ಬಿಸಿಯನ್ನು ತಾಳಿಕೊಳ್ಳಬಲ್ಲ ಗೋಧಿ ತಳಿ ಅಭಿವೃದ್ಧಿ: ಐಸಿಎಆರ್ನ ಹೊಸ ಸಂಶೋಧನೆ
ಕಳೆದ ವರ್ಷದ ನಷ್ಟ ಗಮನದಲ್ಲಿರಿಸಿ ಹೊಸ ನಿರ್ಧಾರ
Team Udayavani, Feb 23, 2023, 7:25 AM IST
ನವದೆಹಲಿ: ಬಿಸಿಯನ್ನೂ ತಾಳಿಕೊಳ್ಳಲು ಸಾಧ್ಯವಿರುವ ಗೋಧಿ ತಳಿಯನ್ನು ಭಾರತೀಯ ಕೃಷಿ ಸಂಶೋಧನಾ ಪರಿಷತ್ತು(ಐಸಿಎಆರ್) ಅಭಿವೃದ್ಧಿಪಡಿಸಿದೆ.
ಬೇಸಿಗೆ ಸಮೀಪಿಸುತ್ತಿದೆ. ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ಗೋಧಿ ಬೆಳೆಯುವ ಪ್ರದೇಶಗಳಲ್ಲಿ ತಾಪಮಾನ ಸರಾಸರಿ 3-5 ಸೆಲಿÏಯಸ್ ಏರಿಕೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷ ಬೇಸಿಗೆಯಲ್ಲಿ ತಾಪಮಾನ ಹೆಚ್ಚಳದಿಂದ ಗೋಧಿ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಈ ಹಿನ್ನೆಲೆಯಲ್ಲಿ ಐಸಿಎಆರ್ ವಿಜ್ಞಾನಿಗಳು ಬಿಸಿಯನ್ನೂ ತಾಳಿಕೊಳ್ಳುವ ಗೋಧಿ ತಳಿಯನ್ನು ಅಭಿವೃದ್ಧಿಪಡಿಸಿದ್ದಾರೆ.
ಜನವರಿಯಲ್ಲಿ ಏಕದಳ ಧಾನ್ಯಗಳ ಕೊರತೆ ದಾಖಲೆಯ ಶೇ. 16.12ರಷ್ಟಾಗಿತ್ತು. ಅಲ್ಲದೇ ಗೋಧಿ ಮತ್ತು ಗೋಧಿ ಹಿಟ್ಟಿನ ಬೆಲೆಯಲ್ಲಿ ವಾರ್ಷಿಕ ಶೇ. 25.05ರಷ್ಟು ಏರಿಕೆಯಾಗಿದೆ. ಫೆ.1ರಂದು ಸರ್ಕಾರಿ ಗೋಧಾಮುಗಳಲ್ಲಿ 154.44 ಲಕ್ಷ ಟನ್ ಗೋಧಿ ಶೇಖರಣೆ ಇತ್ತು. ಇದು ಈ ದಿನಾಂಕದಂದು ಕಳೆದ ಆರು ವರ್ಷಗಳಲ್ಲೇ ಅತ್ಯಂತ ಕಡಿಮೆಯಾಗಿದೆ.
ಇನ್ನೊಂದೆಡೆ, ಕಳೆದ ಮಾರ್ಚ್ನಲ್ಲಿ ತಾಪಮಾನ ತೀವ್ರವಾಗಿ ಏರಿಕೆಯಾಗಿತ್ತು. ಇದು ಗೋಧಿ ಇಳುವರಿ ಮೇಲೆ ಪರಿಣಾಮ ಬೀರಿತ್ತು. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ತಾಪಮಾನದ ತೀವ್ರತೆಯನ್ನು ತಡೆದುಕೊಳ್ಳುವ ಗೋಧಿ ತಳಿಯನ್ನು ಐಸಿಎಆರ್ ಪ್ರಧಾನ ವಿಜ್ಞಾನಿ ರಾಜ್ಬೀರ್ ಯಾದವ್ ಮತ್ತವರ ತಂಡದ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ