![court](https://www.udayavani.com/wp-content/uploads/2024/07/court-7-415x231.jpg)
Big cats; ಸೀತಾ, ಅಕ್ಬರ್ ಜೋಡಿ ಸಿಂಹಗಳ ಹೆಸರು ಬದಲಾಯಿಸಲು ಹೈಕೋರ್ಟ್ ಸೂಚನೆ
Team Udayavani, Feb 22, 2024, 6:02 PM IST
![lion](https://www.udayavani.com/wp-content/uploads/2024/02/lion-2-620x366.jpg)
ಕೋಲ್ಕತಾ: ಸಿಲಿಗುರಿಯ ಸಫಾರಿ ಪಾರ್ಕ್ ನಲ್ಲಿ ಒಂದೇ ಆವರಣದಲ್ಲಿ ‘ಸೀತಾ’ ಎಂಬ ಹೆಸರಿನ ಸಿಂಹಿಣಿಯೊಂದಿಗೆ ‘ಅಕ್ಬರ್’ ಎಂಬ ಹೆಸರಿನ ಗಂಡು ಸಿಂಹಕ್ಕೆ ಇರಿಸಿರುವ ಹೆಸರುಗಳನ್ನು ಮರುನಾಮಕರಣ ಮಾಡುವಂತೆ ಕಲ್ಕತ್ತಾ ಹೈಕೋರ್ಟ್ ಗುರುವಾರ ಪಶ್ಚಿಮ ಬಂಗಾಳ ಸರಕಾರಕ್ಕೆ ಸೂಚನೆ ನೀಡಿದೆ.
ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರ ಏಕಸದಸ್ಯ ಪೀಠವು ಸೀತೆಯನ್ನು ದೇಶದ ದೊಡ್ಡ ವರ್ಗದ ಜನರು ಪೂಜಿಸುತ್ತಾರೆ ಮತ್ತು ಅಕ್ಬರ್ “ಜಾತ್ಯತೀತ ಮೊಘಲ್ ಚಕ್ರವರ್ತಿ” ಎಂದು ಹೇಳಿದ್ದಾರೆ. ನಿಮ್ಮ ಸಾಕುಪ್ರಾಣಿಗಳಿಗೆ ಹಿಂದೂ ದೇವರು ಅಥವಾ ಮುಸ್ಲಿಂ ಪ್ರವಾದಿಯ ಹೆಸರನ್ನು ಇಡುತ್ತೀರಾ ಎಂದು ನ್ಯಾಯಾಲಯವು ರಾಜ್ಯ ಸರಕಾರದ ವಕೀಲರನ್ನು ಪ್ರಶ್ನಿಸಿದೆ.
ಹೆಸರಿನ ಕುರಿತು ವಿಶ್ವ ಹಿಂದೂ ಪರಿಷತ್ತಿನ ಬಂಗಾಳ ಘಟಕವು ಫೆಬ್ರವರಿ 16 ರಂದು ಜಲ್ಪೈಗುರಿಯಲ್ಲಿರುವ ಕಲ್ಕತ್ತಾ ಹೈಕೋರ್ಟ್ನ ಸರ್ಕ್ಯೂಟ್ ಬೆಂಚ್ ಅನ್ನು ಸಂಪರ್ಕಿಸಿತ್ತು.ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಬಂಗಾಳದ ಸಫಾರಿ ಪಾರ್ಕ್ನ ನಿರ್ದೇಶಕರನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಮಾಡಲಾಗಿತ್ತು.
ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅರಣ್ಯ ಇಲಾಖೆ, ಸಿಂಹಗಳನ್ನು ಇತ್ತೀಚೆಗೆ ತ್ರಿಪುರಾದ ಸೆಪಹಿಜಾಲಾ ಝೂಲಾಜಿಕಲ್ ಪಾರ್ಕ್ನಿಂದ ಸ್ಥಳಾಂತರಿಸಲಾಗಿದ್ದು ಫೆಬ್ರವರಿ 13 ರಂದು ಸಫಾರಿ ಪಾರ್ಕ್ಗೆ ಬಂದ ನಂತರ ಮರುನಾಮಕರಣ ಮಾಡಲಾಗಿಲ್ಲ ಎಂದು ಹೇಳಿದ್ದರು.
ಅಕ್ಬರ್ ಒಬ್ಬ ಮೊಘಲ್ ಚಕ್ರವರ್ತಿ ಮತ್ತು ಸೀತೆ ರಾಮಾಯಣದ ಒಂದು ಪ್ರಮುಖ ಪಾತ್ರ ಮತ್ತು ಹಿಂದೂ ದೇವತೆಯಾಗಿ ಪೂಜಿಸಲ್ಪಟ್ಟಿದ್ದಾಳೆ. ಈ ರೀತಿ ಜೋಡಿ ಮಾಡಿರುವುದು ಹಿಂದೂಗಳಿಗೆ ಅಗೌರವವೆಂದು ಪರಿಗಣಿಸಲಾಗಿದೆ ಎಂದು VHP ವಾದಿಸಿ ಸಿಂಹಿಣಿಯ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
![rahul-Gandhi-Car](https://www.udayavani.com/wp-content/uploads/2024/07/rahul-Gandhi-Car-150x111.jpg)
Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್: ರಾಹುಲ್ ಆರೋಪ
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.