ಪಾಕಿಸ್ಥಾನಕ್ಕೆ ಜಲಾಘಾತ
Team Udayavani, Feb 22, 2019, 12:30 AM IST
ಹೊಸದಿಲ್ಲಿ: ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ಥಾನಕ್ಕೆ ಭಾರತ ಈಗ ಜಲಾಘಾತ ನೀಡಲು ಸಜ್ಜಾಗಿದೆ. ಪುಲ್ವಾಮಾದಲ್ಲಿನ ಸಿಆರ್ಪಿಎಫ್ ಯೋಧರ ಮೇಲಿನ ದಾಳಿ ಅನಂತರ ಎಲ್ಲ ಕೋನಗಳಿಂದಲೂ ಪಾಕಿಸ್ಥಾನವನ್ನು ಕಟ್ಟಿಹಾಕಲು ಯತ್ನಿಸುತ್ತಿರುವ ಕೇಂದ್ರ ಸರಕಾರ, ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳ ನೀರನ್ನು ಆ ದೇಶಕ್ಕೆ ಹರಿಯಲು ಬಿಡದೆ, ಭಾರತದಲ್ಲೇ ಬಳಸಲು ನಿರ್ಧರಿಸಿದೆ. ಈ ಸಂಬಂಧ ಸ್ವತಃ ನಿತಿನ್ ಗಡ್ಕರಿ ಅವರೇ ಘೋಷಣೆ ಮಾಡಿದ್ದು ಪಾಕ್ಗೆ ದೊಡ್ಡ ಆಘಾತ ನೀಡಿದ್ದಾರೆ.
ಪಾಕಿಸ್ಥಾನಕ್ಕೆ ಹರಿಯುವ ನೀರಿನ ಪ್ರಮಾಣ ನಿಯಂತ್ರಿಸಿ ಅದನ್ನು ಭಾರತವೇ ಬಳಸಿಕೊಳ್ಳಲಿದೆ. ಕಣಿವೆ ರಾಜ್ಯದ ಪೂರ್ವ ಭಾಗದಲ್ಲಿ ಹರಿಯುತ್ತಿರುವ ನದಿ ನೀರನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ಗ ನೀಡಲಾಗುತ್ತದೆ. ಜತೆಗೆ ಯಮುನಾ ನದಿಗೆ ಅದನ್ನು ಹರಿಯುವಂತೆ ಮಾಡ ಲಾಗುತ್ತದೆ ಎಂದು ಹೇಳಿದ್ದಾರೆ.
ಇದಷ್ಟೇ ಅಲ್ಲ, ಪಂಜಾಬ್ನ ಪಠಾಣ್ಕೋಟ್ ಜಿಲ್ಲೆಯಲ್ಲಿ ರಾವಿ ನದಿಗೆ ಶಾಪುರ್-ಖಾಂಡಿಯಲ್ಲಿ ಅಣೆಕಟ್ಟು ಕಟ್ಟುವ ಕೆಲಸ ಶುರುವಾಗಿದೆ. ಉಳಿಯುವ ಹೆಚ್ಚುವರಿ ಪ್ರಮಾಣದ ನೀರನ್ನು ರಾವಿ-ಬಿಯಾಸ್ನ 2ನೇ ಲಿಂಕ್ ಮೂಲಕ ಇತರ ರಾಜ್ಯಗಳಿಗೆ ನೀಡಲಾಗುತ್ತದೆ ಎಂದಿದ್ದಾರೆ. ಅದಕ್ಕಾಗಿ 1960ರಲ್ಲಿ ಭಾರತ ಮತ್ತು ಪಾಕಿಸ್ಥಾನ ಸಿಂಧೂ ನದಿ ನೀರಿನ ಹಂಚಿಕೆಗೆ ವಿಚಾರಕ್ಕಾಗಿ ಮಾಡಲಾಗಿರುವ ಒಪ್ಪಂದವನ್ನು ಮರು ಪರಿಶೀಲಿಸಲೂ ಚಿಂತನೆ ನಡೆಸಲಾಗುತ್ತಿದೆ ಎಂದು ಗಡ್ಕರಿ ಹೇಳಿದ್ದಾರೆ.
ಏನಿದು ಸಿಂಧೂ ಒಪ್ಪಂದ?
ಭಾರತದ ಪ್ರಧಾನಿಯಾಗಿದ್ದ ಜವಾಹರ್ಲಾಲ್ ನೆಹರೂ ಮತ್ತು ಪಾಕಿಸ್ಥಾನ ಅಧ್ಯಕ್ಷರಾಗಿದ್ದ ಅಯೂಬ್ ಖಾನ್ 1960ರ ಸೆ. 19ರಂದು ಸಿಂಧೂ ನದಿ ಒಪ್ಪಂದಕ್ಕೆ ಸಹಿ ಹಾಕಿದ್ದರು. ಈ ಒಪ್ಪಂದಕ್ಕೆ ವಿಶ್ವಬ್ಯಾಂಕ್ ಮಧ್ಯಸ್ಥಿಕೆ ವಹಿಸಿತ್ತು. ಇದು ಸಿಂಧೂ ನದಿಯಷ್ಟೇ ಅಲ್ಲ, ಸಟ್ಲೆàಜ್, ಬಿಯಾಸ್, ರಾವಿ, ಝೇಲಂ, ಚೆನಾಬ್ ನದಿಗಳನ್ನೂ ಒಳ ಗೊಂಡಿದೆ. ಒಪ್ಪಂದದ ಪ್ರಕಾರ ಪೂರ್ವ ಭಾಗದ ನದಿಗಳಾದ ಸಟ್ಲೆàಜ್, ಬಿಯಾಸ್ ಮತ್ತು ರಾವಿ ನೀರು ಭಾರತ ಬಳಸಿಕೊಳ್ಳಬಹುದು. ಹಾಗೆಯೇ ಪಶ್ಚಿಮ ನದಿಗಳಾದ ಝೇಲಂ, ಚೆನಾಬ್ ಮತ್ತು ಸಿಂಧೂ ನದಿಗಳ ನೀರನ್ನು ಭಾರತವು ಪಾಕಿಸ್ಥಾನಕ್ಕೆ ಬಿಡಬೇಕು. ಈ ನದಿಗಳ ನೀರನ್ನು ವಿದ್ಯುತ್ ಉತ್ಪಾದನೆ, ಕೃಷಿ ಹಾಗೂ ಸಂಗ್ರಹಕ್ಕೆ ಬಳಸಬಹುದು ಎಂಬುದು ಒಪ್ಪಂದದ ಅಂಶ.
ಮತ್ತೆ ದಾಳಿಗೆ ಜೈಶ್ ಸಂಚು?
ಪುಲ್ವಾಮಾದಲ್ಲಿನ ಅಟ್ಟಹಾಸದ ಅನಂತರ ರಕ್ತ ಪಿಪಾಸು ಸಂಘಟನೆ ಜೈಶ್-ಎ-ಮೊಹಮ್ಮದ್ ಸಂಘಟನೆ ಮತ್ತಷ್ಟು ಭೀಕರ ದಾಳಿ ನಡೆಸಲು ಸಂಚು ರೂಪಿಸಿದೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ. ಫೆ.14-16ರ ನಡುವೆ ಕಾಶ್ಮೀರ ಮತ್ತು ಪಾಕಿಸ್ಥಾನದಲ್ಲಿರುವ ಉಗ್ರ ಸಂಘಟನೆಯ ನಾಯಕರು ನಡೆಸಿದ ರಹಸ್ಯ ಸಂಭಾಷಣೆಯನ್ನು ಛೇದಿಸಿದ ಕೇಂದ್ರ ಗುಪ್ತಚರ ಸಂಸ್ಥೆ ಈ ಅಂಶ ದೃಢಪಡಿಸಿದೆ. ಮತ್ತೂಂದು ದಾಳಿಯ ಮೂಲಕ ಭಾರೀ ಹಾನಿ ನಡೆಸುವ ಘಾತಕ ಯೋಜನೆಯೂ ಈಗ ಬಯಲಾಗಿದೆ. ಜಮ್ಮು ಮತ್ತು ಕಾಶ್ಮೀರ ಅಥವಾ ಆ ರಾಜ್ಯದ ಹೊರ ಭಾಗದಲ್ಲಿ ಈ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಕೃತ್ಯ ನಡೆಸುವುದಕ್ಕೆ ಮೂವರು ಬಾಂಬರ್ಗಳು ಸೇರಿದಂತೆ 21 ಮಂದಿ ಡಿಸೆಂಬರ್ನಲ್ಲಿಯೇ ಕಾಶ್ಮೀರಕ್ಕೆ ನುಸುಳಿದ್ದಾರೆ. ಇದರ ಜತೆಗೆ ಪುಲ್ವಾಮಾ ಘಟನೆಗೆ ಸಂಬಂಧಿಸಿದಂತೆ ಉಗ್ರ ಸಂಘಟನೆ ಇನ್ನೂ ಭೀಕರ ವಿಡಿಯೋಗಳನ್ನು ಬಿಡುಗಡೆ ಮಾಡಲಿದೆ ಎಂದು ಹೇಳಲಾಗಿದೆ.
ಶೂಟರ್ಗಳಿಗೆ ವೀಸಾ ಇಲ್ಲ
ರಾಜತಾಂತ್ರಿಕ ಮಟ್ಟವಷ್ಟೇ ಅಲ್ಲ, ಕ್ರೀಡಾ ವಲಯದಲ್ಲೂ ಪಾಕಿಸ್ಥಾನಕ್ಕೆ ಶಾಕ್ ನೀಡ ಲಾಗಿದೆ. ದಿಲ್ಲಿಯಲ್ಲಿ ಶುಕ್ರವಾರದಿಂದ ಆರಂಭ ವಾಗಲಿರುವ ವಿಶ್ವಕಪ್ ಶೂಟಿಂಗ್ನಲ್ಲಿ ಪಾಲ್ಗೊಳ್ಳ ಬೇಕಿದ್ದ ಪಾಕ್ನ ಶೂಟರ್ಗಳಿಗೆ ವೀಸಾ ನಿರಾಕರಿಸಲಾಗಿದೆ. ಭದ್ರತೆ ಕಾರಣವೊಡ್ಡಿ ವೀಸಾ ನೀಡದಿರುವ ನಿರ್ಧಾರಕ್ಕೆ ಕೇಂದ್ರ ಸರಕಾರ ಬಂದಿದೆ.
ಜೆಯುಡಿಗೆ ಪಾಕ್ ನಿಷೇಧ
ಪುಲ್ವಾಮಾ ದಾಳಿ ಬಳಿಕ ಜಾಗತಿಕ ಮಟ್ಟದಲ್ಲಿ ಪಾಕಿಸ್ಥಾನದ ಮೇಲೆ ಬರುತ್ತಿರುವ ಒತ್ತಡಕ್ಕೆ ಮಣಿದಿರುವ ಪ್ರಧಾನಿ ಇಮ್ರಾನ್ ಖಾನ್, ಹಫೀಜ್ ಸಯೀದ್ ನೇತೃತ್ವದ ಜಮಾತ್ ಉದ್ ದಾವಾ(ಜೆಯುಡಿ) ಮತ್ತು ಇದರ ದತ್ತಿ ಸಂಸ್ಥೆ ಫಲಾಹ್ ಇ ಇನ್ಸಾನಿಯತ್ಗಳನ್ನು ನಿಷೇಧಿಸಿದ್ದಾರೆ. ಗುರುವಾರ ನಡೆದ ರಾಷ್ಟ್ರೀಯ ಭದ್ರತಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 2008ರ ಮುಂಬಯಿ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಯೀದ್ನನ್ನು ಅಮೆರಿಕ ಜಾಗತಿಕ ಉಗ್ರ ಎಂದಿದ್ದರೆ, ಜೆಯುಡಿಯನ್ನು ವಿಶ್ವಸಂಸ್ಥೆ ಭಯೋತ್ಪಾದನಾ ಸಂಘಟನೆ ಎಂದು ಘೋಷಿಸಿತ್ತು. ಪಾಕ್ನಲ್ಲೂ ಸಯೀದ್ನನ್ನು ಗೃಹಬಂಧನದಲ್ಲಿ ಇಡಲಾಗಿತ್ತಾದರೂ 2017ರಲ್ಲಿ ಬಿಡುಗಡೆ ಮಾಡಲಾಗಿತ್ತು. ಉಗ್ರ ಚಟುವಟಿಕೆ ಹಿನ್ನೆಲೆಯಲ್ಲಿ ಇವುಗಳ ಮೇಲೆ ಪಾಕ್ ನಿಗಾ ವಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ