ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
Team Udayavani, Jun 25, 2022, 8:31 AM IST
ಮುಂಬೈ: ಬಂಡಾಯ ನಾಯಕ ಏಕನಾಥ್ ಶಿಂಧೆ ಮತ್ತು ಬಿಜೆಪಿಗೆ ಶಿವಸೇನೆ ಕಾರ್ಯಕರ್ತರು ಮತ್ತು ಪಕ್ಷಕ್ಕೆ ಮತ ಹಾಕುವವರನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ ಮತ್ತು ಶಿವಸೇನೆಯನ್ನು ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ರಾತ್ರಿ ಆರೋಪಿಸಿದ್ದಾರೆ.
ಪಕ್ಷದ ಕಾರ್ಪೊರೇಟರ್ಗಳನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ, ಸಾಮಾನ್ಯ ಶಿವಸೇನೆ ಕಾರ್ಯಕರ್ತರು ತಮ್ಮ ಸಂಪತ್ತು. ಅವರು ತಮ್ಮೊಂದಿಗೆ ಇರುವವರೆಗೂ ಇತರರ ಟೀಕೆಗಳಿಗೆ ಹೆದರುವುದಿಲ್ಲ ಎಂದರು.
“ಹೊರಹೋಗಲು ಬಯಸುವವರು ಮುಕ್ತವಾಗಿ ಹೋಗಲು ಸ್ವತಂತ್ರರು…. ನಾನು ಹೊಸ ಶಿವಸೇನೆಯನ್ನು ರಚಿಸುತ್ತೇನೆ” ಎಂದು ಉದ್ಧವ್ ಠಾಕ್ರೆ ಹೇಳಿದರು.
“ಶಿವಸೇನೆಯು ಸ್ವಂತ ಜನರಿಂದ ದ್ರೋಹಕ್ಕೆ ಒಳಗಾಗಿದೆ. ನಿಮ್ಮಲ್ಲಿ ಹಲವರು ಆಕಾಂಕ್ಷಿಗಳಾಗಿದ್ದರೂ ನಾವು ಈ ಬಂಡಾಯಗಾರರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದ್ದೇವೆ. ಈ ಜನರು ನಿಮ್ಮ ಕಠಿಣ ಪರಿಶ್ರಮದಿಂದ ಆಯ್ಕೆಯಾದ ನಂತರ ಈಗ ಬಂಡಾಯವೆದ್ದಿದ್ದಾರೆ. ಆದರೆ ಈ ನಿರ್ಣಾಯಕ ಸಮಯದಲ್ಲಿ ನೀವು ಪಕ್ಷದ ಪರವಾಗಿ ನಿಂತಿದ್ದೀರಿ. ನಾನು ನಿಮಗೆ ಎಷ್ಟು ಧನ್ಯವಾದ ಹೇಳಿದರೂ ಸಾಕಾಗದು” ಎಂದು ಶಿವಸೇನಾ ಅಧ್ಯಕ್ಷರೂ ಆಗಿರುವ ಠಾಕ್ರೆ ಪಕ್ಷದ ಕಾರ್ಯಕರ್ತರಿಗೆ ಹೇಳಿದರು.
ಮೈತ್ರಿ ಪಕ್ಷಗಳ ಬಗ್ಗೆ ಇರುವ ದೂರುಗಳನ್ನು ಪರಿಶೀಲಿಸುವಂತೆ ಏಕನಾಥ್ ಶಿಂಧೆ ಅವರಿಗೆ ಹೇಳಿದ್ದೆ. ಶಿವಸೇನೆ ಬಿಜೆಪಿ ಜತೆ ಕೈಜೋಡಿಸುವಂತೆ ಶಾಸಕರು ಒತ್ತಡ ಹೇರುತ್ತಿದ್ದಾರೆ ಎಂದು ಅವರು ಹೇಳಿದರು. ಈ ಶಾಸಕರನ್ನು ನನ್ನ ಬಳಿಗೆ ಕರೆತಂದು ಚರ್ಚಿಸೋಣ ಎಂದು ಹೇಳಿದ್ದೆ. ಬಿಜೆಪಿ ನಮ್ಮನ್ನು ಕೆಟ್ಟದಾಗಿ ನಡೆಸಿಕೊಂಡಿದೆ. , ಭರವಸೆಗಳನ್ನು ಈಡೇರಿಸಲಿಲ್ಲ, ಬಂಡಾಯಗಾರರ ಮೇಲೆ ಅನೇಕ ಪ್ರಕರಣಗಳು ದಾಖಲಾಗಿವೆ, ಹಾಗಾಗಿ ಅವರು ಬಿಜೆಪಿಯೊಂದಿಗೆ ಹೋದರೆ ಅವರು ಶುದ್ಧರಾಗುತ್ತಾರೆ, ಅವರು ನಮ್ಮೊಂದಿಗೆ ಇದ್ದರೆ ಅವರು ಜೈಲಿಗೆ ಹೋಗುತ್ತಾರೆ, ಇದು ಸ್ನೇಹದ ಸಂಕೇತವೇ?” ಎಂದು ಠಾಕ್ರೆ ಕೇಳಿದರು.
ಇದನ್ನೂ ಓದಿ:ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್ ಅಭಿಷೇಕ ಮಾಡಿ ಯುವಕರು!
ಒಂದು ವೇಳೆ ಶಿವಸೇನೆಯವರು ಮುಖ್ಯಮಂತ್ರಿಯಾಗುವುದಿದ್ದರೆ ಬಿಜೆಪಿ ಜೊತೆಗೆ ಹೋಗಿ. ಆದರೆ ನೀವು ಅವರೊಂದಿಗೆ ಹೋಗಿ ಉಪ ಮುಖ್ಯಮಂತ್ರಿ ಯಾಗುವುದಾದರೆ ನನಗೆ ಹೇಳಬಹುದಿತ್ತಲ್ಲ. ನಾನೇ ನಿಮ್ಮನ್ನು ಡಿಸಿಎಂ ಮಾಡುತ್ತೇನೆ ಎಂದು ಏಕನಾಥ್ ಶಿಂಧೆಗೆ ನೇರವಾಗಿ ಠಾಕ್ರೆ ಹೇಳಿದರು.
ಈ ಪಕ್ಷವನ್ನು ಮುನ್ನಡೆಸಲು ನಾನು ಶಕ್ತನಲ್ಲ ಎಂದು ಪಕ್ಷದ ಕಾರ್ಯಕರ್ತರಿಗೆ ಅನಿಸಿದರೆ ನಾನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಭಾವನಾತ್ಮಕವಾಗಿ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀರಿನ ಬಾಟಲ್ ಖರೀದಿ ವಿಚಾರಕ್ಕೆ ಜಗಳವಾಡಿದ್ದಕ್ಕೆ ರೈಲಿಂದಲೇ ಹೊರಕ್ಕೆಸೆದರು
ಜೆಇಇ ಮೈನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ; ಹೊಸ ದಾಖಲೆ
ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ
ಫೋರ್ಡ್ ಇಂಡಿಯಾ ಕಂಪನಿಯ ಸನಂದ್ ಸ್ಥಾವರ ಈಗ ಟಾಟಾ ತೆಕ್ಕೆಗೆ
ಹಿಮಾಚಲ ಪ್ರದೇಶ ಚುನಾವಣೆ: ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್; ಕಾಂಗ್ರೆಸ್ ಭರವಸೆ
MUST WATCH
ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?
ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…
ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ
ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ
ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!
ಹೊಸ ಸೇರ್ಪಡೆ
40 ರ ಹರೆಯದಲ್ಲೂ ಕಮಾಲ್: 16 ವರ್ಷಗಳ ನಂತರ ಟಿಟಿ ಸಿಂಗಲ್ಸ್ ಚಿನ್ನ ಗೆದ್ದ ಶರತ್
ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್
ಕಾಂಗ್ರೆಸ್ ಸೇರಲು ನಿರ್ಧರಿಸಿದ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಪುತ್ರ
ನೀರಿನ ಬಾಟಲ್ ಖರೀದಿ ವಿಚಾರಕ್ಕೆ ಜಗಳವಾಡಿದ್ದಕ್ಕೆ ರೈಲಿಂದಲೇ ಹೊರಕ್ಕೆಸೆದರು
ಜೆಇಇ ಮೈನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ; ಹೊಸ ದಾಖಲೆ