‘ಸಿಧು ದೇಶ ವಿರೋಧಿ’ : ಅಮರೀಂದರ್ ಆರೋಪಕ್ಕೆ ‘ಗಾಂಧಿ ಕುಟುಂಬ’ದ ಮೌನವೇಕೆ ?
Team Udayavani, Sep 19, 2021, 4:24 PM IST
ನವದೆಹಲಿ: ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ‘ದೇಶ ವಿರೋಧಿ’ ಎಂದು ನಿರ್ಗಮಿತ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮಾಡಿರುವ ಆರೋಪದ ಕುರಿತು ಗಾಂಧಿ ಕುಟುಂಬವೇಕೆ ಮೌನ ವಹಿಸಿದೆ ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಪ್ರಶ್ನಿಸಿದ್ದಾರೆ.
ಭಾನುವಾರ ಮಾಧ್ಯಮಗಳ ಎದುರು ಮಾತನಾಡಿರುವ ಜಾವಡೇಕರ್, ನೇರವಾಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರಿಗೆ ಪಶ್ನೆ ಹಾಕಿದ್ದಾರೆ. ತಮ್ಮ ಪಕ್ಷದ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ವಿರುದ್ಧ ನಿರ್ಗಮಿತ ಸಿಎಂ ಕ್ಯಾ.ಅಮರೀಂದರ್ ಸಿಂಗ್ ಅವರು ಗಂಭೀರವಾದ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಒಂದೇ ಪ್ರಶ್ನೆ ಕೇಳುತ್ತದೆ. ಅಮರೀಂದರ್ ಮಾಡಿರುವ ಆರೋಪದ ಬಗ್ಗೆ ಸೋನಿಯಾ, ರಾಹುಲ್ ಹಾಗೂ ಪ್ರಿಯಾಂಕಾ ಅವರು ಸುಮ್ಮನಿರುವುದು ಏಕೆ ? ಆತನ ಆರೋಪದ ಬಗ್ಗೆ ಮಾತನಾಡಿ, ಕ್ರಮ ಕೈಗೊಳ್ಳುವುದೇ ಎಂದು ಪ್ರಶ್ನಿಸಿದ್ದಾರೆ ಜಾವಡೇಕರ್.
ಈ ಬಗ್ಗೆ ಕಾಂಗ್ರೆಸ್ ಮಾತಾಡಬೇಕು. ತಮ್ಮ ಅಭಿಪ್ರಾಯ ಹೇಳಲೇಬೇಕೆಂದು ನಾವು ಒತ್ತಾಯಿಸುತ್ತೇವೆ. ಕಾಂಗ್ರೆಸ್ ಈ ಆರೋಪಗಳನ್ನು ಗಂಭೀರವಾವಾಗಿ ಪರಿಗಣಿಸಿ ಆತನ ಮೇಲೆ ಕ್ರಮ ಕೈಗೊಳ್ಳಬಹುದೇ ಎಂದು ಜಾವಡೇಕರ್ ಪ್ರಶ್ನಿಸಿದ್ದಾರೆ.
ಇನ್ನು ಕ್ಯಾ.ಅಮರೀಂದರ್ ಸಿಂಗ್ ಅವರು ಶನಿವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನವಜೋತ್ ಸಿಂಗ್ ಸಿಧು ವಿರುದ್ಧ ಹರಿಹಾಯ್ದರು. ಸಿಧು ಪಾಕ್ ಪ್ರಧಾನಿ ಇಮ್ರಾನ್ ಖಾನ್ ನನ್ನು ಅಪ್ಪಿಕೊಳ್ಳುವುದನ್ನು ನಾವು ನೋಡಿದ್ದೇವೆ. ಪಾಕ್ ಸೇನೆಯ ಮುಖ್ಯಸ್ಥರ ಜೊತೆ ಆತನಿಗೆ ಒಳ್ಳೆಯ ಸಂಬಂಧ ಇದೆ. ನಮ್ಮ ದೇಶದ ಭದ್ರತೆ ಹಿತದೃಷ್ಠಿಯಿಂದ ಇಂತಹ ವ್ಯಕ್ತಿ ಪಂಜಾಬ್ ಮುಖ್ಯಮಂತ್ರಿ ಸ್ಥಾನ ಏರುವುದನ್ನು ನಾನು ವಿರೋಧಿಸುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್