ಪಾಟ್ನಾ ಸಾಹೀಬ್ನಿಂದಲೇ ಸ್ಪರ್ಧೆ ; ಬಿಜೆಪಿಗೆ ಸೆಡ್ಡು ಹೊಡೆದ ಶತ್ರು!
Team Udayavani, Mar 7, 2019, 3:21 PM IST
ಲಕ್ನೋ: ಬಿಜೆಪಿ ನಾಯಕರೊಂದಿಗಿನ ತೀವ್ರ ಭಿನ್ನಾಭಿಪ್ರಾಯದ ಹೊರತಾಗಿಯೂ ಬಿಜೆಪಿ ಬಂಡಾಯ ಸಂಸದರಾಗಿರುವ ಶತ್ರುಘ್ನ ಸಿನ್ಹಾ ಅವರು ಈ ಚುನಾವಣೆಯಲ್ಲಿ ಪಾಟ್ನಾ ಸಾಹೀಬ್ ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ಪರಿಸ್ಥಿತಿ ಏನೇ ಆದರೂ , ಪಕ್ಷದ ನಿರ್ಧಾರ ಯಾವುದೇ ಆಗಿರಲಿ ,ನಾನು ಪಾಟ್ನಾ ಸಾಹೀಬ್ ಕ್ಷೇತ್ರದಿಂದಲೆ ಕಣಕ್ಕಿಳಿಯುತ್ತೇನೆ ಎಂದು ಶತ್ರುಘ್ನ ಸಿನ್ಹಾ ಫೋನ್ನಲ್ಲಿ ಹೇಳಿಕೆ ನೀಡಿದ್ದಾರೆ.
2015 ರ ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಶತ್ರುಘ್ನ ಸಿನ್ಹಾ ನಿರಂತರವಾಗಿ ಬಿಜೆಪಿ ವಿರುದ್ಧ ಹೇಳಿಕೆ ನೀಡುತ್ತಲೆ ಬಂದಿದ್ದಾರೆ. ನೋಟು ನಿಷೇಧ, ಜಿಎಸ್ಟಿ ನಿರ್ಧಾರವನ್ನು ಬಹಿರಂಗವಾಗಿ ವಿರೋಧಿಸಿದ್ದರು. ಮಾತ್ರವಲ್ಲದೆ ಕೋಲ್ಕತಾದಲ್ಲಿ ವಿಪಕ್ಷಗಳ ಬಿಜೆಪಿ ವಿರೋಧಿ ಸಮಾವೇಶದಲ್ಲೂ ವೇದಿಕೆ ಹಂಚಿಕೊಂಡು ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು.
ಇತ್ತೀಚೆಗೆ ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್ ಯಾದವ್ ಅವರೊಂದಿಗೆ ಮಾತುಕತೆಯನ್ನೂ ನಡೆಸಿದ್ದರು. ಪತ್ನಿ ಪೂನಮ್ ಸಿನ್ಹಾ ಅವರು ಉತ್ತರ ಪ್ರದೇಶದಿಂದ ರಾಜಕೀಯ ಆರಂಭಿಸುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಸುದ್ದಿಯನ್ನು ಶತ್ರುಘ್ನ ಸಿನ್ಹಾ ಅವರು ಒಪ್ಪಿಯೂ ಇರಲಿಲ್ಲ, ಅಲ್ಲಗಳೆಯಲೂ ಇಲ್ಲ.ಪೂನಮ್ ಸಿನ್ಹಾ ಅವರು ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ