ಹೊಸ ಸಂಪುಟದಲ್ಲಿ ಯಾರಿಗೆ ಮಣೆ?
Team Udayavani, May 30, 2019, 6:00 AM IST
ಬಂಗಾಲದಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತರ ಕುಟುಂಬ ಸದಸ್ಯರು ಪ್ರಧಾನಿ ಮೋದಿ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ತೆರಳಲೆಂದು ದಿಲ್ಲಿಗೆ ಹೋಗುವ ರೈಲನ್ನೇರಿದರು.
ಹೊಸದಿಲ್ಲಿ: ಪ್ರಧಾನಿ ಮೋದಿ ಅವರ ನೂತನ ಸಂಪುಟದಲ್ಲಿ ಯಾರ್ಯಾರು ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಕುತೂಹಲ ದೇಶಾದ್ಯಂತ ಮನೆ ಮಾಡಿದೆ. ಆದರೆ, ಗುರುವಾರ ಸಂಜೆ 7 ಗಂಟೆಯವರೆಗೂ ಈ ಕುರಿತ ಮಾಹಿತಿ ಬಹಿರಂಗವಾಗುವುದಿಲ್ಲ.
ಬುಧವಾರ ಸಂಪುಟಕ್ಕೆ ಸಂಬಂಧಿಸಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮ್ಯಾರಥಾನ್ ಸಭೆ ನಡೆಸಿ, ಸಚಿವ ಸಂಪುಟಕ್ಕೆ ಅಂತಿಮ ಸ್ಪರ್ಶ ನೀಡಿದ್ದಾರೆ. ಸಚಿವ ಸ್ಥಾನ ಪಡೆಯುತ್ತಿರುವವರಿಗೆ ಈ ಇಬ್ಬರು ನಾಯಕರಲ್ಲಿ ಒಬ್ಬರು ಖುದ್ದಾಗಿ ದೂರವಾಣಿ ಕರೆ ಮಾಡಿ, ಮಾಹಿತಿ ತಿಳಿಸಿದ್ದಾರೆ. ಆದರೆ ಪ್ರಮಾಣ ಸ್ವೀಕಾರದವರೆಗೂ ಇದು ಗುಟ್ಟಾಗಿಯೇ ಇರಲಿದೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಜೇಟ್ಲಿ ಹುದ್ದೆಯಿಂದ ಹಿಂದೆ ಸರಿದಿರುವ ಕಾರಣ, ವಿತ್ತ ಖಾತೆಗೆ ಯಾರಿಗೆ ಸಿಗಲಿದೆ ಎಂಬ ಕುತೂಹಲ ಮೂಡಿದೆ. ರೈಲ್ವೇ ಸಚಿವರಾಗಿದ್ದ ಪಿಯೂಷ್ ಗೋಯಲ್ಗೆ ಈ ಖಾತೆ ಸಿಗುವ ಸಾಧ್ಯತೆಯಿದೆ. ಜತೆಗೆ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೆಸರು ಕೂಡ ವಿತ್ತ ಖಾತೆಗೆ ಕೇಳಿಬರುತ್ತಿದೆ. ಅಲ್ಲದೆ, 4 ಪ್ರಮುಖ ಹುದ್ದೆಗಳಾದ ಹಣಕಾಸು, ಗೃಹ, ರಕ್ಷಣೆ ಅಥವಾ ವಿದೇಶಾಂಗ ಖಾತೆಯಲ್ಲಿ ಯಾವುದಾದರೂ ಒಂದನ್ನು ಅಮಿತ್ ಶಾಗೆ ನೀಡುವ ಸಾಧ್ಯತೆ ಅಧಿಕವಾಗಿದೆ.
2ನೇ ಅವಧಿಯ ಸಂಪುಟದಲ್ಲಿ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಗಡ್ಕರಿ, ನಿರ್ಮಲಾ ಸೀತಾರಾಮನ್, ನರೇಂದ್ರ ಸಿಂಗ್ ಥೋಮರ್, ಜಾವಡೇಕರ್, ರವಿಶಂಕರ್ ಪ್ರಸಾದ್, ಧರ್ಮೇಂದ್ರ ಪ್ರಧಾನ್, ಸ್ಮತಿ ಇರಾನಿ ಅವರಿಗೆ ಸಚಿವ ಸ್ಥಾನ ಕಟ್ಟಿಟ್ಟ ಬುತ್ತಿ ಎನ್ನಲಾಗಿದೆ. ವಿದೇಶಾಂಗ ಸಚಿವೆ ಸುಷ್ಮಾ ಕೂಡ ಅನಾರೋಗ್ಯ ಹಿನ್ನೆಲೆಯಲ್ಲಿ ಈ ಬಾರಿ ಸ್ಪರ್ಧಿಸಿರಲಿಲ್ಲ. ಆದರೆ ಅವರೂ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಮಾರು 60 ಸಚಿವರು ಗುರುವಾರ ಪ್ರಮಾಣ ಸ್ವೀಕರಿಸಲಿದ್ದಾರೆ.
ರಾಧಾಮೋಹನ್ ಸಿಂಗ್ಗೆ ಮತ್ತೆ ಕೇಂದ್ರ ಕೃಷಿ ಸಚಿವ ಸ್ಥಾನ ನೀಡದೇ ಇರಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಜೆಡಿಯು ಹಾಗೂ ಶಿವಸೇನೆ ತಲಾ 2ಸಚಿವ ಸ್ಥಾನಗಳ ನಿರೀಕ್ಷೆಯಲ್ಲಿದ್ದರೆ, ಪಾಸ್ವಾನ್ ಅವರ ಎಲ್ಜೆಪಿ ಹಾಗೂ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆಗೆ ತಲಾ 1 ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ. ಒಡಿಶಾ ಮತ್ತು ಪ.ಬಂಗಾಲದಲ್ಲಿ ಬಿಜೆಪಿ ಪ್ರಾಬಲ್ಯ ಹೆಚ್ಚಿದ್ದರಿಂದ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇದೆ.
2 ಇದೇ ಮೊದಲು ಎಂಬಂತೆ, ಪಶ್ಚಿಮ ಬಂಗಾಲದಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತರ ಕುಟುಂಬ ಸದಸ್ಯರಿಗೆ ಆಹ್ವಾನ ನೀಡಲಾಗಿದೆ. ಮೋದಿಯವರು ಯಾವತ್ತೂ ಕಾರ್ಯಕರ್ತರ ಜತೆಗಿರುತ್ತಾರೆ ಎಂಬ ಸಂದೇ ಶವನ್ನೂ ಈ ಮೂಲಕ ರವಾನಿಸಲಾಗಿದೆ.
3 ಸುಮಾರು 6,500 ಅತಿಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದು, ಇದು ಹಿಂದೆಂದಿಗಿಂತಲೂ ಅತಿ ಹೆಚ್ಚು ಎಂದು ಹೇಳಲಾಗಿದೆ. 2014ರಲ್ಲಿ ಮೋದಿ ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಸುಮಾರು ಐದು ಸಾವಿರ ಅತಿಥಿಗಳು ಇದ್ದರು.
2 ಹೈ ಟೀ ಮೆನುವಿನಲ್ಲಿ ಲೆಮನ್ ಟಾರ್ಟ್(ಡೆಸರ್ಟ್), ಸ್ಯಾಂಡ್ವಿಚ್ಗಳು, ಸಮೋಸಾ, ಸಿಹಿ ರಾಜ್ಭೋಗ್, ಪನೀರ್ ಟಿಕ್ಕಾ ಇರುತ್ತದೆ. ಅತಿಥಿಗಳ ಆದ್ಯತೆಯ ಮೇರೆಗೆ ಸಸ್ಯಾಹಾರ, ಮಾಂಸಾಹಾರದ ಆಯ್ಕೆ ಇರುತ್ತವೆ.
3 ಬಿಮ್ಸ್ಟೆಕ್ ನಾಯಕರಿಗೆ ಔತಣಕೂಟದ ಸಕಲ ಏರ್ಪಾಟುಗಳನ್ನೂ ರಾಷ್ಟ್ರಪತಿ ಭವನದ ಬಾಣಸಿಗರೇ ಮಾಡಿದ್ದಾರೆ. ಔತಣಕೂಟದ ಪ್ರಮುಖ ಹೈಲೈಟ್ ಎಂದರೆ, ‘ದಾಲ್ ರೈಸಿನಾ’. ಇದನ್ನು ಸಿದ್ಧಪಡಿಸಲು ಬರೋಬ್ಬರಿ 48 ಗಂಟೆಗಳೇ ಬೇಕಾಗುತ್ತದೆ. ಶೆಫ್ ಮಚೀಂದ್ರಾ ಕಸ್ತೂರೆ ಅವರ ನೇತೃತ್ವದಲ್ಲಿ ದಾಲ್ ರೈಸಿನಾವನ್ನು ತಯಾರಿಸಲಾಗಿದೆ. ಇದರೊಂದಿಗೆ ಅವರು ರಾನ್-ಎ-ಅಲಿ-ಶಾನ್ ಎಂಬ ಖಾದ್ಯವನ್ನೂ ಸಿದ್ಧಪಡಿಸಿದ್ದಾರೆ. ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಭೇಟಿ ವೇಳೆಯೂ ಕಸ್ತೂರೆ ಅವರು ಇದನ್ನು ಸಿದ್ಧಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ