‘ಚುನಾವಣಾ ತಂತ್ರಗಾರಿಕೆ’ಗೆ ಗುಡ್ ಬೈ ಹೇಳಿದ ಪ್ರಶಾಂತ್ ಕಿಶೋರ್
Team Udayavani, May 2, 2021, 4:20 PM IST
ಪಶ್ಚಿಮ ಬಂಗಾಳ : ರಾಜಕೀಯ ತಜ್ಞ ಹಾಗೂ ಅಭಿನವ ಚಾಣಕ್ಯ ಪ್ರಶಾಂತ್ ಕಿಶೋರ್ ರಾಜಕೀಯ ತಂತ್ರಗಾರಿಕೆ ಕಾರ್ಯಕ್ಕೆ ಗುಡ್ ಬೈ ಹೇಳಿದ್ದಾರೆ.
ಇಂದು ಪ್ರಕಟಗೊಂಡ ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆಯ ಫಲಿತಾಂಶದಲ್ಲಿ ಟಿಎಂಸಿ ಪಕ್ಷಕ್ಕೆ ಅಭೂತಪೂರ್ವ ಗೆಲುವು ಲಭಿಸಿದೆ. ಈ ಚುನಾವಣೆಯಲ್ಲಿ ಪ್ರಶಾಂತ್ ಅವರು ಟಿಎಂಸಿ ಪರವಾಗಿ ಕೆಲಸ ಮಾಡಿದ್ದಾರೆ. ಬಂಗಾಳದಲ್ಲಿ ದೀದಿ ಗೆಲುವಿಗೆ ರಣತಂತ್ರ ಹೆಣೆದ ಪ್ರಶಾಂತ್, ಇದೀಗ ಚುನಾವಣಾ ತಂತ್ರಗಾರಿಕೆಗೆ ಖಾಯಂ ಆಗಿ ಫುಲ್ ಸ್ಟಾಪ್ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಚುನಾವಣೆಗೆ ಮತದಾನ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಈ ಬಗ್ಗೆ ಮಾತನಾಡಿದ್ದ ಪ್ರಶಾಂತ್, ಒಂದು ವೇಳೆ ಬಿಜೆಪಿ 100 ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತಂತ್ರಗಾರಿಕೆಯಿಂದ ನಿವೃತ್ತಿ ಪಡೆಯುವುದಾಗಿ ಸವಾಲು ಹಾಕಿದ್ದರು. ಇಂದು ಪ್ರಕಟಗೊಂಡಿರುವ ಫಲಿತಾಂಶದಲ್ಲಿ ಬಿಜೆಪಿ 100 ಸ್ಥಾನಗಳಲ್ಲಿ ಪಡೆದಿಲ್ಲ. ಅದಾಗ್ಯೂ ಕೂಡ ಪ್ರಶಾಂತ್ ಅವರು ನಿವೃತ್ತಿ ಘೋಷಿಸಿದ್ದಾರೆ.
ರಾಷ್ಟ್ರೀಯ ಮಾಧ್ಯಮವೊಂದರಲ್ಲಿ ತಮ್ಮ ನಿಲುವು ಪ್ರಕಟಿಸಿರುವ ಪ್ರಶಾಂತ್ ಅವರು, ಈ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳನ್ನು ಗೆಲ್ಲುತ್ತೆ, ನೀವು ನಿವೃತ್ತಿ ನೀಡಬೇಕಾಗುತ್ತದೆ ಎಂದು ಕೆಲವರು ನನ್ನನ್ನು ಟ್ರೋಲ್ ಮಾಡಿದ್ದರು. ಆದರೆ, ಅಂತಿಮವಾಗಿ ನಮ್ಮ ಪಕ್ಷ ( ಟಿಎಂಸಿ) ಗೆಲುವು ಪಡೆದಿದೆ. ಬಿಜೆಪಿ ನೂರು ಸ್ಥಾನಗಳನ್ನು ಪಡೆಯುವಲ್ಲಿ ವಿಫಲವಾಗಿದೆ. ನಾನು ಕೆಲಸ ಮಾಡಿದ ಪಕ್ಷ ಗೆಲುವು ಪಡೆದರೂ ಕೂಡ ನಿವೃತ್ತಿ ಪಡೆಯುತ್ತಿದ್ದೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್