ನಾವು ಇತಿಹಾಸ ಬರೆಯುವುದನ್ನು ತಪ್ಪಿಸಲು ಅಸಾಧ್ಯ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುಡುಗು


Team Udayavani, Jun 11, 2022, 7:10 AM IST

ನಾವು ಇತಿಹಾಸ ಬರೆಯುವುದನ್ನು ತಪ್ಪಿಸಲು ಅಸಾಧ್ಯ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುಡುಗು

ಹೊಸದಿಲ್ಲಿ: ಕೆಲವರು ಇತಿಹಾಸವನ್ನು ತಿರುಚಿದರು. ತಮಗೆ ಬೇಕಾದದ್ದನ್ನು ಬರೆದರು. ಆದರೆ ಈಗ ನಾವು ಇತಿಹಾಸ ಬರೆಯುವುದನ್ನು ತಡೆಯಲು ಯಾರಿಂ ದಲೂ ಸಾಧ್ಯವಿಲ್ಲ…

ಇದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಖಡಕ್‌ ಮಾತು. ಹೊಸದಿಲ್ಲಿಯ ಎನ್‌ಡಿಎಂಸಿ ಹಾಲ್‌ನಲ್ಲಿ ಶುಕ್ರವಾರ “ಮಹಾರಾಣಾಸ್‌: ಎ ತೌಸಂಡ್‌ ಇಯರ್‌ ವಾರ್‌ ಫಾರ್‌ ಧರ್ಮ’ ಎಂಬ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.

ಕರ್ನಾಟಕದಲ್ಲಿ ಶಾಲಾ ಮಕ್ಕಳ ಪಠ್ಯ ಪರಿಷ್ಕರಣೆ ವಿಚಾರದಲ್ಲಿ ವಿವಾದ ಸೃಷ್ಟಿಯಾಗಿರುವ ಮತ್ತು ಇತಿಹಾಸ ಪಠ್ಯಗಳನ್ನು ಎಡಪಂಥೀಯ ಇತಿಹಾಸಕಾರರು ಬರೆದದ್ದು, ಅದರಲ್ಲಿ ಹಿಂದೂ ರಾಜರು, ಹಿಂದೂ ಸಾಮ್ರಾಜ್ಯಗಳ ಕೊಡುಗೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಆರೆಸ್ಸೆಸ್‌, ಬಿಜೆಪಿ ಆರೋಪ ಮಾಡುತ್ತಿರುವ ನಡುವೆಯೇ ಶಾ ನೀಡಿ ರುವ ಈ ಹೇಳಿಕೆ ಮಹತ್ವ ಪಡೆದಿದೆ.

ಸತ್ಯವನ್ನು ಪ್ರಚುರಪಡಿಸುತ್ತೇವೆ ಇತಿಹಾಸಗಳನ್ನು ಸರಕಾರಗಳಿಗೆ ಸೃಷ್ಟಿಸಲು ಆಗದು. ಏಕೆಂದರೆ ಅವುಗಳನ್ನು ಸತ್ಯ ಘಟನೆ ಆಧರಿಸಿ ಬರೆದಿರ ಲಾಗುತ್ತದೆ. ಭಾರತದ ಬಹುತೇಕ ಇತಿಹಾಸಕಾರರು ಪಾಂಡ್ಯರು, ಚೋಳರು, ಮೌರ್ಯರು, ಗುಪ್ತರು ಮತ್ತು ಅಹೋಮರ ಭವ್ಯ ಆಡಳಿತವನ್ನು ನಿರ್ಲಕ್ಷಿಸಿ, ಕೇವಲ ಮೊಘಲರಿಗಷ್ಟೇ ಆದ್ಯತೆ ನೀಡಿದ್ದರು. ಆಕ್ರಮಣಕಾರರ ವಿರುದ್ಧ ಭಾರತೀಯ ರಾಜರು ಮಾಡಿರುವಂಥ ಹಲವಾರು ಯು ದ್ಧಗಳು, ಹೋರಾಟಗಳನ್ನು ಜನರು ಮರೆತೇ ಬಿಟ್ಟಿದ್ದಾರೆ.

ಅಸ್ಸಾಂನ ಅಹೋಮ್‌ ರಾಜರು, ವಾಯವ್ಯ ಭಾಗದಲ್ಲಿ ಶಿವಾಜಿ ನೇತೃತ್ವದ ಮರಾಠರು ನಡೆಸಿದ ಹೋರಾಟದಿಂದಾಗಿ ದೇಶವು ಈಗ ಇಲ್ಲಿಗೆ ಬಂದು ನಿಂತಿದೆ. ಇಂಥ ಯುದ್ಧಗಳ ಬಗ್ಗೆ ಮುಂದಿನ ತಲೆಮಾರಗಳಿಗೆ ತಿಳಿಸ ಬೇಕಾದ್ದು ನಮ್ಮ ಕರ್ತವ್ಯ. ಅದನ್ನು ತಡೆಯಲು ಯಾರಿಂ ದಲೂ ಸಾಧ್ಯವಿಲ್ಲ.

ಹೊಸ ಇತಿಹಾಸ ಪುಸ್ತಕಗಳಲ್ಲಿ ಸತ್ಯವನ್ನು ಪ್ರಚುರಪಡಿಸುವ ನಮ್ಮ ಪ್ರಯತ್ನವು ದೊಡ್ಡ ಮಟ್ಟಿನ ದ್ದಾಗಿರುತ್ತದೆ ಮತ್ತು ಪರಿಣಾಮಕಾರಿಯೂ ಆಗಿರುತ್ತದೆ ಎಂದೂ ಶಾ ಹೇಳಿದ್ದಾರೆ. ನಮ್ಮ ದೇಶದ ವೈಭವಯುತ ಇತಿಹಾಸವನ್ನು ಸಾರ್ವಜನಿಕರ ಮುಂದಿಡಬೇಕಿದೆ. ನಾವು ದೊಡ್ಡಮಟ್ಟದಲ್ಲಿ ಶ್ರಮಿಸಿದರೆ ಸುಳ್ಳಿನ ಕಂತೆಗಳು ತನ್ನಿಂತಾನೇ ಅಳಿಯಲಾರಂಭಿಸುತ್ತವೆ. ದೇಶವನ್ನಾಳಿದ ಹಿಂದೂ ಸಾಮ್ರಾಟರ ಪರಾಕ್ರಮಗಳನ್ನು ಬರೆಯ ತೊಡಗಿದಾಗ ಸತ್ಯ ಹೊರಹೊಮ್ಮಲು ಶುರುವಾಗುತ್ತದೆ. ಇಂಥ ಸತ್ಯವನ್ನು ಬರೆಯುವುದರಿಂದ ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾವೀಗ ಸ್ವತಂತ್ರರಾಗಿದ್ದೇವೆ. ನಮ್ಮ ಇತಿಹಾಸ ವನ್ನು ನಾವೇ ಬರೆಯುತ್ತೇವೆ ಎಂದೂ ಗುಡುಗಿದ್ದಾರೆ ಶಾ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.