ಭಾರತದ ಮೌಲ್ವಿಗಳು ಇನ್ನೂ 11ನೇ ಶತಮಾನದಲ್ಲಿದ್ದಾರೆ; ಸ್ವಾಮಿ
Team Udayavani, Nov 15, 2017, 2:43 PM IST
ನವದೆಹಲಿ: ಸೌದಿ ಅರೇಬಿಯಾ ಯೋಗ ಕಲಿಕೆ ಹಾಗೂ ಬೋಧನೆಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಮುಸ್ಲಿಮರ ವಿರುದ್ಧದ ವಾಗ್ದಾಳಿಯನ್ನು ಮುಂದುವರಿಸಿರುವ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ, ಭಾರತದಲ್ಲಿರುವ ಮುಸ್ಲಿಮ್ ಮಾಲ್ವಿಗಳು ಇನ್ನೂ ಸಂಪ್ರದಾಯವಾದಿಗಳಾಗಿಯೇ ಮುಂದುವರಿದಿದ್ದಾರೆ ಎಂದು ದೂರಿದರು.
ಇಸ್ಲಾಮಿಕ್ ರಾಷ್ಟ್ರಗಳು ಪ್ರಗತಿಯತ್ತ ಹೆಜ್ಜೆ ಹಾಕುತ್ತಿದ್ದರೆ ಭಾರತದಲ್ಲಿರುವ ಮುಸ್ಲಿಮರು ಸಂಕುಚಿತ ದೃಷ್ಟಿಕೋನ ಹೊಂದಿದ್ದಾರೆ ಎಂದು ಸ್ವಾಮಿ ವಾಗ್ದಾಳಿ ನಡೆಸಿದರು.
ಭಾರತದಲ್ಲಿರುವ ಎಲ್ಲಾ ಮೌಲ್ವಿಗಳು ಕಟ್ಟಾ ಸಂಪ್ರದಾಯವಾದಿಗಳಾಗಿದ್ದಾರೆ, ಜಗತ್ತಿನಲ್ಲಿರುವ ಇಸ್ಲಾಮಿಕ್ ರಾಷ್ಟ್ರಗಳು ಆಧುನಿಕತೆಯತ್ತ ವಾಲುತ್ತಿವೆ, ಆದರೆ ಇವರು ಇನ್ನೂ 11ನೇ ಶತಮಾನದಲ್ಲಿಯೇ ಬದುಕುತ್ತಿದ್ದಾರೆ ಎಂದು ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
ಯೋಗ ಎನ್ನುವುದು ವೈಜ್ಞಾನಿಕವಾದದ್ದು ಹೀಗಾಗಿ ಸೂರ್ಯ ನಮಸ್ಕಾರದ ವಿರುದ್ಧ ಧಾರ್ಮಿಕವಾಗಿ ಅದನ್ನು ವಿರೋಧಿಸಬೇಕಾದ ಅಗತ್ಯವಿರಲಿಲ್ಲ ಎಂದರು. ಸೂರ್ಯ ಒಂದು ಗ್ರಹ, ಹಿಂದುಗಳು ದೇವರು ಎಂದು ಕರೆಯುತ್ತಾರೆ, ಆದರೆ ನೀವು ಸೂರ್ಯ ಗ್ರಹ ಎಂದು ಕರೆಯಿರಿ ಎಂದು ಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ