ಅನುಮಾನವಿದ್ದರೆ ಲಸಿಕೆಯ ಮೊದಲ ಪ್ರಯೋಗ ನನ್ನ ಮೇಲೇ ನಡೆಯಲಿ: ಹರ್ಷವರ್ಧನ್
ಲಸಿಕೆಗಳನ್ನು ಮಾನವನ ಮೇಲೆ ಪ್ರಯೋಗಿಸುವ ಪ್ರಕ್ರಿಯೆಯನ್ನು ಸರ್ಕಾರ ಅತ್ಯಂತ ಎಚ್ಚರಿಕೆಯಿಂದ ನಡೆಸುತ್ತಿದೆ.
Team Udayavani, Sep 14, 2020, 4:35 PM IST
ನವದೆಹಲಿ: “ಮುಂದಿನ ವರ್ಷದ ಆರಂಭದಲ್ಲಿ ಕೋವಿಡ್ ಲಸಿಕೆ ಲಭ್ಯವಾಗುವ ಸಾಧ್ಯತೆ ಅಧಿಕವಾಗಿದ್ದು, ಯಾರಿಗಾದರೂ ಅದರ ಸುರಕ್ಷತೆಯ ಬಗ್ಗೆ ಅನುಮಾನವಿದ್ದರೆ ಆ ಲಸಿಕೆಯ ಪ್ರಯೋಗಕ್ಕೆ ಮೊದಲು ನಾನೇ ಒಳಗಾಗುತ್ತೇನೆ’ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.
ಭಾನುವಾರ ತಮ್ಮ ಸಾಮಾಜಿಕ ಮಾಧ್ಯಮದ ಫಾಲೋವರ್ಗಳೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಅವರು, “”ಲಸಿಕೆ ಬಿಡುಗಡೆಗೆ ಇನ್ನೂ ಯಾವುದೇ ದಿನಾಂಕ ನಿಗದಿಯಾಗಿಲ್ಲ.
2021ರ ಮೊದಲ ತ್ತೈಮಾಸಿಕದಲ್ಲಿ ಅದು ಲಭ್ಯವಾಗುವ ಸಾಧ್ಯತೆಯಿದೆ. ಯಾರಿಗೆ ಲಸಿಕೆಯ ಅಗತ್ಯತೆ ಹೆಚ್ಚಿದೆಯೋ, ಅವರಿಗೆ ಮೊದಲು ಲಸಿಕೆ ನೀಡಲಾಗುತ್ತದೆ” ಎಂದೂ ತಿಳಿಸಿದ್ದಾರೆ. “”ಲಸಿಕೆಗಳನ್ನು ಮಾನವನ ಮೇಲೆ ಪ್ರಯೋಗಿಸುವ ಪ್ರಕ್ರಿಯೆಯನ್ನು ಸರ್ಕಾರ ಅತ್ಯಂತ ಎಚ್ಚರಿಕೆಯಿಂದ ನಡೆಸುತ್ತಿದೆ.
ಲಸಿಕೆಯ ಸುರಕ್ಷತೆ, ವೆಚ್ಚ, ಕೋಲ್ಡ್-ಚೈನ್ನ ಅಗತ್ಯತೆ ಬಗ್ಗೆ ನಿರಂತರ ಚರ್ಚೆ ನಡೆದು ನಿರ್ಧಾರ ಕೈಗೊಳ್ಳಲಾಗುತ್ತಿದೆ” ಎಂದೂ ಹರ್ಷವರ್ಧನ್ ಹೇಳಿದ್ದಾರೆ. ಜನರಿಗೆ ಲಸಿಕೆಯ ಸುರಕ್ಷತೆ ಬಗ್ಗೆ ಅನುಮಾನ ಬಂದರೆ, ನಾನೇ ಮೊದಲ ಡೋಸೇಜ್ ಸ್ವೀಕರಿಸುತ್ತೇನೆ ಎಂದೂ ಅವರು ಹೇಳಿದ್ದಾರೆ.
ಆಮ್ಲಜನಕ ಲಭ್ಯವಿರುವಂತೆ ನೋಡಿಕೊಳ್ಳಿ: ಕೇಂದ್ರ ಎಲ್ಲ ಆರೋಗ್ಯ ಕೇಂದ್ರಗಳಲ್ಲೂ ಸಾಕಷ್ಟು ಆಮ್ಲಜನಕದ ಸಿಲಿಂಡರ್ಗಳಿರುವಂತೆ ನೋಡಿಕೊಳ್ಳಿ ಎಂದು
ಕರ್ನಾಟಕ ಸೇರಿದಂತೆ 7 ದೊಡ್ಡ ರಾಜ್ಯಗಳಿಗೆ ಕೇಂದ್ರ ಸರ್ಕಾರ ಭಾನುವಾರ ಸೂಚಿಸಿದೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್, ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ಕೊರೊನಾ ಸೋಂಕಿನ ವ್ಯಾಪಿಸುವಿಕೆ ಅಧಿಕವಾಗಿರುವ ಕಾರಣ ಈ ಸೂಚನೆ ನೀಡಲಾಗಿದೆ.
ಯಾವುದೇ ಆಸ್ಪತ್ರೆಯಲ್ಲೂ ಆಕ್ಸಿಜನ್ಗೆ ಕೊರತೆಯಾಗದಂತೆ ನೋಡಿಕೊಳ್ಳಿ, ರಾಜ್ಯದೊಳಗೆ ಅಥವಾ ಅಂತಾರಾಜ್ಯ ಆಕ್ಸಿಜನ್ ಸಿಲಿಂಡರ್ಗಳ ಸಾಗಾಟಕ್ಕೆ ಅಡ್ಡಿಯಾಗದಂತೆಯೂ ಕ್ರಮ ಕೈಗೊಳ್ಳಿ ಎಂದೂ ಸಲಹೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!