ಟ್ರೆಂಡಿಂಗ್; ಮಲೇಷ್ಯಾ ವಿರುದ್ಧ ಭಾರತೀಯ ಟ್ವೀಟಿಗರು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಯಾಕೆ?
Team Udayavani, Oct 2, 2019, 2:02 PM IST
ನವದೆಹಲಿ:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ನಿರ್ಧಾರದ ವಿರುದ್ಧ ಮಲೇಷ್ಯಾ ಪ್ರಧಾನಿ ಮೊಹಮ್ಮದ್ ಅಪಸ್ವರ ಎತ್ತಿದ ನಂತರ ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಮಲೇಷ್ಯಾವನ್ನು ಬಹಿಷ್ಕರಿಸಿ ಎಂಬ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದ್ದು, ಭಾರತೀಯರು ಮತ್ತು ಮಲೇಷಿಯಾ ನಡುವೆ ಟ್ವೀಟರ್ ಸಮರ ತಾರಕ್ಕೇರಿದೆ ಎಂದು ವರದಿ ತಿಳಿಸಿದೆ.
ಟ್ವೀಟರ್ ಸಮರ ಆರಂಭವಾಗಿದ್ದು ಹೇಗೆ?
ಜಮ್ಮು-ಕಾಶ್ಮೀರದ ಮೇಲೆ ಆಕ್ರಮಣ ನಡೆಸಿ ಭಾರತ ಅದನ್ನು ವಶಪಡಿಸಿಕೊಂಡಿದೆ ಎಂದು ಮಲೇಷ್ಯಾ ಪ್ರಧಾನಿ ಮಹತಿರ್ ಬಿನ್ ಮೊಹಮ್ಮದ್ ಟ್ವೀಟ್ ಮಾಡಿದ್ದು, ಬಳಿಕ ಭಾರತೀಯರು ಅದಕ್ಕೆ ಪ್ರತಿಕ್ರಿಯೆ ನೀಡುವ ಮೂಲಕ ಟ್ವೀಟ್ ಸಮರ ತಾರಕಕ್ಕೇರಲು ಕಾರಣವಾಗಿದೆ.
ವಿಶ್ವಸಂಸ್ಥೆಯಲ್ಲಿ ನಡೆದ ಮಹಾ ಅಧಿವೇಶನದಲ್ಲಿಯೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕಾಶ್ಮೀರದ ವಿಚಾರದಲ್ಲಿ ಭಾರತದ ವಿರುದ್ಧ ಆರೋಪಿಸಿದ್ದರು. ಮಲೇಷ್ಯಾ ಪ್ರಧಾನಿ ಮಹತಿರ್ ಕೂಡಾ ವಿಷಯ ಪ್ರಸ್ತಾಪಿಸಿದ್ದರು. ಪಾಕ್ ವಾದ ಬೆಂಬಲಿಸಿದ್ದ ಮಲೇಷ್ಯಾ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಭಾರತಕ್ಕೆ ಸಲಹೆ ಕೂಡಾ ನೀಡಿತ್ತು.
Malaysia eyes 1 mn Indian visitors.
India is the sixth top tourist source market for Malaysia.
But we need to #BoycottMalaysia & Boycott @TourismMalaysia.
They are enemy of India & a terrorist state in making.
https://t.co/vrhwLqNppd— Voice of Assam (@VoiceOfAxom) October 1, 2019
ಜಮ್ಮು-ಕಾಶ್ಮೀರದ ಈ ವಿಚಾರದಲ್ಲಿ ಮಲೇಷ್ಯಾ ನಿಲುವು ಹೊರಬೀಳುತ್ತಿದ್ದಂತೆಯೇ ಟ್ವೀಟರ್ ನಲ್ಲಿ ಭಾರತೀಯರು #BoycottMalasia ಹ್ಯಾಶ್ ಟ್ಯಾಗ್ ಆರಂಭ ಮಾಡುವ ಮೂಲಕ ಟ್ರೆಂಡಿಂಗ್ ಆಗಿದೆ.
You don’t have the capacity to confront China on Uighur Muslims, but how willingly and openly you support Pakistan against Indian action on Kashmir!! Bravo !#BoycottMalaysia pic.twitter.com/gUYub7WKzN
— Chandresh Dedhia (@chandreshd) September 30, 2019
ಟ್ವೀಟ್ ಸಮರ ತಾರಕಕ್ಕೇರಿದ್ದು, ಮಲೇಷ್ಯಾದ ಟ್ವೀಟಿಗರು ಕೂಡಾ ಭಾರತವನ್ನು ಬಹಿಷ್ಕರಿಸಿ ಎಂಬ ಹ್ಯಾಶ್ ಟ್ಯಾಗ್ ಉಪಯೋಗಿಸಿ ಟ್ವೀಟ್ ಮಾಡುತ್ತಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ