ನಮಗೇಕೆ ಮೊದಲು ತಿಳಿಸಿಲ್ಲ?


Team Udayavani, Mar 21, 2018, 7:30 AM IST

32.jpg

ಹೊಸದಿಲ್ಲಿ: ಇರಾಕ್‌ನಲ್ಲಿ 39 ಭಾರತೀಯರು ಸಾವನ್ನಪ್ಪಿದ್ದಾರೆ ಎಂಬುದನ್ನು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಘೋಷಿಸುತ್ತಿದ್ದಂತೆಯೇ ಸಂತ್ರಸ್ತ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತು. ತಮ್ಮವರ ಸಾವಿನ ಬಗ್ಗೆ ತಮಗೆ ಮೊದಲು ತಿಳಿಸದೇ ಟಿವಿಯಲ್ಲಿ ನೋಡುವಂತಾದದ್ದರ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಆರೋಪವನ್ನು ತಳ್ಳಿಹಾಕಿರುವ ಸುಷ್ಮಾ ಸ್ವರಾಜ್‌ ಮೃತರ ಬಗ್ಗೆ ಕುಟುಂಬ ಹಾಗೂ ಇತರರಿಗೆ ಮಾಹಿತಿ ನೀಡುವುದಕ್ಕೂ ಮೊದಲು ಸಂಸತ್ತಿಗೆ ತಿಳಿಸುವುದು ನನ್ನ ಕರ್ತವ್ಯವಾಗಿತ್ತು. ಈ ಹಿಂದೆಯೂ ಅವರು ಬದುಕಿದ್ದಾರೆ ಎಂಬುದಕ್ಕಾಗಲೀ ಅಥವಾ ಸಾವನ್ನಪ್ಪಿದ್ದಾರೆ ಎಂಬುದಕ್ಕಾಗಲೀ ನಮ್ಮ ಬಳಿ ಸಾಕ್ಷ್ಯವಿಲ್ಲ ಎಂದು ಹೇಳಿದ್ದೇವೆ. ಕುಟುಂಬದವರ ಆಕ್ರೋಶ ನನಗೆ ಅರ್ಥವಾಗುತ್ತದೆ ಎಂದು ಸುಷ್ಮಾ ಸ್ವರಾಜ್‌ ಹೇಳಿದ್ದಾರೆ. ಆದರೆ, ವಿದೇಶಾಂಗ ಸಚಿವಾಲಯ ನಮಗೆ ಈ ಬಗ್ಗೆ ಮಾಹಿತಿ ನೀಡಲೇ ಇಲ್ಲ. ಇದನ್ನು ನಾನು ನಂಬುವುದಿಲ್ಲ ಎಂದು ಮೃತ ಮಂಜಿಂದರ್‌ ಸಿಂಗ್‌ನ ಸೋದರಿ ಗುರ್ಪಿಂದರ್‌ ಕೌರ್‌ ಹೇಳಿದ್ದಾರೆ.

ಔತಣ ಕೂಟ ರದ್ದು: ಕಲಾಪಕ್ಕೆ ಅಡ್ಡಿ ಪಡಿಸುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಕರೆಯಲಾಗಿದ್ದ ರಾಜ್ಯ ಸಭೆ ಸದಸ್ಯರ ಔತಣ ಕೂಟವನ್ನು ಸಭಾಪತಿ ವೆಂಕಯ್ಯ ನಾಯ್ಡು ರದ್ದು ಗೊಳಿಸಿದ್ದಾರೆ. 

ಮಾಹಿತಿ ಪಡೆಯಲು ಕುಟುಂಬದ ಸಂಕಷ್ಟ: ಮೃತರ ಕುಟುಂಬದವರು ಕಳೆದ ನಾಲ್ಕು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಲ್ಲಿಗೆ ಮಾಹಿತಿಗಾಗಿ ಅಲೆದಾಡಿದ ಕಥೆಗಳನ್ನು ನೆನಪಿಸಿಕೊಂಡಿದ್ದಾರೆ. ಅಮೃತಸರ ಮತ್ತು ತರ್ನ್ ತರನ್‌ ಜಿಲ್ಲೆಯ ಎಂಟು ಜನರ ಕುಟುಂಬದವರು ಮಾಹಿತಿಗಾಗಿ ವಿಪರೀತ ಅಲೆದಾಡಿದ್ದರು. ಇಷ್ಟು ದಿನವೂ ಕುಟುಂಬ ಸದಸ್ಯರು ಬದುಕಿದ್ದಾರೆ ಎಂಬ ಭರವಸೆಯಲ್ಲೇ ಇದ್ದವರಿಗೆ ಈಗ ಹಠಾತ್ತನೆ ಅವರ ಶವ ಸಿಕ್ಕಿರುವ ಸುದ್ದಿ ಕೇಳಿ ಬರಸಿಡಿಲು ಬಡಿದಂತಾಗಿದೆ.

330 ಪಾಕಿಸ್ಥಾನೀಯರ ಗಡಿಪಾರು: ಕಳೆದ 3 ವರ್ಷಗಳಲ್ಲಿ ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ 330 ಪಾಕಿಸ್ಥಾನೀಯರು, 1770 ಬಾಂಗ್ಲಾದೇಶೀಯರನ್ನು ಗಡೀಪಾರು ಮಾಡಲಾಗಿದೆ ಎಂದು ಲೋಕಸಭೆಗೆ ಗೃಹ ರಾಜ್ಯ ಖಾತೆ ಸಚಿವ ಕಿರಣ್‌ ರಿಜಿಜು ಮಾಹಿತಿ ನೀಡಿದ್ದಾರೆ.

ಅವಿಶ್ವಾಸ ಗೊತ್ತುವಳಿ ವಿಳಂಬ 
ಇರಾಕ್‌ನಲ್ಲಿ ಮೃತರ ಬಗ್ಗೆ ಸುಷ್ಮಾ ಸ್ವರಾಜ್‌ ಲೋಕಸಭೆಗೆ ತಿಳಿಸಿದರೂ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಸಂಸದರು ಗಲಭೆ ನಿಲ್ಲಿಸಲಿಲ್ಲ. ಮೊದಲು ಲೋಕಸಭೆಯನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಆದರೆ ಪುನಃ ಕಲಾಪ ಆರಂಭವಾದಾಗಲೂ ಗದ್ದಲ ಮುಂದುವರಿದಿದ್ದರಿಂದ ಬುಧವಾರಕ್ಕೆ ಕಲಾಪ ಮುಂದೂಡಲಾಯಿತು.

ಸತತ 12ನೇ ದಿನವೂ ಕಲಾಪ ಗದ್ದಲಕ್ಕೆ ಬಲಿಯಾಗಿದ್ದರಿಂದಾಗಿ, ತೆಲುಗುದೇಶಂ ಪಕ್ಷ ಹಾಗೂ ವೈಎಸ್‌ಆರ್‌ ಕಾಂಗ್ರೆಸ್‌ ಮಂಡಿಸಲು ನಿರ್ಧರಿಸಿರುವ ಅವಿಶ್ವಾಸ ಗೊತ್ತುವಳಿ ನಿಲುವಳಿ ಕೈಗೆತ್ತಿಕೊಳ್ಳಲು ಅವಕಾಶವಾಗಲಿಲ್ಲ. ಗದ್ದಲದ ಸ್ಥಿತಿಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲಾಗದು ಎಂದು ಲೋಕಸಭೆ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಹೇಳಿದ್ದಾರೆ.

ಬ್ಯಾಂಕ್‌ಗಳಲ್ಲಿ ನಡೆದ ಅವ್ಯವಹಾರ ನಿರ್ವಹಣೆ ವಿಷಯದಲ್ಲಿ ಎಲ್ಲ ಪಕ್ಷಗಳನ್ನೂ ಕೇಂದ್ರ ಸರಕಾರ ಪರಿಗಣನೆಗೆ ತೆಗೆದುಕೊಳ್ಳಬೇಕಿತ್ತು ಎಂದು ಕಾಂಗ್ರೆಸ್‌ ಮುಖಂಡ ಗುಲಾಮ್‌ ನಬಿ ಆಜಾದ್‌ ಆಕ್ಷೇಪಿಸುತ್ತಿದ್ದಂತೆಯೇ ಡಿಎಂಕೆ, ಎಐಎಡಿಎಂಕೆ ಮತ್ತು ಇತರ ಪಕ್ಷಗಳ ಸಂಸದರು ಕಾವೇರಿ ನದಿ ನೀರು ಹಂಚಿಕೆಗೆ ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಸ್ಪೀಕರ್‌ ಎದುರು ಪ್ರತಿಭಟನೆ ನಡೆಸಿದರು.

ತಪ್ಪಿಸಿಕೊಂಡು ಬಂದವನ ಕಥೆ 
ಈಗ ಮೃತರೆಂದು ಘೋಷಿಸಲ್ಪಟ್ಟವರ ಜತೆಗಿದ್ದ, ತಪ್ಪಿಸಿಕೊಂಡು ಬಂದಿದ್ದ ಹರ್ಜಿತ್‌ ಮಸೀಹ್‌ ತನ್ನ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.  ಇತರ ಎಲ್ಲರನ್ನು ಹತ್ಯೆಗೈಯಲಾಗಿದೆ ಎಂದು ಹೇಳುತ್ತಲೇ ಬಂದಿದ್ದ ಹರ್ಜಿತ್‌, ನಾನು ನಿಜ ಹೇಳಿದ್ದೆ. ಆದರೆ ಯಾರೂ ನಂಬಲಿಲ್ಲ ಎಂದಿದ್ದಾರೆ.

ಮೊಸುಲ್‌ನಲ್ಲಿ ಸಾವಿಗೀಡಾದವರ ಬಗ್ಗೆ ಪ್ರತಿ ಭಾರತೀಯನ ಮನ ಮಿಡಿ ಯುತ್ತಿದೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ. 
ನರೇಂದ್ರ ಮೋದಿ, ಪ್ರಧಾನಿ

ಕಳೆದ ವರ್ಷ, ಅಪಹೃತರೆಲ್ಲರೂ ಸುರಕ್ಷಿತ ವಾಗಿದ್ದಾರೆ ಎಂದಿದ್ದ ಕೇಂದ್ರ ಇದೀಗ, ಅವರೆಲ್ಲರೂ ಮೃತರಾಗಿದ್ದಾರೆ ಎಂದಿರುವುದು ದುರದೃಷ್ಟಕರ. 
ಗುಲಾಂ ನಬಿ ಆಜಾದ್‌, ಕಾಂಗ್ರೆಸ್‌ ನಾಯಕ

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.