ಸಂಪೂರ್ಣ ಬಹುಮತದೊಂದಿಗೆ ಶೀಘ್ರದಲ್ಲೇ ಅಧಿವೇಶನ ಕರೆಯುತ್ತೇವೆ: ಅಶೋಕ್ ಗೆಹ್ಲೋಟ್
Team Udayavani, Jul 24, 2020, 11:26 AM IST
ಜೈಪುರ: ರಾಜಸ್ಥಾನದಲ್ಲಿ ರಾಜಕೀಯ ಅಸ್ಥಿರತೆ ಮುಂದುವರಿದಿದೆ. ಈ ನಡುವೆ ನಮಗೆ ಸಂಪೂರ್ಣ ಬಹುಮತವಿದೆ. ಆದಷ್ಟು ಶೀಘ್ರ ನಾವು ಅಧಿವೇಶನ ಕರೆಯುತ್ತೇವೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಭಿಪ್ರಾಯ ಪಟ್ಟಿದ್ದಾರೆ.
ನಮ್ಮೆಲ್ಲಾ ಕಾಂಗ್ರೆಸ್ ಶಾಸಕರು ಒಂದಾಗಿದ್ದೇವೆ. ಶೀಘ್ರ ಅಧಿವೇಶನ ಕರೆದು, ನಾವು ಬಹುಮತ ಸಾಬೀತು ಪಡಿಸಲಿದ್ದೇವೆ ಎಂದು ಗೆಹ್ಲೋಟ್ ಹೇಳಿದ್ದಾರೆ.
ಡಿಸಿಎಂ ಆಗಿದ್ದ ಸಚಿನ್ ಪೈಲಟ್ ಸರ್ಕಾರದ ವಿರುದ್ಧ ತಿರುಗಿ ನಿಂತ ನಂತರ ರಾಜಕೀಯ ಅಸ್ಥಿರತೆ ಎದುರಾಗಿತ್ತು. ಸಚಿನ್ ಪೈಲಟ್ ಅವರನ್ನು ಡಿಸಿಎಂ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಈ ಮಧ್ಯೆ ಸ್ಪೀಕರ್ ಸಚಿನ್ ಪೈಲಟ್ ಮತ್ತು ಬೆಂಬಲಿಗ ಶಾಸಕರಿಗೆ ಅನರ್ಹತೆಯ ನೋಟಿಸ್ ನೀಡಿದ್ದರು. ಈ ವಿಚಾರ ಈಗ ಕೋರ್ಟ್ ಮೆಟ್ಟಿಲೇರಿದೆ.
ಸಚಿನ್ ಪೈಲಟ್ ಬೆಂಬಲಿತ ಶಾಸಕರು ಇಲ್ಲದ ಹೊರತಾಗಿಯೂ ವಿಶ್ವಾಸಮತ ಯಾಚನೆಗೆ ನಮಗೆ ಅಗತ್ಯವಾದ ಸಂಖ್ಯಾಬಲ ಇದೆ. ಹೀಗಾಗಿ ಸೂಕ್ತ ಸಮಯದಲ್ಲಿ ಅಧಿವೇಶನ ಕರೆಯುತ್ತೇವೆ. ಅಧಿವೇಶನ ಕರೆದಾಗ ಭಿನ್ನಮತೀಯ ಶಾಸಕರೂ ಸಹ ಪಾಲ್ಗೊಳ್ಳಲಿದ್ದಾರೆ”ಸಿಎಂ ಗೆಹ್ಲೋಟ್ ಎಂದು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ