೆ ದೃಢೀಕರಿಸಬೇಕು. ಸಾಮಾಜಿಕ, ಧಾರ್ಮಿಕ ಸಂಘಟನೆ ಸದಸ್ಯತ್ವ ಹೊಂದಿಲ್ಲ, ಯಾವುದೇ ಮಾಧ್ಯಮದ ಜೊತೆ ಸಂವಹನ, ಸಂಪರ್ಕಕ್ಕೆ ನಿರ್ಬಂಧ, ಯಾವುದೇ ವಿಧದ ಪುಸ್ತಕ ಬರೆಯುವುದು ಕೂಡಾ ನಿಷೇಧ.

ಎನ್ ಎಸ್ ಜಿ ಸದಸ್ಯರು ಯಾವುದೇ ಸಮಾರಂಭದಲ್ಲಿ ಭಾಗವಹಿಸುವುದಾಗಲಿ, ಯಾವುದೇ ಸಭೆ, ಸಮಾರಂಭವನ್ನು ಉದ್ದೇಶಿಸಿ ಸಭೆ ನಡೆಸುವುದು, ಪ್ರತಿಭಟನೆಯಲ್ಲಿ ಕಾಣಿಸಿಕೊಳ್ಳುವುದು ನಿರ್ಬಂಧಿಸಲಾಗಿದೆ.

ಟಾಪ್ ನ್ಯೂಸ್

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.