ಮುಂದಿನ ಬಾಂಬ್ ಸ್ಫೋಟಗೊಳ್ಳುವವರೆಗೆ ಕಾಯಬೇಕೆ ? ರಾಜ್ ಠಾಕ್ರೆ ಸವಾಲ್
Team Udayavani, Feb 9, 2020, 7:17 PM IST
ಮುಂಬಯಿ: ಮುಂದಿನ ಬಾಂಬ್ ಸ್ಫೋಟಗೊಳ್ಳುವವರೆಗೆ ಕಾದು ಕುಳಿತುಕೊಳ್ಳಬೇಕೆ? ಎಂದು ಪ್ರಶ್ನಿಸುವ ಮೂಲಕ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ರವಿವಾರ ಇಲ್ಲಿ ಪಾಕಿಸ್ತಾನಿ ಮತ್ತು ಬಾಂಗ್ಲಾದೇಶದ ಒಳನುಸುಳುಕೋರರ ವಿರುದ್ಧ ವಾಗ್ಧಾಳಿ ನಡೆಸಿದರು. ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧವೂ ಅವರು ತೀವ್ರ ವಾಗ್ಧಾಳಿ ನಡೆಸಿದರು.
ಅಮೆರಿಕದಲ್ಲಿ ಯಾವ ಅವಳಿ ಗೋಪುರಗಳನ್ನು ನೆಲಸಮಗೊಳಿಸಲಾಯಿತೋ, ಅದರ ಹಿಂದಿನ ಮೆದುಳು ಒಸಾಮಾ ಬಿನ್ ಲಾಡೆನ್ ಆಗಿದ್ದ. ಆತನನ್ನು ಕೂಡ ಪಾಕಿಸ್ತಾನದಲ್ಲೇ ಪತ್ತೆ ಮಾಡಲಾಗಿತ್ತು.
ನಮ್ಮ ದೇಶದಲ್ಲಿ ಇಲ್ಲಿಯವರೆಗೆ ಅನೇಕ ಬಾಂಬ್ ಸ್ಫೋಟಗಳು ನಡೆದಿವೆ. ಅನೇಕ ಜನರು ಕೊಲ್ಲಲ್ಪಟ್ಟಿದ್ದಾರೆ. ಈ ಎಲ್ಲ ಬಾಂಬ್ ಸ್ಫೋಟಗಳ ಹಿಂದೆ ಯಾರು ಇದ್ದರು ? 1992-93ರಲ್ಲಿ ಮುಂಬಯಿಯಲ್ಲಿ ನಡೆದ ಸ್ಫೋಟದ ಹಿಂದೆ ಯಾರು ಇದ್ದರು ? ಆ ಬಾಂಬರ್ ಯಾರು? ಎಂಬುದು ಎಲ್ಲರಿಗೂ ಗೊತ್ತಿದೆ.
ಒಳನುಸುಳುಕೋರರು ನಮಗೆ ಆಪತ್ತು ಆಗಿದ್ದು ಕೂಡಲೇ ಅವರನ್ನು ದೇಶದಿಂದ ಹೊರಹಾಕಬೇಕು ಮತ್ತು ಅದಕ್ಕಾಗಿ ಮುಂದಿನ ಬಾಂಬ್ ಸ್ಫೋಟ ನಡೆಯುವವರೆಗೆ ಕಾಯಬಾರದು ಎಂದರು.
ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಒಳನುಸುಳುಕೋರರನ್ನು ದೇಶದಿಂದ ಹೊರಹಾಕಬೇಕೆಂದು ಒತ್ತಾಯಿಸಿ ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್ ಮುಂಬಯಿಯಲ್ಲಿ ಬೃಹತ್ ಮೆರವಣಿಗೆಯನ್ನು ನಡೆಸಿತು. ಆಜಾದ್ ಮೈದಾನದಲ್ಲಿ ರಾಜ್ ಠಾಕ್ರೆ ಅವರ ಭಾಷಣದೊಂದಿಗೆ ಇದು ಸಂಪನ್ನಗೊಂಡಿತು.
ಸಿಎಎ ವಿರುದ್ಧ ಪ್ರತಿಭಟಿಸುತ್ತಿರುವ ಮುಸ್ಲಿಮರು ಏಕೆ ಹಾಗೆ ಮಾಡುತ್ತಿ¨ªಾರೆಂದು ನನಗೆ ಅರ್ಥವಾಗುತ್ತಿಲ್ಲ. ಸಿಎಎ ಇಲ್ಲಿ ಜನಿಸಿದ ಮುಸ್ಲಿಮರಿಗಾಗಿ ಅಲ್ಲ ಎಂದು ರಾಜ್ ಠಾಕ್ರೆ ಅವರು ದೇಶಾದ್ಯಂತ ಮುಸ್ಲಿಮರು ಹೆಚ್ಚಾಗಿ ಮುನ್ನಡೆಸುತ್ತಿರುವ ಸಿಎಎ ವಿರುದ್ಧದ ಪ್ರತಿಭಟನೆಗಳನ್ನು ಉಲ್ಲೇಖಿಸಿ ಹೇಳಿದರು. ನೀವು ನಿಮ್ಮ ಶಕ್ತಿಯನ್ನು ಯಾರಿಗೆ ತೋರಿಸುತ್ತಿದ್ದೀರಿ ? ಎಂದವರು ಭಾಷಣದಲ್ಲಿ ಕೇಳಿದರು. ದಕ್ಷಿಣ ಮುಂಬಯಿಯ ಹಿಂದೂ ಜಿಮ್ಖಾನಾದಿಂದ ಪ್ರಾರಂಭವಾದ ಈ ಮೆರವಣಿಗೆಗೆ ಬರುವ ಮೊದಲು ಠಾಕ್ರೆ ಅವರು ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ಮೆರವಣಿಗೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ್ದ ಎಂಎನ್ಎಸ್ ಕಾರ್ಯಕರ್ತರು ಸಿಎಎ ಮತ್ತು ಎನ್ಆರ್ಸಿ ಪರವಾಗಿ ಘೋಷಣೆಗಳನ್ನು ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್