Lok Sabha: ಅವಿಶ್ವಾಸ ನಿರ್ಣಯವನ್ನು ತಂದವರಿಗೆ ಅದರಲ್ಲಿ ವಿಶ್ವಾಸವಿಲ್ಲ: ಸಿಂಧಿಯಾ
Team Udayavani, Aug 10, 2023, 4:59 PM IST
ಹೊಸದಿಲ್ಲಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದು, ಇಂಡಿಯಾ ಬಣವನ್ನು ಲೇವಡಿ ಮಾಡಿದ್ದಾರೆ. ಅವಿಶ್ವಾಸ ನಿರ್ಣಯವನ್ನು ತಂದವರಿಗೆ ಅದರಲ್ಲಿ ವಿಶ್ವಾಸವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಬುಧವಾರ ಪ್ರಧಾನಿಯವರ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಮಾತಿನ ದಾಳಿಗೂ ಅವರು ಪ್ರತಿಕ್ರಿಯೆ ನೀಡಿದ್ದಾರೆ. “ನಿನ್ನೆ ರಾಹುಲ್ ಗಾಂಧಿ ಅವರು ಪ್ರಧಾನಿಯವರಿಗೆ ಮಣಿಪುರ ಭಾರತದ ಭಾಗವಲ್ಲ ಎಂದಿದ್ದರು. ಆದರೆ ಈ ಪ್ರಧಾನಿ ಈಶಾನ್ಯವನ್ನು ಪ್ರಪಂಚದೊಂದಿಗೆ ಜೋಡಿಸಿದ್ದಾರೆ, ಅವರು ಈಶಾನ್ಯದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ, ಭಾರತವನ್ನು ಇಬ್ಭಾಗವಾಗಿ ನೋಡುವ ಸಿದ್ಧಾಂತ ನಿಮ್ಮದು, ನಮ್ಮದಲ್ಲ” ಎಂದು ಸಿಂಧಿಯಾ ಹೇಳಿದರು.
ಇದನ್ನೂ ಓದಿ:No trust motion;ಭಾಷಣಕ್ಕೆ ಕ್ಷಣಗಣನೆ-ವಿಪಕ್ಷಗಳ ಅವಿಶ್ವಾಸ ನಿರ್ಣಯದ ಬಗ್ಗೆ ಮೋದಿ ಉತ್ತರ
“ನಾನು ಸಂಸತ್ತಿನಲ್ಲಿ 20 ವರ್ಷಗಳನ್ನು ಕಳೆದಿದ್ದೇನೆ, ಆದರೆ ಇಂತಹುದನ್ನು ನಾನು ಎಂದಿಗೂ ನೋಡಿಲ್ಲ. ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿ, 140 ಕೋಟಿ ಭಾರತೀಯರ ಹೃದಯದಲ್ಲಿ ನೆಲೆಸಿರುವ ಪ್ರಧಾನಿಯ ಬಗ್ಗೆ ಪ್ರತಿಪಕ್ಷಗಳು ಬಳಸಿದ ಪದಕ್ಕಾಗಿ ಸಂಸತ್ತಿನ ಮುಂದೆ ಇಲ್ಲದಿದ್ದರೆ ದೇಶದ ಜನರ ಮುಂದೆ ಕ್ಷಮೆಯಾಚಿಸಬೇಕಾಗುತ್ತದೆ” ಎಂದು ಅವರು ಲೋಕಸಭೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಹೇಳಿದರು.
“ಈ ಅವಿಶ್ವಾಸ ನಿರ್ಣಯವು ಮಣಿಪುರದ ಬಗ್ಗೆ ಅಲ್ಲ, ಇದು ಅವರ ರಾಜಕೀಯ ಕೇಕ್ ಅನ್ನು ಬೇಯಿಸುವ ನೆಪವಾಗಿದೆ, ಸಂಸತ್ತಿನ ಹೊರಗೆ ಮಣಿಪುರ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಸೂಕ್ಷ್ಮ ಹೇಳಿಕೆ ನೀಡಿದ್ದಾರೆ ಆದರೆ ಅವರು ಸಂಸತ್ತಿನ ಒಳಗೆ ಮಾತನಾಡಬೇಕು ಎಂದು ಅವರು ಹಠ ಮಾಡುತ್ತಿದ್ದಾರೆ” ನಾಗರಿಕ ವಿಮಾನಯಾನ ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು