‘ಮಹಾರಾಷ್ಟ್ರ ವಿಕಾಸ್ ಆಘಾಢಿ’ಗೆ ಹೊಸ ನಾಯಕ ‘ಉದ್ಭವ’;ನ.28ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ಉದ್ಭವ ಠಾಕ್ರೆ ಪ್ರಮಾಣವಚನ ಸಮಾರಂಭಕ್ಕೆ ಮೋದಿ, ಶಾ ಅವರಿಗೂ ಆಮಂತ್ರಣ!
Team Udayavani, Nov 26, 2019, 9:42 PM IST
ಮುಂಬಯಿ: ಕಳೆದೊಂದು ತಿಂಗಳಿಂದ ಮಹಾರಾಷ್ಟ್ರದಲ್ಲಿ ಎದ್ದಿದ್ದ ರಾಜಕೀಯ ಅನಿಶ್ವಿತತೆ ಮತ್ತು ವಿಪ್ಲವಗಳು ಅಂತ್ಯಕಾಣುವ ಲಕ್ಷಣಗಳು ಗೋಚರಿಸಿವೆ. ಬಹುಮತ ಕೊರತೆಯ ಕಾರಣದಿಂದ ವಿಶ್ವಾಸಮತ ಯಾಚನೆಗೂ ಒಂದು ದಿನ ಮೊದಲೇ ದೇವೇಂದ್ರ ಫಡ್ನವೀಸ್ ಅವರು ಮಂಗಳವಾರದಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ನೂತನ ಮೈತ್ರಿಯ ಉದಯವಾಗಿದ್ದು ಶಿವಸೇನೆ, ಎನ್.ಸಿ.ಪಿ. ಕಾಂಗ್ರೆಸ್ ಪಕ್ಷಗಳು ಸೇರಿಕೊಂಡು ‘ಮಹಾರಾಷ್ಟ್ರ ವಿಕಾಸ್ ಅಘಾಡಿ’ಯನ್ನು ರೂಪಿಸಿಕೊಂಡಿದ್ದು ಇದರ ನಾಯಕನನ್ನಾಗಿ ಶಿವಸೇನೆಯ ಮುಖ್ಯಸ್ಥ ಉದ್ಭವ್ ಠಾಕ್ರೆ ಅವರನ್ನು ಸರ್ವಾನುಮತದಿಂದ ಆರಿಸಿದ್ದಾರೆ. ಇದರಿಂದ ಮಹಾರಾಷ್ಟ್ರದಲ್ಲಿ ಶಿವ ಸೈನಿಕನೊಬ್ಬ ಮುಖ್ಯಮಂತ್ರಿಯಾಗುವುದಕ್ಕೆ ಹಾದಿ ಸುಗಮಗೊಂಡಂತಾಗಿದೆ.
ನವಂಬರ್ 28ರ ಗುರುವಾರ ಸಾಯಂಕಾಲ 05 ಗಂಟೆಗೆ ಉದ್ಭವ್ ಠಾಕ್ರೆ ಅವರು ಮಹಾರಾಷ್ಟ್ರದ ಹದಿನಾಲ್ಕನೇ ವಿಧಾನಸಭೆಯ 19ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಲ್ಲಿಗೆ ಶಿವ ಸೈನಿಕನೊಬ್ಬ ಮಹಾರಾಷ್ಟ್ರದ ಮುಖ್ಯಮಂತ್ರಿ ಪದವಿಯನ್ನು ಅಲಂಕರಿಸಬೇಕೇಂಬ ಭಾಳಾ ಸಾಹೇಬ್ ಠಾಕ್ರೆ ಅವರ ಮಹದಾಸೆ ಪೂರ್ಣಗೊಂಡಂತಾಗುತ್ತದೆ. ನಗರದ ಶಿವಾಜಿ ಪಾರ್ಕ್ ನಲ್ಲಿ ಈ ಪ್ರಮಾಣವಚನ ಸಮಾರಂಭ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ