ಗೋರಕ್ಷಣೆಯ ಹಿಂಸಾಚಾರಗಳ ಬಿಸಿ ಮೋದಿಗೂ ತಟ್ಟಿದೆ: ಶಿವಸೇನೆ
Team Udayavani, Jul 20, 2017, 10:35 AM IST
ಮುಂಬಯಿ: ದೇಶದಲ್ಲಿ ಗೋರಕ್ಷಣೆಯ ಹೆಸರಿನಲ್ಲಿ ಬೆಳೆಯತ್ತಿರುವ ಹಿಂಸಾಚಾರದ ಘಟನೆಗಳಿಗೆ ಶಿವಸೇನೆಯು ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇತ್ತೀಚೆಗೆ ಕಾಶ್ಮೀರದಲ್ಲಿ ಅಮರನಾಥ ಯಾತ್ರಿಕರ ಮೇಲೆ ಭಯೋತ್ಪಾದಕ ದಾಳಿ ನಡೆದಾಗ, ಈ ಸ್ವಯಂಘೋಷಿತ ಗೋರಕ್ಷಕರು ಎಲ್ಲಿಗೆ ಹೋಗಿದ್ದರು ? ಎಂದು ಕೇಳಿದೆ.
ಗೋರಕ್ಷಣೆಯ ಹೆಸರಿನಲ್ಲಿ ಆರಂಭವಾದ ಈ ಹಿಂಸಾಚಾರಗಳ ಬಿಸಿಯು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ತಟ್ಟಿದೆ ಎಂದು ಆಡಳಿತಾರೂಢ ಎನ್ಡಿಎ ಮಿತ್ರಪಕ್ಷ ಶಿವಸೇನೆಯು ಬುಧವಾರ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಿದೆ.
ಪಾಕಿಸ್ಥಾನ ಕೂಡ ರಾಷ್ಟ್ರವನ್ನು ಗೆೋರಕ್ಷಣೆಯ ಹೆಸರಿನಲ್ಲಿ ವಿಭಜಿಸಲು ಬಯಸುತ್ತಿದೆ ಎಂದು ಪಕ್ಷ ನುಡಿದಿದೆ.
ಗೋರಕ್ಷಣೆಯ ಹೆಸರಿನಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆದಿರುವ ಇತ್ತೀಚಿನ ಹಿಂಸಾಚಾರದ ಘಟನೆಗಳ ಹಿನ್ನೆಲೆಯಲ್ಲಿ ಶಿವಸೇನೆಯಿಂದ ಈ ಹೇಳಿಕೆ ಹೊರಬಂದಿರುವುದಾಗಿದೆ.
ರಾಷ್ಟ್ರದಾದ್ಯಂತ ಗೋರಕ್ಷಕರು ಸೃಷ್ಟಿಸಿರುವ ದಾಂಧಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಟೀಕೆ ಎದುರಿಸಬೇಕಾಯಿತು. ಪ್ರಧಾನಿ ಅವರ ಕಟು ಎಚ್ಚರಿಕೆಯ ಹೊರತಾಗಿಯೂ ಹಿಂಸೆಯ ಘಟನೆಗಳು ನಿಲ್ಲುತ್ತಿಲ್ಲ ಎಂದು ಶಿವಸೇನೆ ಸಂಪಾದಕೀಯದಲ್ಲಿ ನುಡಿದಿದೆ.
ದೇಶದಾದ್ಯಂತ ನಿರಂತರವಾಗಿ ಮುಸಲ್ಮಾನರ ಮೇಲೆ ಗೋಮಾಂಸ ಸಾಗಣೆಯ ಸಂಶಯದ ಮೇರೆಗೆ ದಾಳಿ ನಡೆಸಿ, ಅವರ ಪ್ರಾಣ ತೆಗೆದುಕೊಳ್ಳಲಾಗುತ್ತಿದೆ. ಜನರು ಇದನ್ನು ವ್ಯಾಪಾರವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಅದು ತಿಳಿಸಿದೆ.
ಭಾರತದಲ್ಲಿ ಜನರು ಗೋರಕ್ಷಣೆಯ ಹೆಸರಿನಲ್ಲಿ ವಿಭಜನೆಯಾಗಬೇಕೆಂದು ಪಾಕಿಸ್ಥಾನ ಬಯಸುತ್ತಿದೆ. ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿರುವ ಸಮಯದಲ್ಲಿ ದೇಶದ ಆಂತರಿಕ ಜಗಳವು ರಾಷ್ಟ್ರದ ಏಕತೆಯ ಮೇಲೆ ಪರಿಣಾಮ ಬೀರಬಹುದು ಎಂಬುದು ಶಿವಸೇನೆ ಅಭಿಪ್ರಾಯವಾಗಿದೆ.
ಪ್ರಧಾನಮಂತ್ರಿ ಮೋದಿ ಅವರ ಗೃಹ ರಾಜ್ಯ ಗುಜರಾತ್ನಲ್ಲೂ ಗೋರಕ್ಷಕರು ಹಸುವಿನ ರಕ್ಷಣೆಯ ಹೆಸರಿನಲ್ಲಿ ಜನರನ್ನು ನಿಷ್ಕರುಣೆಯಿಂದ ಕೊಂದಿದ್ದಾರೆ. ಆದರೆ, ಆ ರಾಜ್ಯದ ಜನರು ಅಮರನಾಥ ಯಾತ್ರೆಯ ವೇಳೆ ಭಯೋತ್ಪಾದಕರಿಂದ ಕೊಲ್ಲಲ್ಪಟ್ಟಾಗ, ಅವರು (ಗೋರಕ್ಷಕರು) ಎಲ್ಲಿಗೆ ಹೋಗಿದ್ದರು ? ಎಂದು ಶಿವಸೇನೆ ತನ್ನ ಮುಖವಾಣಿಯ ಸಂಪಾದಕೀಯದಲ್ಲಿ ಕೇಳಿದೆ.
ಗೋರಕ್ಷಕರು ಪ್ರತಿಯೊಂದು ಮಟ್ಟದಲ್ಲೂ ಸಾಹಸವನ್ನು ಪ್ರದರ್ಶಿಸಬೇಕು. ಧರ್ಮದ ಹೆಸರಿನಲ್ಲಿ ಗೋರಕ್ಷಣೆ ಆವಶ್ಯಕ ಎಂದಾದರೆ, ಧರ್ಮದ ಹೆಸರಿನಲ್ಲಿ ರಾಷ್ಟ್ರದ ರಕ್ಷಣೆಯೂ ಅವಶ್ಯಕವಾಗುತ್ತದೆ ಎಂದು ಪಕ್ಷ ಪ್ರತಿಪಾದಿಸಿದೆ.
ಗೋರಕ್ಷಕರು ಪ್ರಧಾನಿಯವರ ದಾರಿಗೆ ಮುಳುವಾಗು ತ್ತಿದ್ದಾರೆ. ಅವರ ಎಚ್ಚರಿಕೆಯ ಹೊರತಾಗಿಯೂ ಇವರು ತಮ್ಮ ಕೈಗೆಲಸವನ್ನು ಬಿಡುತ್ತಿಲ್ಲ ಎಂದು ಶಿವಸೇನೆ ನುಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ