ಮಕ್ಕಳ ಕಳ್ಳರೆಂದು ಚಚ್ಚಿ ಕೊಂದ ಪ್ರಕರಣ: ತ್ವರಿತ ವಿಚಾರಣೆ ಭರವಸೆ
Team Udayavani, Jun 20, 2018, 5:34 PM IST
ಗುವಾಹಟಿ : ಅಸ್ಸಾಮ್ ನ ಕಾರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಮಕ್ಕಳ ಕಳ್ಳರೆಂದು ಶಂಕಿಸಿದ ಉದ್ರಿಕ್ತ ಗ್ರಾಮಸ್ಥರು ಇಬ್ಬರನ್ನು ಚಚ್ಚಿ ಸಾಯಿಸಿದ ಪ್ರಕರಣವನ್ನು ತ್ವರಿತ ವಿಚಾರಣೆ ಮೂಲಕ ಇತ್ಯರ್ಥಪಡಿಸುವಂತೆ ತಾನು ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಮನವಿ ಮಾಡಿಕೊಳ್ಳುವುದಾಗಿ ಮೃತರ ಹೆತ್ತವರಿಗೆ ಅಸ್ಸಾಂ ಮುಖ್ಯಮಂತ್ರಿ ಶರಬಾನಂದ ಸೋನೋವಾಲ್ ಭರವಸೆ ನೀಡಿದ್ದಾರೆ.
ಕಾರ್ಬಿ ಆಂಗ್ಲಾಂಗ್ ಜಿಲ್ಲೆಯ ಪಂಜೂರಿ ಎಂಬಲ್ಲಿ ಉದ್ರಿಕ್ತ ಗ್ರಾಮಸ್ಥರ ಗುಂಪೊಂದು ವಾಹನವೊಂದನ್ನು ತಡೆದು ಅದರೊಳಗಿದ್ದ 29ರ ಹರೆಯದ ನಿಲೋತ್ಪಲ ದಾಸ್ ಮತ್ತು 30ರ ಹರೆಯದ ಅಭಿಜೀತ್ ನಾಥ್ ಎಂಬವರನ್ನು ಹೊರಗೆಳೆದು ಮಕ್ಕಳ ಕಳ್ಳರೆಂದು ಶಂಕಿಸಿ ಚಚ್ಚಿ ಸಾಯಿಸಿತ್ತು.
ಮೃತರ ತಂದೆ ಅಜಿತ್ ಕುಮಾರ್ ನಾಥ್ ಮತ್ತು ಗೋಪಾಲ ಚಂದ್ರ ದಾಸ್ ಅವರು ನಿನ್ನೆ ಮಂಗಳವಾರ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿಯೊಂದನ್ನು ಅರ್ಪಿಸಿ ತಪ್ಪುಗಾರರಿಗೆ ಗರಿಷ್ಠ ಶಿಕ್ಷೆಯನ್ನು ವಿಧಿಸುವಂತೆ ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ