ನಿತೀಶ್ಗೆ ಏನಾಗಿದೆ? ಮೆಡಿಕಲ್ ಬುಲೆಟಿನ್ಗೆ ತೇಜಸ್ವಿ ಆಗ್ರಹ
Team Udayavani, Sep 8, 2018, 3:19 PM IST
ಪಟ್ನಾ : ‘ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಏನಾಗಿದೆ ? ಅವರ ಆರೋಗ್ಯದ ಬಗ್ಗೆ ರಾಜ್ಯ ಸರಕಾರ ಬೇಗನೆ ಒಂದು ಮೆಡಿಕಲ್ ಬುಲೆಟಿನ್ ಹೊರಡಿಸಬೇಕು’ ಎಂದು ಆರ್ಜೆಡಿ ನಾಯಕ ಮತ್ತು ಮಾಜಿ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆರೋಗ್ಯ ಕಳೆದೊಂದು ವಾರದಿಂದ ಚೆನ್ನಾಗಿಲ್ಲ ಎಂದು ಕೇಳಿ ಬರುತ್ತಿದೆ. ಅವರು ಭಾಗವಹಿಸಬೇಕಿರುವ ಸರಕಾರದ ಅಧಿಕೃತ ಕಾರ್ಯಕ್ರಮಗಳನ್ನೆಲ್ಲ ರದ್ದು ಮಾಡಲಾಗಿದೆ. ಹಾಗಿರುವಾಗ ಅವರ ಆರೋಗ್ಯದ ಬಗ್ಗೆ ಜನರು ತಿಳಿದುಕೊಳ್ಳಬೇಕಾದ ಅಗತ್ಯವಿದೆ. ಆದುದರಿಂದ ರಾಜ್ಯ ಸರಕಾರ ಬೇಗನೆ ಅವರ ಆರೋಗ್ಯದ ಬಗ್ಗೆ ಒಂದು ಮೆಡಿಕಲ್ ಬುಲೆಟಿನ್ ಹೊರಡಿಸಬೇಕು ಎಂದು ಯಾದವ್ ತಮ್ಮ ಟ್ವಿಟರ್ ಪೋಸ್ಟ್ನಲ್ಲಿ ಇಂದು ಶನಿವಾರ ಆಗ್ರಹಿಸಿದರು.
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಿಡುವಲ್ಲಿ ಸರಕಾರ ವಿಫಲವಾಗಿರುವ ಕಾರಣ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ರಾಜೀನಾಮೆ ನೀಡಬೇಕು ಎಂದು ಹದಿನೈದು ದಿನಗಳ ಹಿಂದಷ್ಟೇ ತೇಜಸ್ವಿ ಯಾದವ್ ಆಗ್ರಹಿಸಿದ್ದರು. ಮುಜಫರಪುರ ಆಶ್ರಯ ಮನೆಯ ಲೈಂಗಿಕ ಶೋಷಣೆ ಹಗರಣವು ದೇಶಾದ್ಯಂತ ಸುದ್ದಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ