ಉಪರಾಷ್ಟ್ರಪತಿ ಅಭ್ಯರ್ಥಿಗೆ ಬಿಜೆಪಿಯ 3 ಮಾನದಂಡ
Team Udayavani, Jul 14, 2017, 4:00 AM IST
ಹೊಸದಿಲ್ಲಿ: ವಿಪಕ್ಷಗಳೆಲ್ಲ ಸೇರಿ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಗೋಪಾಲಕೃಷ್ಣ ಗಾಂಧಿ ಅವರನ್ನು ಆಯ್ಕೆ ಮಾಡಿದ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲೂ ಅಭ್ಯರ್ಥಿಯ ಹುಡುಕಾಟ ಶುರುವಾಗಿದೆ. ವಿಶೇಷವೆಂದರೆ, ಬಿಜೆಪಿ ಹಾಗೂ ಅದರ ಸಲಹೆಗಾರರು ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗೆ 3 ಮಾನದಂಡಗಳನ್ನು ಹಾಕಿಕೊಂಡಿದ್ದಾರೆ. ಅವೆಂದರೆ, ಬಿಜೆಪಿಯ ಮೂಲ ಸಿದ್ಧಾಂತಗಳನ್ನು ಪ್ರತಿಪಾದಿಸುವ ವ್ಯಕ್ತಿಯಾಗಿರಬೇಕು, ರಾಜ್ಯಸಭೆಯ ಕಲಾಪಗಳು ಸುಗಮವಾಗಿ ನಡೆಯುವಂತೆ ನೋಡುವವರಾಗಬೇಕು ಹಾಗೂ ದಲಿತ ನಾಯಕರಾದ ರಾಮನಾಥ್ ಕೋವಿಂದ್ರಂತೆ ಬಿಜೆಪಿಯನ್ನು ಬೆಂಬಲಿಸುವ ಸಮುದಾಯವೊಂದನ್ನು ಪ್ರತಿನಿಧಿಸುವವರಾಗಿರಬೇಕು.
ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಈ ಕುರಿತು ಸಮಾಲೋಚನೆ ಆರಂಭಿಸಿದ್ದಾರೆ. ಶಾ ಅವರು ಆರೆಸ್ಸೆಸ್ ನಾಯಕರಾದ ಡಾ| ಕೃಷ್ಣ ಗೋಪಾಲ ಶರ್ಮಾ ಹಾಗೂ ಸುರೇಶ್ ಭಯ್ನಾಜಿ ಜೋಷಿ ಅವರ ಜತೆ ಚರ್ಚಿಸಿದ್ದಾರೆ. ಒಂದೆರಡು ದಿನಗಳಲ್ಲೇ ಮೋದಿ, ಶಾ ತಮ್ಮ ಆದ್ಯತೆಗಳನ್ನು ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು