ರಾಹುಲ್- ಸೋನಿಯಾ ಒಪ್ಪುತ್ತಿಲ್ಲ, ಪ್ರಿಯಾಂಕಾ ಕಡೆ ಒಲವಿಲ್ಲ: ಯಾರಿಗೆ ಸಿಗಲಿದೆ ಕೈ ಗದ್ದುಗೆ?

25 ವರ್ಷಗಳಲ್ಲೇ ಮೊದಲ ಬಾರಿಗೆ ಗಾಂಧಿ ಕುಟುಂಬದ ಹೊರತಾದ ಅಧ್ಯಕ್ಷ?

Team Udayavani, Aug 21, 2022, 10:16 AM IST

who will be the next chief of congress party

ಹೊಸದಿಲ್ಲಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಪ್ರಮುಖವಾದ ಅಧ್ಯಕ್ಷ ಸ್ಥಾನದ ಗೊಂದಲ ಇನ್ನೂ ಬಗೆಹರಿದಿಲ್ಲ. ಇತರ ಪಕ್ಷಗಳು 2024ರ ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದರೆ ಕಾಂಗ್ರೆಸ್ ನಲ್ಲಿ ಪಕ್ಷದ ಅಧ್ಯಕ್ಷ ಯಾರೆಂಬುದೇ ಇನ್ನೂ ಖಚಿತವಾಗಿಲ್ಲ. ಹೀಗಿರುವಾಗ ಕಾಂಗ್ರೆಸ್ ನಲ್ಲಿ ಮತ್ತೆ ಗಾಂಧಿಯೇತರ ಅಧ್ಯಕ್ಷರ ಬಗ್ಗೆ ಚರ್ಚೆಯಾಗುತ್ತಿದೆ.

ಆಗಸ್ಟ್ 21ರಿಂದ ಸೆಪ್ಟೆಂಬರ್ 20ರ ಒಳಗೆ ಹೊಸ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಕಾಂಗ್ರೆಸ್ ಕಳೆದ ವರ್ಷವೇ ಪ್ರಕಟಿಸಿತ್ತು. ಈ ಗಡುವಿಗೆ ಕೆಲವೇ ದಿನಗಳು ಬಾಕಿ ಇರುವಂತೆ ಹಲವು ಪ್ರಕ್ರಿಯೆಗಳು ಆರಂಭವಾಗಿದೆ.

2019ರ ಲೋಕಸಭೆ ಚುನಾವಣೆ ಸೋಲಿಗೆ ಹೊಣೆ ಹೊತ್ತು ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬಳಿಕ ಸೋನಿಯಾ ಗಾಂಧಿ ಅವರೇ ಮಧ್ಯಂತರ ಅಧ್ಯಕ್ಷೆಯಾಗಿ ಮುಂದುವರಿದಿದ್ದಾರೆ. ಮರಳಿ ಅಧ್ಯಕ್ಷ ಸ್ಥಾನಕ್ಕೇರುವಂತೆ ರಾಹುಲ್ ಗಾಂಧಿಗೆ ನಾಯಕರು ಹಲವು ಬಾರಿ ಒತ್ತಾಯ ಮಾಡಿದರೂ ಅದ್ಯಾವುವು ಫಲಪ್ರದವಾಗಿಲ್ಲ. ಈಗಲೂ ರಾಹುಲ್ ಅಧ್ಯಕ್ಷ ಸ್ಥಾನದಿಂದ ದೂರವೇ ಉಳಿದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ತಪ್ಪಿದ ಗುರಿ: ಉಕ್ರೇನ್ ಯುದ್ಧದ ಮಾಸ್ಟರ್ ಮೈಂಡ್ ನ ಮಗಳು ಕಾರು ಸ್ಪೋಟದಲ್ಲಿ ಸಾವು!

ಇತ್ತ ಸೋನಿಯಾ ಗಾಂಧಿ ಕೂಡಾ ಆರೋಗ್ಯ ಸಮಸ್ಯೆಯ ಕಾರಣದಿಂದ ಪೂರ್ಣ ಪ್ರಮಾಣದ ಅಧ್ಯಕ್ಷೆಯಾಗಲು ಮನಸ್ಸು ಮಾಡುತ್ತಿಲ್ಲ ಎಂದು ವರದಿಯಾಗಿದೆ. ಇನ್ನು ಗಾಂಧಿ ಕುಟಂಬದ ಮತ್ತೋರ್ವ ಪ್ರಿಯಾಂಕಾ ಗಾಂಧಿ ಅವರ ಹೆಸರು ಕೇಳಿ ಬರುತ್ತಿದೆ, ಆದರೆ ಪ್ರಿಯಾಂಕಾ ಉಸ್ತುವಾರಿ ಹೊಂದಿದ್ದ ಉತ್ತರ ಪ್ರದೇಶ ವಿಧಾನಸಭೆ ಚನಾವಣೆಯ ಹೀನಾಯ ಸೋಲಿನ ಬಳಿಕ ಪ್ರಿಯಾಂಕಾ ನಾಯಕತ್ವದ ಮೇಲೆ ಕಾಂಗ್ರೆಸ್ ನಾಯಕರಿಗೆ ಉಮೇದಿಲ್ಲ ಎನ್ನಲಾಗಿದೆ.

ಗಾಂಧಿ ಹೊರತಾದ ಅಧ್ಯಕ್ಷ?:

ಅಧ್ಯಕ್ಷ ಸ್ಥಾನಕ್ಕೇರಲು ರಾಹುಲ್ ಗಾಂಧಿ ಒಪ್ಪದೇ ಇದ್ದಲ್ಲಿ ಗಾಂಧಿ ಕುಟುಂಬದ ಹೊರತಾದ ಅಧ್ಯಕ್ಷನನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ. ಹೀಗಾದಲ್ಲಿ 1998ರ ಬಳಿಕ ಮೊದಲ ಬಾರಿ ಸೋನಿಯಾ- ರಾಹುಲ್ ಹೊರತುಪಡಿಸಿ ಉಳಿದವರೊಬ್ಬರು ಕಾಂಗ್ರೆಸ್ ಪಕ್ಷದ ಗದ್ದುಗೆಗೆ ಏರಲಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ 71 ವರ್ಷದ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಪಕ್ಷದ ಮುಖ್ಯಸ್ಥನಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಯಾರೇ ಅಧ್ಯಕ್ಷ ಸ್ಥಾನಕ್ಕೇರಿದರೂ ಗಾಂಧಿ ಕುಟುಂಬಕ್ಕೆ ಹತ್ತಿರ ಇರುವವರೇ ಆಗಿರುತ್ತಾರೆ ಎನ್ನುತ್ತವೆ ಮೂಲಗಳು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.