ಸಾವರ್ಕರ್ ಹೇಡಿಯಾಗಿದ್ರೆ ಇಂದಿರಾಗಾಂಧಿ ಗೌರವಿಸಿದ್ಯಾಕೆ: ಕಾಂಗ್ರೆಸ್ ಗೆ ಇತಿಹಾಸಕಾರ ಸಂಪತ್
ವೀರ ಸಾವರ್ಕರ್ ಕುರಿತು ಆಕ್ಷೇಪ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಮುಖಂಡರು ಇತಿಹಾಸದ ಪುಟಗಳನ್ನು ತಿರುವಿ ಹಾಕಬೇಕಾಗಿದೆ
Team Udayavani, Aug 17, 2022, 5:36 PM IST
ನವದೆಹಲಿ: ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಮತ್ತು ಟಿಪು ಸುಲ್ತಾನ್ ನಡುವಿನ ವಾಕ್ಸಮರ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತಾರಕಕ್ಕೇರಿರುವ ನಡುವೆಯೇ ಇತಿಹಾಸಕಾರ, ಲೇಖಕ ವಿಕ್ರಮ್ ಸಂಪತ್ ಕಾಂಗ್ರೆಸ್ ನಿಲುವಿನ ಬಗ್ಗೆ ಬುಧವಾರ (ಆಗಸ್ಟ್ 17) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಲೇಜು ಅಧ್ಯಕ್ಷ,ಪ್ರಾಂಶುಪಾಲರ ಮೇಲೆ ಎಫ್ಐಆರ್
ವೀರ ಸಾವರ್ಕರ್ ಕುರಿತು ಆಕ್ಷೇಪ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಮುಖಂಡರು ಇತಿಹಾಸದ ಪುಟಗಳನ್ನು ತಿರುವಿ ಹಾಕಬೇಕಾಗಿದ್ದು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಾವರ್ಕರ್ ಅವರ ಪಾತ್ರ ಅನನ್ಯವಾದದ್ದು ಎಂದು ಬಣ್ಣಿಸಿದ್ದರು. ಒಂದು ವೇಳೆ ಸಾವರ್ಕರ್ ಹೇಡಿಯಾಗಿದ್ದರೆ ಇಂದಿರಾ ಗಾಂಧಿ ಅವರನ್ನು ಯಾಕೆ ಗೌರವಿಸಬೇಕಾಗಿತ್ತು ಎಂದು ವಿಕ್ರಮ್ ಪ್ರಶ್ನಿಸಿದ್ದಾರೆ.
ಸಾವರ್ಕರ್ ಅವರು ವಿಧಿವಶರಾದ ನಂತರ 1966ರಲ್ಲಿ ಇಂದಿರಾ ಗಾಂಧಿ ಅವರ ಗೌರವಾರ್ಥವಾಗಿ ಅಂಚೆ ಚೀಟಿಯನ್ನು ಹೊರತಂದಿದ್ದರು. ಅಷ್ಟೇ ಅಲ್ಲ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಮೂಲಕ ಸಾವರ್ಕರ್ ಕುರಿತಾದ ಸಾಕ್ಷ್ಯಚಿತ್ರ ಪಡೆದಿದ್ದರು. ಮುಂಬೈನಲ್ಲಿ ಸಾವರ್ಕರ್ ಸ್ಮಾರಕಕ್ಕೆ ಇಂದಿರಾ ಗಾಂಧಿ ವೈಯಕ್ತಿಕ ಅನುದಾನ ನೀಡಿದ್ದರು ಎಂದು ಇತಿಹಾಸಕಾರ ವಿಕ್ರಮ್ ತಿಳಿಸಿದ್ದಾರೆ.
ಇಂದು ಸಾವರ್ಕರ್ ಅವರನ್ನು ಗುರಿಯಾಗಿರಿಸಿ ಆಕ್ಷೇಪ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಮುಖಂಡರನ್ನು ಪ್ರಶ್ನಿಸಬೇಕಾಗಿದೆ. ಹಾಗಾದರೆ ಇಂದಿರಾ ಗಾಂಧಿ ಯಾಕೆ ಅವರನ್ನು ಗೌರವಿಸಿದ್ದರು ಎಂಬುದನ್ನು ಹೇಳಲಿ ಎಂದು ತಿರುಗೇಟು ನೀಡಿದ್ದಾರೆ.
ಆಧುನಿಕ ದಿನದ ಸಾವರ್ಕರ್ ಮತ್ತು ಜಿನ್ನಾ ದೇಶ ವಿಭಜನೆಯ ಪ್ರಯತ್ನವನ್ನು ಮುಂದುವರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರ ಹೇಳಿಕೆ ನಂತರ ಇತಿಹಾಸಕಾರ ವಿಕ್ರಮ್ ಇಂಡಿಯಾ ಟುಡೇಯ ಸಂದರ್ಶನದಲ್ಲಿ ಈ ಪ್ರತಿಕ್ರಿಯೆ ಕೊಟ್ಟಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ