2,000 ರೂ. ನಗದು ದೇಣಿಗೆ ಜಾರಿ ಸಾಧ್ಯವೇ?
Team Udayavani, Aug 22, 2017, 8:50 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ಚುನಾವಣಾ ಸುಧಾರಣಾ ನೀತಿಯಲ್ಲೊಂದಾದ 2,000 ರೂ. ಕ್ಯಾಶ್ ರೂಪದ ದೇಣಿಗೆ ಬಗ್ಗೆ ಕಾನೂನು ಮತ್ತು ಸಿಬಂದಿ ಇಲಾಖೆ ಮೇಲಿನ ಸಂಸದೀಯ ಸಮಿತಿ ಅನುಮಾನ ವ್ಯಕ್ತಪಡಿಸಿದೆ. ಇದು ವಾಸ್ತವತೆಗೆ ಹತ್ತಿರವಾಗಿದೆಯೇ ಎಂದೂ ಈ ಸಮಿತಿ ಪ್ರಶ್ನಿಸಿದೆ. 2,000 ರೂ.ಗಳವರೆಗೆ ನಗದು ರೂಪದಲ್ಲಿ ದೇಣಿಗೆ ನೀಡುವವರ ಗೌಪ್ಯತೆ ಕಾಪಾಡಿಕೊಳ್ಳಲು ಆಗುತ್ತದೆಯೇ ಎಂಬ ಬಗ್ಗೆಯೂ ಸಂದೇಹ ವ್ಯಕ್ತಪಡಿಸಿರುವ ಸಮಿತಿ, ಈ ಬಗ್ಗೆ ಎಲ್ಲ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಪಕ್ಷಗಳಿಗೆ ಪ್ರಶ್ನಾವಳಿಯನ್ನು ಕಳುಹಿಸಿದೆ.
ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಸಂಬಂಧ ಕೇಂದ್ರ ಸರಕಾರ ಕಳೆದ ಬಜೆಟ್ನಲ್ಲಿ ಎಲೆಕ್ಟೋರಲ್ ಬಾಂಡ್ ಅನ್ನು ಪರಿಚಯಿಸಿತ್ತು. ಅಲ್ಲದೆ ನಗದು ರೂಪದಲ್ಲಿ 2,000 ರೂ.ಗಳಿಗಿಂತ ಹೆಚ್ಚಿನ ದೇಣಿಗೆ ನೀಡುವಂತಿಲ್ಲ ಎಂಬ ಪ್ರಸ್ತಾವ ಇಟ್ಟಿತ್ತು. ಈ ಬಗ್ಗೆ ಸಂದೇಹ ವ್ಯಕ್ತಪಡಿಸಿರುವ ಈ ಸಂಸದೀಯ ಸಮಿತಿ, ಸದ್ಯದ ಹಣದುಬ್ಬರಕ್ಕೆ ಹೋಲಿಕೆ ಮಾಡಿದಲ್ಲಿ 2,000ದ ಮಿತಿ ಸಾಲುತ್ತದೆಯೇ ಎಂದು ಪ್ರಶ್ನಿಸಿರುವ ಅದು, ರಾಜಕೀಯ ಪಕ್ಷಗಳಿಂದ ಉತ್ತರ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ