ಮಂದಿರಕ್ಕೆ ಜಾಗ ಕೊಡಲು ಸಿದ್ಧ
Team Udayavani, Jul 14, 2018, 6:00 AM IST
ಲಕ್ನೋ: ಅಯೋಧ್ಯೆ ರಾಮಮಂದಿರ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಲು ಬದ್ಧವಾಗಿರುವ ಶಿಯಾ ವಕ್ಫ್ ಮಂಡಳಿಯು ಮಂದಿರ ನಿರ್ಮಾಣಕ್ಕೆ ಜಾಗ ಬಿಟ್ಟುಕೊಡಲು ಸಿದ್ಧವಿದೆ ಎಂದಿದೆ. ಅಲಹಾಬಾದ್ ಹೈಕೋರ್ಟ್ ಈ ಹಿಂದೆ ತನ್ನ ತೀರ್ಪಿನಲ್ಲಿ ಮುಸ್ಲಿಮರಿಗೆ ನೀಡಿದ ಜಾಗದ ಪೈಕಿ ಮೂರನೇ ಒಂದರಷ್ಟು ಪ್ರದೇಶವನ್ನು ನೀಡಲು ಸಿದ್ಧವಿದ್ದೇವೆ ಎಂದು ಮಂಡಳಿ ಹೇಳಿಕೆ ನೀಡಿದೆ.
ಬಾಬ್ರಿ ಮಸೀದಿಯು ಶಿಯಾ ವಕ್ಫ್ ಮಂಡಳಿಯ ಉಸ್ತುವಾರಿಯಲ್ಲಿದೆ. ಸುನ್ನಿ ವಕ್ಫ್ ಬೋರ್ಡ್ ಹಾಗೂ ಇತರರು ಭಾರತದ ಮುಸ್ಲಿಮರ ಪ್ರತಿನಿಧಿಗಳಲ್ಲ. ಅಯೋಧ್ಯೆಯಲ್ಲಿ ಆ ಪ್ರದೇಶದಲ್ಲಿ ಎಂದಿಗೂ ಮಸೀದಿ ಇರಲಿಲ್ಲ ಹಾಗೂ ಅಲ್ಲಿ ಮಸೀದಿ ನಿರ್ಮಾಣವನ್ನೂ ಮಾಡುವುದಿಲ್ಲ. ಅದು ರಾಮನ ಜನ್ಮಸ್ಥಳ ಮತ್ತು ರಾಮನ ದೇಗುಲ ಮಾತ್ರ ಅಲ್ಲಿ ನಿರ್ಮಾಣವಾಗುತ್ತದೆ ಎಂದು ಶಿಯಾ ಮಂಡಳಿ ಮುಖ್ಯಸ್ಥ ವಸೀಮ್ ರಿಜ್ವಿ ಹೇಳಿದ್ದಾರೆ.
ಇನ್ನೊಂದೆಡೆ ಶಿಯಾ ಮಂಡಳಿ ಈ ವಿಚಾರದಲ್ಲಿ ಮಾತನಾಡುವ ಯಾವ ಅಧಿಕಾರವನ್ನೂ ಹೊಂದಿಲ್ಲ ಎಂದು ಹಿರಿಯ ವಕೀಲ ರಾಜೀವ್ ಧವನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ