“ತಂದೆಯ ಹತ್ಯೆಗೈದವರನ್ನು ಗಲ್ಲಿಗೇರಿಸುವವರೆಗೆ ಚಪ್ಪಲಿ ತೊಡುವುದಿಲ್ಲ’
ರಾಜಸ್ಥಾನದ ಕನ್ಹಯ್ಯಲಾಲ್ ಪುತ್ರನ ಶಪಥ
Team Udayavani, Sep 16, 2022, 8:30 PM IST
ಉದಯ್ಪುರ: “ನನ್ನ ತಂದೆಯನ್ನು ಹತ್ಯೆ ಮಾಡಿದ ಆರೋಪಿಗಳನ್ನು ಗಲ್ಲಿಗೇರಿಸುವವರೆಗೆ ನಾನು ಕಾಲಿಗೆ ಚಪ್ಪಲಿ, ಶೂ ತೊಡುವುದಿಲ್ಲ,’ ಎಂದು ರಾಜಸ್ಥಾನದ ಉದಯಪುರದಲ್ಲಿ ಜೂನ್ನಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಮಗ ಪ್ರತಿಜ್ಞೆ ಮಾಡಿದ್ದಾನೆ.
“ನನ್ನ ತಂದೆ ಹತ್ಯೆಯಾದ ದಿನದಿಂದಲೂ ನಾನು ಬರಿಗಾಲಿನಲ್ಲಿ ತಿರುಗಾಡುತ್ತಿದ್ದೇನೆ. ಅಪರಾಧಿಗಳನ್ನು ನೇಣಿಗೆ ಹಾಕುವವರೆಗೂ ಈ ಶಪಥ ಮುಂದುವರಿಯಲಿದೆ. ಈಗಲೂ ಸಹ ಆ ಘಟನೆಯಿಂದ ಹೊರಬರಲು ನನಗೆ ಸಾಧ್ಯವಾಗುತ್ತಿಲ್ಲ,’ ಎಂದು ಕನ್ಹಯ್ಯಲಾಲ್ ಪುತ್ರ ಯಶ್ ದುಃಖ ತೋಡಿಕೊಂಡಿದ್ದಾನೆ.
ಬಿಜೆಪಿ ವಕ್ತಾರೆ ನೂಪುರ್ ಶರ್ಮ ಅವರ ಹೇಳಿಕೆಯನ್ನು ಬೆಂಬಲಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಕ್ಕೆ 2022ರ ಜೂ.28ರಂದು ರಿಯಾಜ್ ಮತ್ತು ಗೌಸ್ ಮೊಹಮ್ಮದ್ ಎಂಬಿಬ್ಬರು ದುಷ್ಕರ್ಮಿಗಳು ಟೈಲರ್ ಕನ್ಹಯ್ಯಲಾಲ್ ಅವರ ಮಳಿಗೆಗೆ ನುಗ್ಗಿ ಶಿರಚ್ಛೇದ ಮಾಡಿ, ಹತ್ಯೆಗೈದಿದ್ದರು.
ಎನ್ಐಎ ಈ ಪ್ರಕರಣದ ತನಿಖೆ ನಡೆಸಿದ್ದು, ಪ್ರಕರಣ ಸಂಬಂಧ ಎಂಟು ಮಂದಿಯನ್ನು ಬಂಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…