ರಫೇಲ್ ಆರೋಪ; ರಾಹುಲ್ ಗಾಂಧಿಗೆ ಕುಮ್ಮಕ್ಕು ಕೊಟ್ಟಿದ್ದು ಯಾರು? ಕೂಡಲೇ ಕ್ಷಮೆಯಾಚಿಸಿ; BJP
Team Udayavani, Nov 14, 2019, 3:44 PM IST
ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚೌಕೀದಾರ್ ಚೋರ್ ಹೈ ಎಂದು ಆರೋಪಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ರಾಹುಲ್ ಗಾಂಧಿ ಕೇವಲ ಪ್ರಧಾನಿಯನ್ನು ಮಾತ್ರ ಕಳ್ಳ ಎಂದು ಆರೋಪಿಸಿಲ್ಲ, ಆದರೆ ಫ್ರಾನ್ಸ್ ನ ಮಾಜಿ ಪ್ರಧಾನಿ ಹೇಳಿಕೆಯ ಬಗ್ಗೆ ಸುಳ್ಳು ಹೇಳಿ ಅದನ್ನು ಸುಪ್ರೀಂಕೋರ್ಟ್ ಹೇಳಿದ್ದು ಎಂದು ಆರೋಪಿಸಿರುವುದಾಗಿ ಕೇಂದ್ರ ಸಚಿವರ ರವಿಶಂಕರ್ ಪ್ರಸಾದ್ ಆರೋಪಿಸಿದರು.
ಈ ರೀತಿ ಆರೋಪಿಸಲು ರಾಹುಲ್ ಗಾಂಧಿಗೆ ಕುಮ್ಮಕ್ಕು ನೀಡಿದವರು ಯಾರು ಎಂಬುದು ದೇಶದ ಜನರಿಗೆ ತಿಳಿಯಬೇಕಾಗಿದೆ. ಇಡೀ ಪ್ರಚಾರ ತುಂಬಾ ಅನುಮಾನಸ್ಪದವಾಗಿತ್ತು ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ರಾಹುಲ್ ಗಾಂಧಿ ಇಂದು ಕ್ಷಮೆಯಾಚಿಸಬೇಕಾಗದ ಅಗತ್ಯವಿದೆ. ನಿಮ್ಮನ್ನು ರಕ್ಷಿಸಿಕೊಳ್ಳಲು ಕೋರ್ಟ್ ನಲ್ಲಿ ಕ್ಷಮೆಯಾಚಿಸಿದ್ದೀರಿ, ಆದರೆ ದೇಶದ ಜನರ ಮುಂದೆ ಕ್ಷಮೆಯಾಚಿಸುವುದಿಲ್ಲವೇ ಎಂದು ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ