ಮಕ್ಕಳ ಕಳ್ಳರೆಂದು ಚಚ್ಚಿ ಕೊಂದ ಪ್ರಕರಣ: ತ್ವರಿತ ವಿಚಾರಣೆ ಭರವಸೆ
Team Udayavani, Jun 20, 2018, 5:34 PM IST
ಗುವಾಹಟಿ : ಅಸ್ಸಾಮ್ ನ ಕಾರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಮಕ್ಕಳ ಕಳ್ಳರೆಂದು ಶಂಕಿಸಿದ ಉದ್ರಿಕ್ತ ಗ್ರಾಮಸ್ಥರು ಇಬ್ಬರನ್ನು ಚಚ್ಚಿ ಸಾಯಿಸಿದ ಪ್ರಕರಣವನ್ನು ತ್ವರಿತ ವಿಚಾರಣೆ ಮೂಲಕ ಇತ್ಯರ್ಥಪಡಿಸುವಂತೆ ತಾನು ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಮನವಿ ಮಾಡಿಕೊಳ್ಳುವುದಾಗಿ ಮೃತರ ಹೆತ್ತವರಿಗೆ ಅಸ್ಸಾಂ ಮುಖ್ಯಮಂತ್ರಿ ಶರಬಾನಂದ ಸೋನೋವಾಲ್ ಭರವಸೆ ನೀಡಿದ್ದಾರೆ.
ಕಾರ್ಬಿ ಆಂಗ್ಲಾಂಗ್ ಜಿಲ್ಲೆಯ ಪಂಜೂರಿ ಎಂಬಲ್ಲಿ ಉದ್ರಿಕ್ತ ಗ್ರಾಮಸ್ಥರ ಗುಂಪೊಂದು ವಾಹನವೊಂದನ್ನು ತಡೆದು ಅದರೊಳಗಿದ್ದ 29ರ ಹರೆಯದ ನಿಲೋತ್ಪಲ ದಾಸ್ ಮತ್ತು 30ರ ಹರೆಯದ ಅಭಿಜೀತ್ ನಾಥ್ ಎಂಬವರನ್ನು ಹೊರಗೆಳೆದು ಮಕ್ಕಳ ಕಳ್ಳರೆಂದು ಶಂಕಿಸಿ ಚಚ್ಚಿ ಸಾಯಿಸಿತ್ತು.
ಮೃತರ ತಂದೆ ಅಜಿತ್ ಕುಮಾರ್ ನಾಥ್ ಮತ್ತು ಗೋಪಾಲ ಚಂದ್ರ ದಾಸ್ ಅವರು ನಿನ್ನೆ ಮಂಗಳವಾರ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿಯೊಂದನ್ನು ಅರ್ಪಿಸಿ ತಪ್ಪುಗಾರರಿಗೆ ಗರಿಷ್ಠ ಶಿಕ್ಷೆಯನ್ನು ವಿಧಿಸುವಂತೆ ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶ ಪ್ರವಾಸೋದ್ಯಮ ಕೈಗೆತ್ತಿಕೊಳ್ಳಲು ಇಸ್ರೋ ಅಧ್ಯಯನ: ಕೇಂದ್ರ ಸರ್ಕಾರ
ವಂದನಾ ನಿರ್ಣಯ; ಲೋಕಸಭೆಯಲ್ಲಿ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ ಪ್ರಧಾನಿ ಮೋದಿ
ಭಾರತದ ಪ್ರದೇಶದೊಳಗೆ ನುಸುಳಿಬಂದ ಪಾಕ್ ಡ್ರೋನನ್ನು ಹೊಡೆದುರುಳಿಸಿದ ಬಿಎಸ್ಎಫ್
ಸ್ಮೃತಿ ಇರಾನಿ ಮಗಳು ಶಾನೆಲ್ಲೆ ಇರಾನಿಯ ವಿವಾಹ : ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಭಾರತ,ಜಪಾನ್ ಮೇಲೂ ಚೀನೀ ಬಲೂನ್ ಹಾರಾಟ : ವಾಷಿಂಗ್ಟನ್ ಪೋಸ್ಟ್ನಿಂದ ಆತಂಕಕಾರಿ ವರದಿ
MUST WATCH
ಹೊಸ ಸೇರ್ಪಡೆ
ಕ್ಷೇತ್ರದ ಮತದಾರರು ನನ್ನ ಜೊತೆ ಇದ್ದಾರೆ, ಹೆದರುವ ಪ್ರಶ್ನೆಯೇ ಇಲ್ಲ: ಶಾಸಕ ಮುನವಳ್ಳಿ
ಚಿಕ್ಕೋಡಿ: ಸಂಬಂಧಿಯನ್ನೇ ಕೊಲೆಗೈದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಚಾರ್ಮಾಡಿ ಘಾಟ್: ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ
ಮರೆಯಾದ ಯಕ್ಷಗಾನ ರಂಗದ ಪರಿಪೂರ್ಣ ಪೋಷಕ ಪಾತ್ರಧಾರಿ ಜಂಬೂರು ರಾಮಚಂದ್ರ ಶಾನುಭೋಗ್
ವ್ಯಾಲೆಂಟೈನ್ಸ್ ಡೇ ಬದಲು ಹಸುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಿ: ಪತ್ರ ವೈರಲ್