ಬಾಲಸೋರ್ ಭೀಕರ ದುರಂತ: ರೈಲು ಅಪಘಾತ ತಪ್ಪಿಸುವ ಕವಚ ತಂತ್ರಜ್ಞಾನ ಕೆಲಸ ಮಾಡಲಿಲ್ಲವೇ?


Team Udayavani, Jun 3, 2023, 11:43 AM IST

ಬಾಲಸೋರ್ ಭೀಕರ ದುರಂತ: ರೈಲು ಅಪಘಾತ ತಪ್ಪಿಸುವ ಕವಚ ತಂತ್ರ್ಞಾನ ಕೆಲಸ ಮಾಡಲಿಲ್ಲವೇ?

ಹೊಸದಿಲ್ಲಿ: ಒಡಿಶಾದ ಬಾಲಸೋರ್‌ ನಲ್ಲಿ ಮೂರು ರೈಲುಗಳ ಭೀಕರ ಅಪಘಾತವು ದೇಶದ ಜನರನ್ನು ಬೆಚ್ಚಿ ಬೀಳಿಸಿದೆ. ಅಪಘಾತದಲ್ಲಿ ಸುಮಾರು 280ಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿದ್ದು, ಸಾವಿರ ಪ್ರಯಾಣಿಕರು ಗಾಯಗೊಂಡಿದ್ದಾರೆ. ರೈಲು ಅಪಘಾತ ತಡೆಯಲೆಂದು ಅಳವಡಿಸಿರುವ ಕವಚ ತಂತ್ರಜ್ಞಾನವು ಇಲ್ಲಿ ಕೆಲಸ ಮಾಡಿಲ್ಲವೇ ಎನ್ನವುದು ಇದೀಗ ಚರ್ಚೆಯ ವಿಷಯವಾಗಿದೆ.

KAVACH ತಂತ್ರಜ್ಞಾನವನ್ನು ರೈಲು ಘರ್ಷಣೆ ತಪ್ಪಿಸುವ ವ್ಯವಸ್ಥೆ (TCAS) ಅಥವಾ ಸ್ವಯಂಚಾಲಿತ ರೈಲು ಸಂರಕ್ಷಣಾ ವ್ಯವಸ್ಥೆ (ATP) ಎಂದು ಕರೆಯಲಾಗುತ್ತದೆ. ಇದು ರೈಲು ಅಪಘಾತಗಳ ಸಂಖ್ಯೆಯನ್ನು ಶೂನ್ಯಕ್ಕೆ ಇಳಿಸುವ ಗುರಿಯನ್ನು ಹೊಂದಿದೆ. ತಂತ್ರಜ್ಞಾನವು SIL4 ಪ್ರಮಾಣೀಕರಣವನ್ನು ಸಹ ಪಡೆದುಕೊಂಡಿದೆ. ಅಂದರೆ ಈ ವ್ಯವಸ್ಥೆಯಲ್ಲಿ 10,000 ವರ್ಷಗಳಲ್ಲಿ ಕೇವಲ ಒಂದು ದೋಷ ಕಂಡುಬರಬಹುದು. ಅಷ್ಟು ನಿಖರವಾಗಿದೆ ಈ ವ್ಯವಸ್ಥೆ.

ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಮುಖಾಮುಖಿ ಡಿಕ್ಕಿ ಹೊಡೆದು ಸೂಪರ್‌ ಫಾಸ್ಟ್ ಪ್ಯಾಸೆಂಜರ್ ರೈಲಿನ ನಾಲ್ಕು ಕೋಚ್‌ಗಳು ಹಳಿ ತಪ್ಪಿತು ಎಂದು ಆರಂಭಿಕ ವರದಿಗಳು ಸೂಚಿಸಿದ್ದರೂ, ರೈಲ್ವೆ ಅಧಿಕಾರಿಗಳು ಅದನ್ನು ನಿರಾಕರಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ರೈಲು ನಂ. 12864 SMVT ಬೆಂಗಳೂರು – ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಳಿತಪ್ಪಿತು. ಈ ವೇಳೆ ಪಕ್ಕದ ಟ್ರ್ಯಾಕ್ ನಲ್ಲಿ ಹಾದು ಹೋಗುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಮೇಲೆ ಬಿತ್ತು.

ಎಲ್ಲಾ ರೈಲುಗಳು ಹಳಿತಪ್ಪಿದ ಕಾರಣ, ಅಂತಹ ಸಂದರ್ಭಗಳಲ್ಲಿ ಕವಚ್ ತಂತ್ರಜ್ಞಾನವು ಕಾರ್ಯನಿರ್ವಹಿಸಲಿಲ್ಲ. ಕವಚ್ ತಂತ್ರಜ್ಞಾನವು ಎರಡು ರೈಲುಗಳ ಇಂಜಿನ್‌ ಗಳ ನಡುವಿನ ಘರ್ಷಣೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ. ಮತ್ತೊಂದು ವಿಚಾರವೆಂದರೆ ಈ ಆಧುನಿಕ ತಂತ್ರಜ್ಞಾನವನ್ನು ಎಲ್ಲಾ ರೈಲ್ವೇ ನೆಟ್‌ ವರ್ಕ್‌ ನಲ್ಲಿ ಸ್ಥಾಪಿಸಲಾಗಿಲ್ಲ. ಈ ವಿಭಾಗದಲ್ಲೂ ಕವಚ್ ತಂತ್ರಜ್ಞಾನವಿರಲಿಲ್ಲ.

2022 ರ ಬಜೆಟ್ ಸಮಯದಲ್ಲಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾರತದಲ್ಲಿ 2,000 ಕಿಮೀ ರೈಲ್ವೆ ಜಾಲವನ್ನು ಕವಚ್ ತಂತ್ರಜ್ಞಾನದಿಂದ ರಕ್ಷಿಸುವುದಾಗಿ ಘೋಷಿಸಿದ್ದರು.

ಕವಚ್ ಎಂದರೇನು?

ರೈಲ್ವೇ ತಯಾರಿಸಿರುವ ನೂತನ ತಂತ್ರಜ್ಞಾನದ ನೆರವಿನಿಂದ, ಎರಡು ರೈಲುಗಳು ವಿರುದ್ಧ ದಿಕ್ಕಿನಿಂದ ಬಂದರೂ, ಎರಡರ ವೇಗ ಏನೇ ಇದ್ದರೂ ಸಹ ಎರಡೂ ರೈಲುಗಳು ‘ರಕ್ಷಾಕವಚ’ದಿಂದ ಡಿಕ್ಕಿಯಾಗದೆ ಉಳಿಯಲಿದೆ. ಹೈ ಫ್ರೀಕ್ವೆನ್ಸಿ ರೇಡಿಯೋ ಸಂವಹನವನ್ನು ‘ಕವಚ’ ವ್ಯವಸ್ಥೆಯಲ್ಲಿ ಬಳಸಲಾಗುತ್ತದೆ. ಈ ಕವಚ್ ರೇಡಿಯೋ ಸಂವಹನ, ಮೈಕ್ರೊಪ್ರೊಸೆಸರ್, ಗ್ಲೋಬ್ ಪೊಸಿಷನಿಂಗ್ ಸಿಸ್ಟಮ್ ತಂತ್ರಜ್ಞಾನವು ಆಂಟಿ ಕೊಲಿಶನ್‌ ಟೆಕ್‌ (Anti Collision Tech) ಸಾಧನ ಜಾಲವಾಗಿದೆ. ಈ ತಂತ್ರಜ್ಞಾನದ ಅಡಿಯಲ್ಲಿ ‘ಕವಚ್ʼನ್ನು ಎರಡು ಮುಖಾಮುಖಿಯಾಗುವ ರೈಲುಗಳಲ್ಲಿ ಅಳವಡಿಸಿದಾಗ, ಈ ತಂತ್ರಜ್ಞಾನವು ಸ್ವಯಂಚಾಲಿತ ಬ್ರೇಕಿಂಗ್ ಕ್ರಿಯೆಯನ್ನು ಪ್ರಾರಂಭಿಸುತ್ತದೆ ಮತ್ತು ಪರಸ್ಪರ ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರಿಂದಾಗಿ ರೈಲುಗಳು ಡಿಕ್ಕಿಯಾಗುವುದನ್ನು ತಡೆಯುತ್ತದೆ.

ಪ್ರಮುಖವಾಗಿ ಈ ತಂತ್ರಜ್ಞಾನವು ಎದುರಿನಿಂದ ಬರುವ ರೈಲಿನ ಬಗ್ಗೆ ಲೋಕೋ ಪೈಲಟ್‌ ಗಳಿಗೆ ಎಚ್ಚರಿಕೆ ನೀಡುತ್ತದೆ. ಅಲ್ಲದೆ ತುರ್ತು ಬ್ರೇಕ್‌ಗಳನ್ನು ಅನ್ವಯಿಸುವ ಮೂಲಕ ರೈಲನ್ನು ಸ್ವಯಂಚಾಲಿತವಾಗಿ ನಿಲ್ಲಿಸುತ್ತದೆ. ಒಂದೇ ಹಳಿಯಲ್ಲಿ ಎರಡು ರೈಲುಗಳು ಪರಸ್ಪರ ಸಮೀಪಿಸಿದಾಗ ಇದು ಕೆಲಸ ಮಾಡುತ್ತದೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.