
ಜುಲೈ ಮುಗಿದಿದೆ,ಲಸಿಕೆಗಳ ಕೊರತೆ ಇನ್ನೂ ನೀಗಿಲ್ಲ : ಕೇಂದ್ರದ ವಿರುದ್ಧ ರಾಹುಲ್ ಟ್ವೀಟಾಸ್ತ್ರ
Team Udayavani, Aug 1, 2021, 10:58 AM IST

ನವ ದೆಹಲಿ : ಮೂರನೇ ಅಲೆಯ ಭೀತಿಯಿಂದ ದೇಶದಲ್ಲಿ ಮತ್ತೆ ಕೋವಿಡ್ ಲಸಿಕೆಯ ಹಾಹಾಕಾರ ಎದ್ದಿದೆ. ದೇಶದ ಹಲವು ರಾಜ್ಯಗಳಲ್ಲಿ ಲಸಿಕೆಯ ಕೊರತೆ ಇದ್ದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ.
ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದವರು ಈಗ ಎರಡನೇ ಡೋಸ್ ಪಡೆಯುವುದಕ್ಕೆ ಅರ್ಹತೆಯನ್ನು ಪಡೆದಿದ್ದಾರೆ, ಇನ್ನೂ ಕೂಡ ಕೆಲವು ರಾಜ್ಯಗಳಲ್ಲಿ ಕೋವಿಡ್ ಲಸಿಕೆಯ ಕೊರತೆ ನೀಗಿಲ್ಲ ಎಂದು, ಬೇಕಾದಷ್ಟು ಲಸಿಕೆಗಳು ರಾಜ್ಯಗಳಿಗೆ ಪೂರೈಕೆಯಾಗುತ್ತಿಲ್ಲ.
ಇದನ್ನೂ ಓದಿ : ಸತತ 5ನೇ ದಿನವೂ ಕೋವಿಡ್ ಪ್ರಕರಣ ಹೆಚ್ಚಳ.! ಕಳೆದ 24 ಗಂಟೆಗಳಲ್ಲಿ 41, 831 ಪ್ರಕರಣಗಳು ಪತ್ತೆ
ಈ ಹಿನ್ನೆಲೆಯಲ್ಲಿ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್, ಜುಲೈ ಮುಗಿದು ಹೋಗಿದೆ, ಇನ್ನೂ ಲಸಿಕೆ ಕೊರತೆ ನೀಗಿಲ್ಲ ಎಂದು ಲಸಿಕೆಯ ಕೊರತೆಯ ವಿಸ್ತೃತ ವರದಿಯ ವೀಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾರೆ.
जुलाई चला गया है, वैक्सीन की कमी नहीं गयी।#WhereAreVaccines https://t.co/0hGVAv78x4 pic.twitter.com/QKyHBMR6X4
— Rahul Gandhi (@RahulGandhi) August 1, 2021
ಈ ಹಿಂದೆ ಆರೋಗ್ಯ ಸಚಿವಾಲಯದ ಸುದ್ದಿಗೋಷ್ಟಿಯಲ್ಲಿ ಕೇಂದ್ರದ ಸರ್ಕಾರದ ಮಾಜಿ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಜುಲೈ ಅಂತ್ಯದೊಳಗೆ ದೇಶದ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಕೋವಿಡ್ ಲಸಿಕೆಗಳನ್ನು ಪೂರೈಸಲಾಗುತ್ತದೆ ಎಂದು ಭರವಸೆಯನ್ನು ನೀಡಿದ್ದರು.
ಕೇಂದ್ರ ಸರ್ಕಾರ ಭರವಸೆ ಈಡೇರದ ಹಿನ್ನೆಲೆಯಲ್ಲಿ ಹಾಗೂ ದೇಶದಾದ್ಯಂತಯ ಕೋವಿಡ್ ಲಸಿಕೆಗಳ ಕೊರತೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ಟ್ವೀಟ್ಬಾಣ ಬಿಟ್ಟಿದ್ದಾರೆ.
ಇದನ್ನೂ ಓದಿ : ಗಾಯಗೊಂಡರೂ ಹೋರಾಡಿದ ಬಾಕ್ಸರ್ ಸತೀಶ್ ಕುಮಾರ್ ಗೆ ಸೋಲು
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ತೆರಿಗೆ ಪದ್ಧತಿ ಯಾರಿಗೆ, ಹೇಗೆ ಅನ್ವಯ?

ಕ್ರೀಡೆಗೆ 700 ಕೋಟಿ ರೂ. ಅಧಿಕ ಉತ್ತೇಜನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

Union Budget 2023: 20 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲದ ಗುರಿ-ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
