ಕಾಂಗ್ರೆಸ್ ಎಲ್ಲೆಲ್ಲಿ ಅಧಿಕಾರ ಕಳೆದುಕೊಂಡಿದೆ? ಕೈ ಜಾರಿದ ಸಿಂಹಾಸನ ಒಂದು ಅವಲೋಕನ
ಸರಕಾರ ಉರುಳಿಸಿ, ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಸರಕಾರವನ್ನು ಅಸ್ತಿತ್ವಕ್ಕೆ ತಂದಿತು.
Team Udayavani, Feb 24, 2021, 11:05 AM IST
ಪುದುಚೇರಿಯಲ್ಲಿ ಇತ್ತೀಚೆಗಷ್ಟೇ ಕಾಂಗ್ರೆಸ್ ಸರಕಾರ ಉರುಳಿದೆ. 2014ರಿಂದ ಇಲ್ಲಿಯವರೆಗೆ ಕಾಂಗ್ರೆಸ್ ಹೀಗೆ ಅಧಿಕಾರ ಕಳೆದು ಕೊಂಡಿದ್ದು 6ನೇ ಬಾರಿ. ಇಲ್ಲಿಯವರೆಗಿನ ಅಂಥ ಪ್ರಕರಣಗಳ ಒಂದು ಸಿಂಹಾವಲೋಕನ ಇಲ್ಲಿದೆ.
ಅರುಣಾಚಲ ಪ್ರದೇಶ (2016)
2014ರ ಚುನಾವಣೆಯಲ್ಲಿ ಕಾಂಗ್ರೆಸ್ 42 ಸ್ಥಾನ (ಒಟ್ಟು ಸ್ಥಾನ 60) ಗೆದ್ದು ಅಧಿಕಾರಕ್ಕೆ ಬಂದಿತ್ತು. ಆದರೆ ಸಿಎಂ ಪೆಮಾ ಖಂಡು, 2016ರಲ್ಲಿ ತಮ್ಮೊಂದಿಗೆ 40 ಶಾಸಕರನ್ನು ಕರೆದುಕೊಂಡು ಬಿಜೆಪಿ ಜತೆ ಕೈ ಜೋಡಿಸಿ ಸರಕಾರ ರಚಿಸಿದರು.
ಇದನ್ನೂ ಓದಿ:ಉತ್ತರ, ದಕ್ಷಿಣ ಭಾರತವನ್ನು ವಿಭಜಿಸುತ್ತಿದ್ದಾರೆ : ರಾಹುಲ್ ವಿರುದ್ಧ ಬಿಜೆಪಿ ನಾಯಕರ ಆರೋಪ..!
ಕರ್ನಾಟಕ (2018)
ಕರ್ನಾಟಕದಲ್ಲಿ 2018ರ ಚುನಾವಣೆ ಅನಂತರ ಜೆಡಿಎಸ್ -ಕಾಂಗ್ರೆಸ್ ಜಂಟಿಯಾಗಿ ಸರಕಾರ ರಚಿಸಿದವು. ಅನಂತರ, ಕಾಂಗ್ರೆಸ್ನ 16 ಶಾಸಕ ರನ್ನು ಸೆಳೆದ ಬಿಜೆಪಿ, ಕುಮಾರಸ್ವಾಮಿ ಸರಕಾರ ಕೆಡವಿ ತನ್ನ ಸರಕಾರ ರಚಿಸಿತು.
ಮಣಿಪುರ (2017)
2017ರ ಚುನಾವಣೆಯಲ್ಲಿ ಕಾಂಗ್ರೆಸ್ 27 ಸ್ಥಾನ (ಒಟ್ಟು ಸ್ಥಾನ 40) ಗೆದ್ದಿತ್ತು. ಆದರೆ ಅಲ್ಲಿನ ರಾಜ್ಯಪಾಲರು ಬಿಜೆಪಿಗೆ (21 ಸ್ಥಾನ) ಸರಕಾರ ರಚಿಸಲು ಆಹ್ವಾನಿಸಿದರು. ಆಗ 9 ಕಾಂಗ್ರೆಸ್ ಶಾಸಕರನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಬಿಜೆಪಿ, ಸರಕಾರ ರಚಿಸಿತು.
ಗೋವಾ (2017)
2017ರ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನ (ಒಟ್ಟು 40) ಗೆಲ್ಲುವ ಮೂಲಕ ಅತೀ ದೊಡ್ಡ ಪಕ್ಷವಾಗಿ ಪರಿಗಣಿಸಲ್ಪಟ್ಟಿತ್ತು. ಆದರೆ 13 ಶಾಸಕರನ್ನು ಹೊಂದಿದ್ದ ಬಿಜೆಪಿ, ಕಾಂಗ್ರೆಸ್ನಿಂದ ಒಬ್ಬರನ್ನು ಹಾಗೂ ಇತರ 10 ಶಾಸಕರನ್ನು ತನ್ನತ್ತ ಸೆಳೆದುಕೊಂಡು ಸರಕಾರ ರಚಿಸಿತು.
ಮಧ್ಯಪ್ರದೇಶ (2020)
2018ರಲ್ಲಿ ಕಮಲ್ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ನಿಂದ ಸರಕಾರ ರಚನೆ. ಡಿಸಿಎಂ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಬೆಂಬಲಿಗರನ್ನು ತನ್ನತ್ತ ಸೆಳೆದ ಅಲ್ಲಿನ ಸರಕಾರ ಉರುಳಿಸಿ, ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಸರಕಾರವನ್ನು ಅಸ್ತಿತ್ವಕ್ಕೆ ತಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ