1 ಕೋಟಿ ಪರಿಹಾರ, ಉದ್ಯೋಗ: ಹತ Apple sales manager ಪತ್ನಿ ಆಗ್ರಹ
Team Udayavani, Sep 29, 2018, 5:47 PM IST
ಲಕ್ನೋ : ಉತ್ತರ ಪ್ರದೇಶ ಪೊಲೀಸರು ತನ್ನ ಪತಿ, ಆ್ಯಪಲ್ ಸೇಲ್ಸ್ ಮ್ಯಾನೇಜರ್, ವಿವೇಕ್ ತಿವಾರಿ ಅವರನ್ನು ಕೊಂದ ತಾಸುಗಳ ಬಳಿಕ ಪತ್ನಿ ಕಲ್ಪನಾ ತಿವಾರಿ ಅವರು ತನಗೆ ಮತ್ತು ತನ್ನ ಕುಟುಂಬಕ್ಕೆ ನ್ಯಾಯ ನೀಡಲು ”ಘಟನೆಯ ಬಗ್ಗೆ ಸಿಬಿಐ ತನಿಖೆ ನಡೆಯಬೇಕು, ತನಗೆ 1 ಕೋಟಿ ರೂ. ಪರಿಹಾರ ನೀಡಬೇಕು ಮತ್ತು ತನಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಕೊಡಿಸಬೇಕು” ಎಂದು ಆಗ್ರಹಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.
ರಾಜಧಾನಿ ಲಕ್ನೋದಲ್ಲಿ ನ ಅತ್ಯಂತ ವಿಲಾಸೀ ಪ್ರದೇಶವಾಗಿರುವ ಗೋಮತಿ ನಗರದಲ್ಲಿ ತಪಾಸಣೆಗಾಗಿ ಆದೇಶ ನೀಡಿದ ಹೊರತಾಗಿಯೂ ತನ್ನ ಕಾರನ್ನು ನಿಲ್ಲಿಸದ ಕಾರಣಕ್ಕೆ ಕಾವಲು ಕರ್ತವ್ಯದಲ್ಲಿದ್ದ ಉತ್ತರ ಪ್ರದೇಶ ಪೊಲೀಸರು ಗುಂಡು ಹಾರಿಸಿ 38ರ ಹರೆಯದ ಆ್ಯಪಲ್ ಸೇಲ್ಸ್ ಮ್ಯಾನೆಜರ್ ತಿವಾರಿಯನ್ನು ಕೊಂದಿದ್ದರು.
ಮೂಲಗಳ ಪ್ರಕಾರ ಪೊಲೀಸರು ತಡೆಯಲು ಯತ್ನಿಸಿದಾಗ ತಿವಾರಿ ತನ್ನ ಕಾರನ್ನು ಮೂರು ಬಾರಿ ಪೊಲೀಸ್ ಮೋಟರ್ ಸೈಕಲ್ ಮೇಲೆ ಹರಿಸಿಲು ಯತ್ನಿಸಿದ್ದ ಎಂದು ತಿಳಿದುಬಂದಿದೆ.
ತನ್ನ ಪತಿಯನ್ನು ಕೊಲ್ಲುವ ಯಾವುದೇ ಅಧಿಕಾರ, ಹಕ್ಕು ಪೊಲೀಸರಿಗಿಲ್ಲ ಎಂದು ಹೇಳಿರುವ ಕಲ್ಪನಾ ತಿವಾರಿ, ಪತಿಯ ತಾಯಿ ಮತ್ತು ತನ್ನ ಇಬ್ಬರು ಮಕ್ಕಳನ್ನು ಬೆಳೆಸಲು ತನಗೆ 1 ಕೋಟಿ ರೂ. ಪರಿಹಾರ ಮತ್ತು ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಕೊಡಿಸಬೇಕೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್