ಶೀನಾ ಬೋರಾ ಕೊಲೆ ತನಿಖಾಧಿಕಾರಿ ಪತ್ನಿನಿಗೂಢ ಕೊಲೆ; ಪುತ್ರ ನಾಪತ್ತೆ
Team Udayavani, May 24, 2017, 11:39 AM IST
ಮುಂಬಯಿ : ಅತ್ಯಂತ ಸಿನಿಮೀಯ ಶೈಲಿಯಲ್ಲಿ ನಡೆದಿದ್ದ ನಿಗೂಢ ಶೀನಾ ಬೋರಾ ಕೊಲೆ ಕೇಸಿನ ತನಿಖಾ ತಂಡದ ಭಾಗವಾಗಿದ್ದ ಮುಂಬಯಿ ಪೊಲೀಸ್ ಇನ್ಸ್ಪೆಕ್ಟರ್ ಧ್ಯಾನೇಶ್ವರ್ ಗಣೋರೆ ಅವರ ಪತ್ರಿ ದೀಪಾಲಿ ಗಣೋರೆ ಅವರು ಮುಂಬಯಿಯ ಸಾಂತಾಕ್ರೂಜ್ನಲ್ಲಿನ ತಮ್ಮ ನಿವಾಸದಲ್ಲಿ ನಿನ್ನೆ ಮಂಗಳವಾರ ತಡ ರಾತ್ರಿ ಸತ್ತು ಬಿದ್ದಿರುವುದು ಪತ್ತೆಯಾಗಿದೆ.
ಪತಿ ಧ್ಯಾನೇಶ್ವರ್ ಗಣೋರೆ ಅವರು ತಮ್ಮ ಕರ್ತವ್ಯ ಮುಗಿಸಿ ಇಂದು ಬುಧವಾರ ನಸುಕಿನ 3.30ರ ವೇಳೆಗೆ ಮನೆಗೆ ಮರಳಿದಾಗ ಪತ್ನಿ ಶವವಾಗಿ ಬಿದ್ದಿರುವುದನ್ನು ಕಂಡು ದಿಗಿಲಾದರು.
ಮುಂಬಯಿ ಪೊಲೀಸರ ಪ್ರಕಾರ, ಇನ್ಸ್ಪೆಕ್ಟರ್ ಧ್ಯಾನೇಶ್ವರ್ ಅವರು ತಮ್ಮ ಮನೆ ಬಾಗಿಲನ್ನು ತೆರೆಯಲು ಪ್ರಯತ್ನಿಸಿ ವಿಫಲರಾದಾಗ ಪತ್ನಿಯ ಮೊಬೈಲ್ಗೆ ಫೋನ್ ಮಾಡಿದರು; ಆದರೆ ಆ ಹೊತ್ತಿಗೆ ಅದು ನಾಟ್ ರೀಚೇಬಲ್ ಆಗಿತ್ತು. ಕೊನೆಗೂ ಅವರು ಬಲವಂತದಿಂದ ಮನೆ ಬಾಗಿಲನ್ನು ತೆರೆದು ಒಳಪ್ರವೇಶಿಸಿದಾಗ ಪತ್ನಿ ರಕ್ತದ ಮಡುವಿನಲ್ಲಿ ಸತ್ತು ಬಿದ್ದಿರುವುದನ್ನು ಕಂಡರು.
ಧ್ಯಾನೇಶ್ವರ್ ಅವರ ಪುತ್ರ ಕೂಡ ನಾಪತ್ತೆಯಾಗಿದ್ದು ಆತನ ಮೊಬೈಲ್ ಸ್ವಿಚ್ ಆಫ್ ಆಗಿರುವುದು ಗೊತ್ತಾಯಿತು. ಕೊಲೆಗೆ ಬಳಸಲಾದ ಚೂರಿ ಕೂಡ ಸ್ಥಳದಲ್ಲಿ ಪತ್ತೆಯಾಗಿದೆ.
ಇನ್ಸ್ಪೆಕ್ಟರ್ ಧ್ಯಾನೇಶ್ವರ್ ಪ್ರಕೃತ ಖಾರ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿತರಾಗಿದ್ದಾರೆ.
ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಪ್ರಕರಣದ ತನಿಖೆಯನ್ನು ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ